AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ ಬ್ರದರ್ಸ್ ಹಿರಿಯ ಸಹೋದರಿ ನಿಧನ: ಅಂತ್ಯಕ್ರಿಯೆಗೆ ಸತೀಶ್ ಗೈರು

ಗೋಕಾಕ್​​​ ನಗರದ ಆಸ್ಪತ್ರೆಯಲ್ಲಿ ಜಾರಕಿಹೊಳಿ ಹಿರಿಯ ಸಹೋದರಿ ಲಗಮವ್ವ ಕೊನೆಯುಸಿರೆಳದಿದ್ದಾರೆ.  ಗೋಕಾಕ್​​ ನಗರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಲಗಮವ್ವ, ಪತಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ಜಾರಕಿಹೊಳಿ ಬ್ರದರ್ಸ್ ಹಿರಿಯ ಸಹೋದರಿ ನಿಧನ: ಅಂತ್ಯಕ್ರಿಯೆಗೆ ಸತೀಶ್ ಗೈರು
ಜಾರಕಿಹೋಳಿ ಸಹೋದರರ ಹಿರಿಯ ಸಹೋದರಿ ನಿಧನ
ಕಿರಣ್ ಹನುಮಂತ್​ ಮಾದಾರ್
|

Updated on:Jun 02, 2023 | 12:56 PM

Share

ಬೆಳಗಾವಿ: ಜಾರಕಿಹೊಳಿ ಸಹೋದರರ ಹಿರಿಯ ಸಹೋದರಿ ಲಗಮವ್ವ(67) ತೀವ್ರ ಹೃದಯಾಘಾತದಿಂದ ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇನ್ನು ಇವರು ಗೋಕಾಕ ನಗರಸಭೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಪತಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಕೆಲವೇ ಹೊತ್ತಿನಲ್ಲಿ ಗೋಕಾಕ ನಗರದ ಕುಂಬಾರ ಗಲ್ಲಿಯ ರುದ್ರಭೂಮಿಯಲ್ಲಿ ಲಗಮವ್ವ ಅವರ ಅಂತ್ಯಕ್ರಿಯೆ ನೆರವೇರಲಿದೆ. ಇಂದು(ಜೂ.2) ಸಚಿವ ಸಂಪುಟ ಸಭೆ ಇರುವುದರಿಂದ ಸತೀಶ್ ಜಾರಕಿಹೊಳಿ ಸಹೋದರಿಯ ಅಂತ್ಯಕ್ರಿಯೆಗೆ ಗೈರಾಗಲಿದ್ದಾರೆ. ಇನ್ನು ಸಹೋದರಿ ಅಕಾಲಿಕ‌ ನಿಧನಕ್ಕೆ ಸಚಿವ ಸತೀಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳತೆ, ಸೌಜನ್ಯತೆಯ ಆಗರವಾಗಿದ್ದ ಸಹೋದರಿ ಬಾಲ್ಯದಿಂದಲೂ ಪ್ರೋತ್ಸಾಹಿಸಿ ಮುನ್ನಡೆಸಿದ್ದಾರೆ. ಅವರ ಮಾರ್ಗದರ್ಶನ ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರವಹಿಸಿದೆ. ನನ್ನ ತಾಯಿ ಸ್ವರೂಪಳಾಗಿದ್ದ ಸಹೋದರಿ ಕಳೆದುಕೊಂಡು ತೀವ್ರ ಆಘಾತವಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ  ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:46 pm, Fri, 2 June 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ