ರಸ್ತೆ ದಾಟಲು ಪರದಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪ, ಅರಣ್ಯಕ್ಕೆ ಶಿಫ್ಟ್​

ಬೆಳಗಾವಿ: ರಸ್ತೆ ದಾಟಲು ಪರದಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಖಾನಾಪುರ ತಾಲೂಕಿನ ಓಲಮನಿ ಗ್ರಾಮದ ಜಾಂಬೋಟಿ-ಜತ್ತ ರಾಜ್ಯ ಹೆದ್ದಾರಿಯಲ್ಲಿ ಕಾಳಿಂಗ ಸರ್ಪವನ್ನು ರಕ್ಷಿಸಲಾಗಿದೆ. ಪ್ರಾಣಿಯೊಂದನ್ನ ನುಂಗಿ ರಸ್ತೆ ದಾಟಲು 15 ಅಡಿ ಉದ್ದದ ಹಾವು ಪರದಾಡುತ್ತಿತ್ತು. ರಸ್ತೆ ಮೇಲೆ ಹಾವನ್ನು ಕಂಡ ಗ್ರಾಮಸ್ಥರು ಸಂಚಾರವನ್ನು ಸ್ಥಗಿತಗೊಳಿಸಿದ್ದರು. ಬಳಿಕ ಉರಗತಜ್ಞ ಭಜರಂಗ ಡುಕರೆ, ನಿಂಗಪ್ಪ ಗುರವರರ ಸಹಾಯದಿಂದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬಳಿಕ ಸುರಕ್ಷಿತವಾಗಿ ಜಾಂಬೋಟಿ ಅರಣ್ಯ […]

ರಸ್ತೆ ದಾಟಲು ಪರದಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪ, ಅರಣ್ಯಕ್ಕೆ ಶಿಫ್ಟ್​
ಸಾಧು ಶ್ರೀನಾಥ್​

Updated on: Dec 26, 2019 | 5:41 PM

ಬೆಳಗಾವಿ: ರಸ್ತೆ ದಾಟಲು ಪರದಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಖಾನಾಪುರ ತಾಲೂಕಿನ ಓಲಮನಿ ಗ್ರಾಮದ ಜಾಂಬೋಟಿ-ಜತ್ತ ರಾಜ್ಯ ಹೆದ್ದಾರಿಯಲ್ಲಿ ಕಾಳಿಂಗ ಸರ್ಪವನ್ನು ರಕ್ಷಿಸಲಾಗಿದೆ.

ಪ್ರಾಣಿಯೊಂದನ್ನ ನುಂಗಿ ರಸ್ತೆ ದಾಟಲು 15 ಅಡಿ ಉದ್ದದ ಹಾವು ಪರದಾಡುತ್ತಿತ್ತು. ರಸ್ತೆ ಮೇಲೆ ಹಾವನ್ನು ಕಂಡ ಗ್ರಾಮಸ್ಥರು ಸಂಚಾರವನ್ನು ಸ್ಥಗಿತಗೊಳಿಸಿದ್ದರು. ಬಳಿಕ ಉರಗತಜ್ಞ ಭಜರಂಗ ಡುಕರೆ, ನಿಂಗಪ್ಪ ಗುರವರರ ಸಹಾಯದಿಂದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬಳಿಕ ಸುರಕ್ಷಿತವಾಗಿ ಜಾಂಬೋಟಿ ಅರಣ್ಯ ಪ್ರದೇಶಕ್ಕೆ ಸರ್ಪವನ್ನು ಬಿಟ್ಟಿದ್ದಾರೆ.

Published On - 5:37 pm, Thu, 26 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us