AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ! ಲಾಠಿ ಹಿಡಿದು ಧರಣಿ ನಿರತರನ್ನು ಚದುರಿಸಿದ ಪೊಲೀಸರು

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಕರವೇ ಶಿವರಾಮೇಗೌಡ ಬಣ ಜಿಲ್ಲಾಧ್ಯಕ್ಷ ವಾಜೀದ್ ಸೇರಿ 20ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆಪಡೆದಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ! ಲಾಠಿ ಹಿಡಿದು ಧರಣಿ ನಿರತರನ್ನು ಚದುರಿಸಿದ ಪೊಲೀಸರು
ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
TV9 Web
| Edited By: sandhya thejappa|

Updated on:Dec 19, 2021 | 2:08 PM

Share

ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್ ಪುಂಡರ ಗಲಾಟೆ ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪಿರನವಾಡಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದನ್ನು ಖಂಡಿಸಿ ಕರವೇ ಕಾರ್ಯಕರ್ತರು ಮೆರವಣಿಗೆ ಹೊರಟಿದ್ದರು. ಈ ವೇಳೆ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆಯುವುದನ್ನು ವಿರೋಧಿಸಿದ ಹೋರಾಟಗಾರರು, ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ. ಲಾಠಿ ಹಿಡಿದು ಪೊಲೀಸರು ಧರಣಿ ನಿರತರನ್ನು ಚದುರಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಕರವೇ ಶಿವರಾಮೇಗೌಡ ಬಣ ಜಿಲ್ಲಾಧ್ಯಕ್ಷ ವಾಜೀದ್ ಸೇರಿ 20ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆಪಡೆದಿದ್ದಾರೆ. ಧರಣಿ ನಿರತರನ್ನು 2 ಸರ್ಕಾರಿ ಬಸ್​ಗಳಲ್ಲಿ ತುಂಬಿಸಿ ಪೊಲೀಸರು ಕರೆದೊಯ್ದಿದ್ದಾರೆ.

ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಹಾನಿಯಾಗಿದ್ದ ರಾಯಣ್ಣ ಪುತ್ಥಳಿಯನ್ನು ಸರಿಪಡಿಸಿ ಸ್ಥಳೀಯರು‌ ಮರುಪ್ರತಿಷ್ಠಾಪನೆ ಮಾಡಿದ್ದಾರೆ. ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ ಮುಖಂಡರು ಪೂಜೆ ಸಲ್ಲಿಸಲಿದ್ದಾರೆ. ಜೈ ಜೈ ರಾಯಣ್ಣ, ಜೈ ಜೈ ಚನ್ನಮ್ಮ ಅಂತಾ ಘೋಷಣೆ ಕೂಗಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಸದ್ಯ ಬೆಳಗಾವಿಯಲ್ಲಿ ಪ್ರತಿಭಟನೆ ಕಿಚ್ಚು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಒಂದು ಕಡೆ ಪೊಲೀಸರು  ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದರೆ, ಇನ್ನೊಂದು ಕಡೆ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲೂ ಎಂಇಎಸ್​ ಪುಂಡಾಟಿಕೆ ಖಂಡಿಸಿ ಕನ್ನಡ ಸಂಘಟನೆಗಳು ಧರಣಿ ನಡೆಸಿವೆ. ಬಾಳಾ ಠಾಕ್ರೆ ಫೋಟೋಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷರ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್​ ವೃತ್ತದ ಬಳಿ ಪ್ರತಿಭಟನೆ ನಡೆಸಿದ್ದಾರೆ. ನ್ಯಾಯ ಸಿಗುವ ತನಕ ಹೋರಾಟ ಮಾಡುತ್ತೇವೆ. ಸರ್ಕಾರ ಕಿವಿ‌ಕೊಡಲಿಲ್ಲ ಅಂದರೆ ಬೆಳಗಾವಿಗೆ ಹೋಗುತ್ತೇವೆ. ಸೋಮವಾರವರೆಗೆ ಸಮಯ ನೀಡುತ್ತೇವೆ. ಎಂಇಎಸ್ ಪುಂಡರು ತಮ್ಮ ಉದ್ಧಟನ ಬಿಡ್ಲಿಲ್ಲ ಅಂದರೆ, ಬುಧವಾರ ಪಾದಯಾತ್ರೆ ಮೂಲಕ ಬೆಳಗಾವಿ ಚಲೋ ಮಾಡುತ್ತೇವೆ ಅಂತ ಕನ್ನಡ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಇದನ್ನೂ ಓದಿ

ಬೆಂಗಳೂರು ನೈಸ್ ರಸ್ತೆಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ 5 ಕುಖ್ಯಾತ ದರೋಡೆಕೋರರ ಬಂಧನ

Health Tips : ಬಿಡುವಿನ ವೇಳೆಯಲ್ಲಿ ಪಾದಗಳಿಗೆ ಬಿಸಿ ನೀರಿನ ಸ್ನಾನ ಮಾಡಿಸಿ: ನಿಮ್ಮ ಒತ್ತಡ ನಿವಾರಣೆಗೂ ಒಳಿತು

Published On - 12:08 pm, Sun, 19 December 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ