AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿಯದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ

ಕುಂದಾನಗರಿಯಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯದ್ದು ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದಿದ್ದಾರೆ.

ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿಯದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
TV9 Web
| Edited By: |

Updated on:Dec 16, 2021 | 11:39 AM

Share

ಬೆಳಗಾವಿ: ಕುಂದಾನಗರಿಯಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಪ್ರತಿಪಕ್ಷವಾದ ಕಾಂಗ್ರೆಸ್ ಭಾರೀ ಪ್ರತಿಭಟನೆ, ರ್ಯಾಲಿ​ ನಡೆಸುತ್ತಿದ್ದು ಅಧಿವೇಶನಕ್ಕೆ (belagavi legislative winter session) ಕಾವೇರಿಸಿದೆ. ಪ್ರತಿಭಟನೆಯ ಭರದಲ್ಲಿ ಇಂದು ಕಾಂಗ್ರೆಸ್​ ಪಕ್ಷದ ಎಲ್ಲಾ ಶಾಸಕರೂ ಸೇರಿದಂತೆ ಸಾವಿರಾರು ಮಂದಿ ಒಗ್ಗೂಡಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ರ್ಯಾಲಿ ಆರಂಭಕ್ಕೂ ಮುನ್ನ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (kpcc president dk shivakumar) ಅವರು ಆಡಳಿತಾರೂಢ ಬಿಜೆಪಿ (Karnataka BJP) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯದ್ದು ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದವರು ಪ್ರತಿ ಹಂತದಲ್ಲಿಯೂ ಲಂಚ ಪಡೆಯುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಕೂಡ ಕಮಿಷನ್ ಪಡೆಯುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಪ್ರಧಾನಿ ಮೋದಿ ನಮ್ಮ ಸರ್ಕಾರದ ವಿರುದ್ಧ 10 ಪರ್ಸೆಂಟ್ ಸರ್ಕಾರ ಆರೋಪಿಸಿದ್ದರು. ಹೀಗಾಗಿ ಕಮಿಷನ್ ಆರೋಪದ ಬಗ್ಗೆ ತನಿಖೆಯಾಗಬೇಕು. ನಮ್ಮ ಸರ್ಕಾರದಿಂದ ಈವರೆಗಿನ ಆರೋಪದ ಬಗ್ಗೆಯೂ ತನಿಖೆ ಆಗಲಿ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ರೈತರಿಗೆ ಮಳೆ, ನೆರೆ ಹಾನಿಯ ಪರಿಹಾರ ಹಣವನ್ನು ಕೊಟ್ಟಿಲ್ಲ. ರಾಜ್ಯ ಸರ್ಕಾರ ಯಾವುದೇ ರಂಗದಲ್ಲೂ ಸಹಾಯ ಮಾಡಿಲ್ಲ. ಇದು ಬಿಜೆಪಿ ಸರ್ಕಾರವಲ್ಲ, ಸಂಯುಕ್ತ ಸರ್ಕಾರ. ಇದು 40 ಪರ್ಸೆಂಟ್ ಸರ್ಕಾರ, ರಾಜ್ಯಕ್ಕೇ ಈ ಸರ್ಕಾರ ಕಳಂಕ ಎಂದಿದ್ದಾರೆ.

ಬೆಳಗಾವಿಯಲ್ಲಿ ನಾವು ಮಲಗಲು ಬಂದಿಲ್ಲ, ಒಗ್ಗೂಡಿ ರ್ಯಾಲಿ ಹೋಗ್ತಿದ್ದೀವಿ: ನಮ್ಮ ಎಲ್ಲಾ ಶಾಸಕರು ಒಗ್ಗೂಡಿ ರ್ಯಾಲಿ ಹೋಗ್ತಿದ್ದೀವಿ. ಬೆಳಗಾವಿಯಲ್ಲಿ ನಾವು ಮಲಗಲು ಬಂದಿಲ್ಲ. ಹೋರಾಟ ಮಾಡಲು ಬೆಳಗಾವಿಗೆ ಬಂದಿದ್ದೇವೆ. ಈ ಸರ್ಕಾರವನ್ನ ಜನರೇ ಕಿತ್ತು ಒಗೆಯಬೇಕು ಎಂದು ಅವರು ಕರೆಯಿತ್ತರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇವತ್ತಿನ ರ್ಯಾಲಿ ಕುರಿತು ಮಾಹಿತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾಧ್ಯಕ್ಷ‌ ವಿನಯ್ ನಾವದಗಟ್ಟಿ ಕಡೆಯಿಂದ ಮಾಹಿತಿ ಪಡೆದರು. ಯಾರೆಲ್ಲಾ ಶಾಸಕರಿಗೆ ಹೇಳಿದ್ದೀರಿ, ಯಾವ ರೀತಿ ರ್ಯಾಲಿ ಹೊರಡಲು ವ್ಯವಸ್ಥೆ ಮಾಡಿದ್ದೀರಿ ಎಂದು ಡಿಕೆಶಿ ಪ್ರತಿಯೊಂದು ಮಾಹಿತಿ ಕೇಳಿಪಡೆದರು.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಱಲಿ ನಡೆಸುತ್ತಿದ್ದು, ಬೆಳಗಾವಿ ನಗರ, ರಾಷ್ಟ್ರೀಯ ಹೆದ್ದಾರಿ 4 ಬೆಳಗಾವಿಯ ಸುವರ್ಣಸೌಧದ ಬಳಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಪ್ರತಿ ವೃತ್ತದಲ್ಲಿಯೂ ಹೆಚ್ಚುವರಿಯಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಭಟನಾರ್ಥ ಟ್ರ್ಯಾಕ್ಟರ್ ವಾಹನವೇರಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸೇರಿದಂತೆ ಹಲವು ನಾಯಕರಿಂದ ಜಾಥಾ ಆರಂಭವಾಗಿದೆ.

ಬೆಳಗಾವಿಯಲ್ಲಿ ಕರ್ಬಾಟಕ ಕಾಂಗ್ರೆಸ್​ ದೊಡ್ಡ ಮಟ್ಟದ ಪ್ರತಿಭಟನಾ ರ್ಯಾಲಿ ನಡೆಯುತ್ತಿದ್ದರೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿಲ್ಲ.

Congress Tractor Rally: ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಖಂಡಿಸಿ ಕಾಂಗ್ರೆಸ್​ ಟ್ರ್ಯಾಕ್ಟರ್ ಱಲಿ | TV9 Kannada

Published On - 10:12 am, Thu, 16 December 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ