AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್: ಕೂಡಲಸಂಗಮದಲ್ಲಿ ವಚನಗಳ ವಿವಿ ಘೋಷಣೆ ಮಾಡಬೇಕು: ಬಸವ ಜಯಮೃತ್ಯುಂಜಯ ಶ್ರೀ

ನಾಳೆ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡಿಸಲಿದ್ದಾರೆ. ಈ ಬಗ್ಗೆ ಚಿಕ್ಕೋಡಿಯಲ್ಲಿ ಮಾತನಾಡಿದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬಸವಣ್ಣನವರ ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹೀಗಾಗಿ ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಬಜೆಟ್: ಕೂಡಲಸಂಗಮದಲ್ಲಿ ವಚನಗಳ ವಿವಿ ಘೋಷಣೆ ಮಾಡಬೇಕು: ಬಸವ ಜಯಮೃತ್ಯುಂಜಯ ಶ್ರೀ
Sahadev Mane
| Edited By: Rakesh Nayak Manchi|

Updated on: Feb 15, 2024 | 5:51 PM

Share

ಬೆಳಗಾವಿ, ಫೆ.15: ನಾಳೆ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಬಜೆಟ್ 2024 ಮಂಡಿಸಲಿದ್ದಾರೆ. ಈ ಬಗ್ಗೆ ಚಿಕ್ಕೋಡಿಯಲ್ಲಿ ಮಾತನಾಡಿದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬಸವಣ್ಣನವರ ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹೀಗಾಗಿ ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕು. ನಾಳಿನ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಘೋಷಣೆ ಆಗಬೇಕು. ಬಸವಣ್ಣನವರ ವಚನಗಳನ್ನ ಅಧ್ಯಯನ ಪ್ರಾರಂಭ ಮಾಡಿದ್ದು ಕೂಡಲಸಂಗಮದಲ್ಲಿ. ಕೂಡಲಸಂಗಮದಲ್ಲಿಯೇ ಧರ್ಮ ಸ್ಥಾಪನೆಯಾಗಿದೆ. ಬಸವಣ್ಣನವರ ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ‌ ಮಾಡಿಕೊಳ್ಳುತ್ತೇನೆ ಎಂದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಮೇಲೆ ಕಣ್ಣು: ಬಜೆಟ್​​ನಲ್ಲಿ ಸಿಎಂ ಮಹತ್ವದ ಘೋಷಣೆ ಸಾಧ್ಯತೆ

ಕೂಡಲಸಂಗಮದ ಶಾಸಕ ಕಾಶಪ್ಪನವರ ಅವರಿಗೂ ತಿಳಿಸಿದ್ದೇನೆ. ಕೂಡಲಸಂಗಮ ಅಭಿವೃದ್ಧಿ ಇನ್ನೂ ಆಗಿಲ್ಲ. ಬೆಳಗಾವಿಯ ಬೆಳವಡಿ ಮಲ್ಲಮ್ಮನ‌ ಹೆಸರಿನಲ್ಲಿ ಪ್ರಾಧಿಕಾರ ರಚನೆ ಮಾಡಬೇಕು. ಫೆಬ್ರವರಿ 27, 28 ರಂದು ಬೆಳವಾಡಿಯಲ್ಲಿ ಮಲ್ಲಮ್ಮನ ಉತ್ಸವ ಇದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಧಿಕಾರ ಘೋಷಣೆ ಮಾಡಿ ಉತ್ಸವದಲ್ಲಿಯೇ ಲೋಕಾರ್ಪಣೆ ಮಾಡಬೇಕು. ಬೆಳಗಾವಿಯ ಎಲ್ಲ ಸಚಿವರು, ಶಾಸಕರನ್ನು ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಕಳನ್ನು ಈಡೇರಿಸಿ ತತ್ವ ಪ್ರಚಾರಕ್ಕೆ ಸ್ಪಂದಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sahadev Mane
Sahadev Mane
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ