AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸನಗಲ್ಲು ನೆಟ್ಟು ಮೇಕೆದಾಟಿನಿಂದ ಬೆಂಗಳೂರಿಗೆ ದಿನಕ್ಕೆ 10 ಕಿಮೀ ಕಾಲ್ನಡಿಗೆ ಮಾಡ್ತೇವೆ: ಕರ್ನಾಟಕ ಕಾಂಗ್ರೆಸ್​ ನಾಯಕರ ಘೋಷಣೆ

ಬೆಳಗಾವಿ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್​ ಜನವರಿ 9 ರಿಂದ 19 ರವರೆಗೆ ಪಾದಯಾತ್ರೆ (Congress Mekedatu Padayatre) ಹಮ್ಮಿಕೊಂಡಿರುವ ಹಿನ್ನೆಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೊಷ್ಠಿ ನಡೆಸಿದ್ದಾರೆ. ಸುದೀರ್ಘ ಪಾದಯಾತ್ರೆ ಮೇಕೆದಾಟಿನಿಂದ ಆರಂಭವಾಗಿ ಬೆಂಗಳೂರಿನಲ್ಲಿ ಅಂತ್ಯವಾಗಲಿದೆ. ದಿನಕ್ಕೆ 10 ಕಿ.ಮೀ. ಕಾಲ್ನಡಿಗೆಯಲ್ಲಿ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಹೆಜ್ಜೆ ಹಾಕಲಿದ್ದಾರೆ.​ ಕೇವಲ ಕಾಂಗ್ರೆಸ್ ಕಾರ್ಯಕರ್ತರಲ್ಲದೇ ಜನಸಾಮಾನ್ಯರಿಗೂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಕಾಂಗ್ರೆಸ್​ […]

ಶಾಸನಗಲ್ಲು ನೆಟ್ಟು ಮೇಕೆದಾಟಿನಿಂದ ಬೆಂಗಳೂರಿಗೆ ದಿನಕ್ಕೆ 10 ಕಿಮೀ ಕಾಲ್ನಡಿಗೆ ಮಾಡ್ತೇವೆ: ಕರ್ನಾಟಕ ಕಾಂಗ್ರೆಸ್​ ನಾಯಕರ ಘೋಷಣೆ
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ
TV9 Web
| Edited By: |

Updated on:Dec 21, 2021 | 11:59 AM

Share

ಬೆಳಗಾವಿ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್​ ಜನವರಿ 9 ರಿಂದ 19 ರವರೆಗೆ ಪಾದಯಾತ್ರೆ (Congress Mekedatu Padayatre) ಹಮ್ಮಿಕೊಂಡಿರುವ ಹಿನ್ನೆಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೊಷ್ಠಿ ನಡೆಸಿದ್ದಾರೆ. ಸುದೀರ್ಘ ಪಾದಯಾತ್ರೆ ಮೇಕೆದಾಟಿನಿಂದ ಆರಂಭವಾಗಿ ಬೆಂಗಳೂರಿನಲ್ಲಿ ಅಂತ್ಯವಾಗಲಿದೆ. ದಿನಕ್ಕೆ 10 ಕಿ.ಮೀ. ಕಾಲ್ನಡಿಗೆಯಲ್ಲಿ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಹೆಜ್ಜೆ ಹಾಕಲಿದ್ದಾರೆ.​ ಕೇವಲ ಕಾಂಗ್ರೆಸ್ ಕಾರ್ಯಕರ್ತರಲ್ಲದೇ ಜನಸಾಮಾನ್ಯರಿಗೂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಕಾಂಗ್ರೆಸ್​ ನಾಯಕರು ಆಹ್ವಾನ ನೀಡಿದ್ದಾರೆ. ಪಾದಯಾತ್ರೆ ಆರಂಭವಾಗುವ ಸ್ಥಳದಲ್ಲಿ ಕಾಂಗ್ರೆಸ್ ನಾಯಕರು ಶಾಸನಗಲ್ಲು (Mekedatu Stone Inscription) ನೆಡಲಿದ್ದಾರೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರಿಗೆ ಕಾಂಗ್ರೆಸ್ ನಿಂದ ಟಿಶರ್ಟ್ ನೀಡಲಾಗುವುದು. ಜೊತೆಗೆ ಸರ್ಟಿಫಿಕೇಟ್ ಸಹ ನೀಡಲಾಗುವುದು. ಕೊನೆಯ ದಿನ ಜನವರಿ 19 ರಂದು, ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಆಯಜಿಸಲಾಗಿದ್ದು, ಒಂದು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್​ ನಾಯಕರು (Karnataka Congress Mekedatu) ತಿಳಿಸಿದ್ದಾರೆ.

ಮೇಕೆದಾಟು ಯೋಜನೆಗೆ ನಾನು ನೀರಾವರಿ ಸಚಿವನಾಗಿದ್ದಾಗ ಅಪ್ರೂವಲ್ ತಂದಿದ್ದೆ-ಡಿ.ಕೆ. ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇಕೆದಾಟು ಯೋಜನೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ನಾನು ನೀರಾವರಿ ಸಚಿವನಾಗಿದ್ದಾಗ ಅಪ್ರೂವಲ್ ತಂದಿದ್ದೆ. ಈ ಯೋಜನೆಯಿಂದ 2 ರಾಜ್ಯದ ರೈತರಿಗೆ ಅನುಕೂಲವಾಗುತ್ತೆ. ಬೆಂಗಳೂರಿಗೆ ಕುಡಿಯುವ ನೀರು ಕೂಡ ಪೂರೈಸಬಹುದು. ವಿದ್ಯುತ್ ಉತ್ಪಾದನೆ ಸಹ ಮಾಡಬಹುದಾಗಿದೆ ಎಂದು ಹೇಳಿದರು.

1968ರಲ್ಲೇ ಕಾಂಗ್ರೆಸ್ ಸರ್ಕಾರ ಇದ್ದಾಗ ಈ ಯೋಜನೆ ಬಂತು- ಸಿದ್ದರಾಮಯ್ಯ ಒಂದು ಮೇಕೆ ದಾಟುವಷ್ಟು ಮಾತ್ರ ಜಾಗ ಇದೆ ಆ ನದಿ ಹರಿವಿನಲ್ಲಿ. ಹೀಗಾಗಿ ಇದಕ್ಕೆ ಮೇಕೆದಾಟು ಅಂತಾ ಹೆಸರು ಬಂತು. ಈ ಹಿಂದೆ 1968ರಲ್ಲೇ ಕಾಂಗ್ರೆಸ್ ಸರ್ಕಾರ ಇದ್ದಾಗ ಈ ಯೋಜನೆ ಬಂತು. ಆದರೆ ಕೋರ್ಟ್ ಟ್ರಿಬ್ಯನಲ್ ಆದೇಶದ ಕಾರಣ ಜಾರೊಗೊಳಿಸಲು ಆಗಲಿಲ್ಲ. 2012ರಲ್ಲಿ ನಮ್ಮ ಸರ್ಕಾರ 5912 ಕೋಟಿ ಡಿಪಿಆರ್ ರೆಡಿ ಮಾಡಿ ಕೇಂದ್ರಕ್ಕೆ ಕಳಿಸಿದ್ವಿ. ಬಳಿಕ ಡಿ ಕೆ ಶಿವಕುಮಾರ್ ನೀರಾವರಿ ಸಚಿವರಾದಾಗ 9 ಸಾವಿರ ಕೋಟಿಯ ವಿಸ್ತ್ರತ ಯೋಜನೆ ರೂಪಿಸಿ ಕಳುಹಿಸಿದ್ದರು. ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರು ಸಿಗಲಿದೆ. ಸಮುದ್ರಕ್ಕೆ ಸೇರುವ 66 ಟಿಎಂಸಿ ಪ್ರಮಾಣದಷ್ಟು ನೀರನ್ನು, ಮೇಕೆದಾಟು ಜಲಾಶಯ ನಿರ್ಮಾಣ ಮಾಡಿದರೆ ಸಂಗ್ರಹಿಸಿಡಬಹುದು. ಬಳಿಕ 440 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಬೆಂಗಳೂರಿನಲ್ಲಿ ಶೇಕಡಾ 30 ರಷ್ಟು ಮಂದಿಗೆ ನೀರು ಸರಬರಾಜು ಪೂರ್ಣ ಪ್ರಮಾಣದಲ್ಲಿ ಇಲ್ಲ. ಅದೇ ಈ ಯೋಜನೆ ಜಾರಿಯಾದರೆ ಬೆಂಗಳೂರು, ದೊಡ್ಡಬಳ್ಳಾಪುರ, ಕೋಲಾರಕ್ಕೆ ನೀರು ನೀಡಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.

Ex Cm Siddaramaiah, DKS Press meet | ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಸುದ್ದಿಗೋಷ್ಠಿ | Tv9Kannada

Published On - 11:54 am, Tue, 21 December 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್