AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆಗೆ ಬರುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ Image Credit source: ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 01, 2022 | 12:46 PM

Share

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ದಶಕಗಳ ಗಡಿ ವಿವಾದ (Karnataka-Maharashtra border dispute)ದ ಕೇಂದ್ರಬಿಂದುವಾಗಿರುವ ಬೆಳಗಾವಿ ಜಿಲ್ಲೆಯಾದ್ಯಂತ ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವು ಸುಪ್ರೀಂ ಕೋರ್ಟ್‌ (Supreme Court)ನಲ್ಲಿ ವಿಚಾರಣೆಗೆ ಬರುತ್ತಿರುವ ಹಿನ್ನೆಲೆ ಪೊಲೀಸರು ಬಿಗಿ ಭದ್ರತೆ (Police Security)ಯನ್ನು ಕೈಗೊಂಡಿದ್ದಾರೆ. ನಗರ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ 21 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವುದರ ಜೊತೆಗೆ ಹೆಚ್ಚುವರಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವಾರ ನಡೆದ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ನಾವು ನಿರ್ಧರಿಸಿದ್ದೇವೆ” ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಗಡಿ ವಿವಾದದ ಬಗ್ಗೆ ಎರಡೂ ರಾಜ್ಯಗಳಲ್ಲಿ ಬಸ್ಸುಗಳು ಮತ್ತು ವಾಹನಗಳಿಗೆ ಹಾನಿ ಮಾಡುವುದು ಅಥವಾ ಮಸಿ ಬಳಿಯುವಂತಹ ಕೆಲವು ಘಟನೆಗಳು ನಡೆಯುತ್ತಲೇ ಇವೆ.

ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಮಠದಲ್ಲಿದ್ದ 22 ಮಕ್ಕಳು ನಾಪತ್ತೆ, ಈ ಮಕ್ಕಳು ಮಠದ ಪಾಲಾಗಿದ್ದು ಹೇಗೆಂಬುದೇ ಪ್ರಶ್ನೆ

ಗಡಿ ಭಾಗದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರು ಮಂಗಳವಾರ ನಿಪ್ಪಾಣಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತರುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವ ಅಂಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ಹೊಡೆದರು, ಠಾಣೆಗೆ ಕರೆದೊಯ್ದ ಡಿಸಿಪಿ ಬೂಟಗಾಲಿಂದ ಒದ್ದರು ಎಂದ ವಿದ್ಯಾರ್ಥಿ

ಮಹಾರಾಷ್ಟ್ರದ ಯಾವುದೇ ನಾಯಕರ ಖಾಸಗಿ ಭೇಟಿಗಳನ್ನು ರಾಜ್ಯ ಪೊಲೀಸರು ತಡೆಯುವುದಿಲ್ಲ, ಆದರೆ ಶಾಂತಿ ಕದಡುವ ಯಾವುದೇ ಪ್ರಯತ್ನಗಳಿದ್ದರೆ ಕ್ರಮ ಕೈಗೊಳ್ಳುತ್ತಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನ್ಯಾಯಾಲಯದ ಮೊಕದ್ದಮೆ, ಮಹಾರಾಷ್ಟ್ರ ಸಚಿವರ ಸಂಭವನೀಯ ಭೇಟಿ ಮತ್ತು ಡಿಸೆಂಬರ್ 19 ರಿಂದ ಬೆಳಗಾವಿಯಲ್ಲಿ ಮುಂಬರುವ ವಿಧಾನಸಭೆ ಅಧಿವೇಶನದ ಹಿನ್ನೆಲೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Thu, 1 December 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್