AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರ; ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಕುತಂತ್ರ

ಮುಂಬೈನಲ್ಲಿ MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಸಭೆ ನಡೆಸಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದ 865 ಹಳ್ಳಿಗಳ ಮರಾಠಿ ಭಾಷಿಕರಿಗೆ ಆರೋಗ್ಯ ವಿಮೆ ಯೋಜನೆ ವಿಚಾರವಾಗಿ ಚರ್ಚೆ ನಡೆದಿದ್ದು ಗಡಿ ಭಾಗದಲ್ಲಿ ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಎಂಇಎಸ್, ಮಹಾರಾಷ್ಟ್ರ ಸರ್ಕಾರ ಕುತಂತ್ರ ಮಾಡುತ್ತಿದೆ.

ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರ; ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಕುತಂತ್ರ
MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಸಭೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Oct 12, 2023 | 11:02 AM

Share

ಚಿಕ್ಕೋಡಿ, ಅ.12: ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮತ್ತೆ ಕ್ಯಾತೆ ತೆಗೆದಿದೆ (Karnataka Maharashtra Border Issue). ನಾಡದ್ರೋಹಿ MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ವಿವಾದ ತಜ್ಞರ ಸಮಿತಿ ಸಭೆ ನಡೆದಿದೆ. ನಿನ್ನೆ (ಅ.11) ಮುಂಬೈನಲ್ಲಿ MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ (DhairyaSheel Mane) ಸಭೆ ನಡೆಸಿದ್ದಾರೆ. ಮಹಾರಾಷ್ಟ್ರದ ಗಡಿ ಭಾಗದ 865 ಹಳ್ಳಿಗಳ ಮರಾಠಿ ಭಾಷಿಕರಿಗೆ ಆರೋಗ್ಯ ವಿಮೆ ಯೋಜನೆ ವಿಚಾರವಾಗಿ ಚರ್ಚೆ ನಡೆದಿದ್ದು ಗಡಿ ಭಾಗದಲ್ಲಿ ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಎಂಇಎಸ್, ಮಹಾರಾಷ್ಟ್ರ ಸರ್ಕಾರ ಕುತಂತ್ರ ಮಾಡುತ್ತಿದೆ.

ಗಡಿ ಭಾಗದ 865 ಹಳ್ಳಿಗಳ ಮರಾಠಿ ಭಾಷಿಕರಿಗೆ ಆರೋಗ್ಯ ವಿಮೆ ಯೋಜನೆ ಲಾಭ ಪಡೆಯಲು ನಾಡದ್ರೋಹಿ MES ಕಚೇರಿಯ ಪತ್ರ ಅವಶ್ಯಕ. ಯೋಜನೆಯ ಲಾಭ ಪಡೆಯಲು ಮರಾಠಿ ಭಾಷಿಕ ಎಂದು ನಮೂದಿಸಬೇಕು. ಗಡಿ ಪ್ರದೇಶದ ಮರಾಠಿ ಭಾಷಿಕರಿಗಾಗಿ ಗಡಿಭಾಗದಲ್ಲಿ ಪ್ರತ್ಯೇಕ ಕಚೇರಿ ಸ್ಥಾಪನೆಗೂ ನಿರ್ಧಾರ ಮಾಡಲಾಗಿದೆ. ಪ್ರಾದೇಶಿಕ ಆಯುಕ್ತ ಶ್ರೇಣಿಯ ಅಧಿಕಾರಿ ನೇಮಿಸಿ ಕಚೇರಿ ಸ್ಥಾಪನೆಗೆ ನಿರ್ಧರಿಸಲಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಚಂದಗಡ್‌ನಲ್ಲಿ ಕಚೇರಿ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ. ಈ ಮೂಲಕ ಗಡಿ ಭಾಗದಲ್ಲಿ ಭಾಷಾ ವೈಷಮ್ಯದ ಕಿಡಿ ಹೊತ್ತಿಸಲು ಎಂಇಎಸ್, ಮಹಾರಾಷ್ಟ್ರ ಸರ್ಕಾರ ಕುತಂತ್ರ ಮಾಡುತ್ತಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಬಳಿಕ ಗೋವಾ ರಾಜ್ಯದಿಂದ ಗಡಿ ಕ್ಯಾತೆ; ಕಾರವಾರದಲ್ಲಿ ಕೊಂಕಣಿ ಭಾಷೆಗೆ ಆದ್ಯತೆ ಕೊಡಬೇಕೆಂದು ಪ್ರಧಾನಿಗೆ ಪತ್ರ

ಕರ್ನಾಟಕದ 865 ಹಳ್ಳಿಗಳ ಮರಾಠಿ ಭಾಷಿಕರಿಗಾಗಿ ಮಹಾತ್ಮ ಪುಲೆ ಜನಾರೋಗ್ಯ ಯೋಜನೆಯಡಿ ಐದು ಲಕ್ಷ ರೂ‌.ವರೆಗೆ ಆರೋಗ್ಯ ವಿಮೆ ನೀಡಲಾಗುತ್ತಿದೆ. ಮಹಾರಾಷ್ಟ್ರ ಅಷ್ಟೇ ಅಲ್ಲ ಕರ್ನಾಟಕದ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಸೌಲಭ್ಯ ಈ ಯೋಜನೆಯಡಿ ಸಿಗಲಿದೆ. ಯೋಜನೆ ಲಾಭಕ್ಕಾಗಿ ತಾವು ಮರಾಠಿ ಭಾಷಿಕರು ಅಂತಾ ಪ್ರಮಾಣ ಪತ್ರ ನೀಡುವುದು ಅತ್ಯಗತ್ಯ. ಈ ಪ್ರಮಾಣ ಪತ್ರ ಬಳಸಿ 865 ಹಳ್ಳಿಗಳಲ್ಲಿ ಅತಿಹೆಚ್ಚು ಮರಾಠಿ ಭಾಷಿಕರಿದ್ದಾರೆಂದು ಬಿಂಬಿಸಲು ಮಹಾರಾಷ್ಟ್ರ ಪ್ಲ್ಯಾನ್ ಮಾಡಿದೆ. ಇದೇ ದಾಖಲೆಯನ್ನು ಸುಪ್ರೀಂ ಕೋರ್ಟ್​ಗೆ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ಕುತಂತ್ರ ಮಾಡುತ್ತಿದೆ.

ಕರ್ನಾಟಕ ಸರ್ಕಾರದ ನಡೆಗೆ ಸಂಘಟನೆಗಳ ಆಕ್ರೋಶ

ಕರ್ನಾಟಕದ 865 ಹಳ್ಳಿಗಳಲ್ಲಿ ಮರಾಠಿ ಭಾಷಿಕರಿದ್ದಾರೆಂದು ಸುಪ್ರೀಂಕೋರ್ಟ್‌ಗೆ ದಾಖಲೆ ಸಲ್ಲಿಸಲು ಮಹಾರಾಷ್ಟ್ರ ಕುತಂತ್ರ ಮಾಡುತ್ತಿದೆ. ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರ ಸಭೆ ಮೇಲೆ ಸಭೆ ಮಾಡುತ್ತಿದ್ದರೂ ಕರ್ನಾಟಕ ಸರ್ಕಾರ ಮೌನವಾಗಿದೆ. ಕರ್ನಾಟಕ ಸರ್ಕಾರದ ನಡೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 9:48 am, Thu, 12 October 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್