AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಸಚಿವ ಉಮೇಶ ಕತ್ತಿಗೆ ಪಂಚಮಸಾಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ

Umesh Katti funeral: ಅರಣ್ಯ ಸಚಿವ ಉಮೇಶ ಕತ್ತಿ ನಿನ್ನೆ (ಸೆ. 6) ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮದ ಬಳಿಯ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ, ಪಂಚಮಸಾಲಿ ಲಿಂಗಾಯತ ಸಂಪ್ರದಾಯದಂತೆ ಅತ್ಯಕ್ರಿಯೆ ನೆರವೇರಿತು.

ಅರಣ್ಯ ಸಚಿವ ಉಮೇಶ ಕತ್ತಿಗೆ ಪಂಚಮಸಾಲಿ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ
ಸಚಿವ ಉಮೇಶ್ ಕತ್ತಿ
TV9 Web
| Edited By: |

Updated on:Sep 07, 2022 | 10:19 PM

Share

ಬೆಳಗಾವಿ: ಅರಣ್ಯ ಸಚಿವ ಉಮೇಶ ಕತ್ತಿ (Umesh Katti) ನಿನ್ನೆ (ಸೆ. 6) ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮದ ಬಳಿಯ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ, ಪಂಚಮಸಾಲಿ ಲಿಂಗಾಯತ ಸಂಪ್ರದಾಯದಂತೆ ಸಂಜೆ ಅಂತ್ಯಕ್ರಿಯೆ ನೆರವೇರಿತು. ಅತ್ಯಕ್ರಿಯೆಯಲ್ಲಿ ವಿವಿಧ ಮಠಾಧೀಶರು ಭಾಗಿಯಾಗಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ, ಶಾಸಕರು, ಸಚಿವರು  ಅಂತಿಮ ನಮನ ಸಲ್ಲಿಸಿದರು.

6 ಪಕ್ಷದಿಂದ 8 ಬಾರಿ ಶಾಸಕರಾಗಿದ್ದ ಉಮೇಶ್ ಕತ್ತಿ

ಬಾಗೆವಾಡಿ ಸಾಹುಕಾರ ಅರಣ್ಯ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದು, ಅವರು ಬೆಳಗಾವಿಯ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 8 ಬಾರಿ ಗೆಲವು ಸಾಧಿಸಿದ್ದಾರೆ. ಉಮೇಶ ಕತ್ತಿ ವಿಭಿನ್ನವಾದ ರಾಜಕೀಯ ಪಥದಲ್ಲಿ ಸಾಗಿ ಸುದ್ದಿ ಮಾಡಿದ್ದರು. ಉಮೇಶ್ ಕತ್ತಿಯವರ ತಂದೆ ವಿಶ್ವನಾಥ್ ಕತ್ತಿಯ ಅಕಾಲಿಕ ನಿಧನದಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಯಾಗಿತ್ತು, 1985ರಲ್ಲಿ ಉಮೇಶ್​ ಕತ್ತಿಯವರು, ಜನತಾ ಪಕ್ಷದಿಂದ ಶಾಸಕರಾಗಿ ವಿಧಾನಸಭಾ ಮೆಟ್ಟಿಲನ್ನು ಮೊದಲ ಬಾರಿಗೆ ಹತ್ತಿದರು.

ಅಂದಿನಿಂದ ಇಲ್ಲಿಯವರೆಗೆ 2004ರಲ್ಲಿ ಹೊರತಾಗಿ ಇನ್ಯಾವುದೇ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನೇ ಕಾಣದ ಸೋಲಿಲ್ಲದ ಸರದಾರರಾಗಿ ಮಿಂಚಿದ್ದರು. ಹೀಗಾಗಿ ದಾಖಲೆಯ 8 ಬಾರಿ ಶಾಸಕರಾಗಿದ್ದ ಹೆಮ್ಮೆ ಅವರದ್ದು.

ಜನತಾ ಪಕ್ಷದಿಂದ ರಾಜಕೀಯ ಆರಂಭಿಸಿದ್ದ ಉಮೇಶ್ ಕತ್ತಿ, ಭಾರತೀಯ ಜನತಾ ಪಕ್ಷದ ಮೂಲಕ ತಮ್ಮ ರಾಜಕೀಯ ಕೊನೆಗೊಳಿಸಿದರು. 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. 1989ರಲ್ಲಿ ಜನತಾದಳದಿಂದ ಜಯಭೇರಿ ಬಾರಿಸಿದ್ದರು.

ಮುಂದಿನ ಚುನಾವಣೆ ಅಂದರೆ 1994ರಲ್ಲೂ ಉಮೇಶ್​ ಕತ್ತಿ, ಜನತಾದಳದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿ, ಎಚ್​ಡಿ ದೇವೇಗೌಡರ ಸಚಿವ ಸಂಪುಟದಲ್ಲಿ ಸಕ್ಕರೆ ಸಚಿವರಾಗಿ ಕೆಲಸ ಮಾಡಿದರು.

ನಂತರ ಜೆಎಚ್​ ಪಟೇಲ್ ಸರ್ಕಾರದಲ್ಲೂ ಪ್ರಭಾವಿ ಲೋಕೋಪಯೋಗಿ ಖಾತೆಯನ್ನು ನಿಭಾಯಿಸಿದರು. 1999ರ ವಿಧಾನಸಭಾ ಚುನಾವಣೆಯಲ್ಲಿ ದೇವೇಗೌಡರಿಂದ ದೂರ ಸರಿದ ಉಮೇಶ್ ಕತ್ತಿ, ಜೆಡಿಯುನೊಂದಿಗೆ ಗುರುತಿಸಿಕೊಂಡು, ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದರು.

ಆದರೆ ನಂತರದ ಚುನಾವಣೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್​ ಚಿಹ್ನೆಯಲ್ಲಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರು. ಆ ಚುನಾವಣೆಯಲ್ಲಿ ಕತ್ತಿ ಮೊದಲ ಸೋಲಿನ ರುಚಿ ಕಂಡರು, ಇದು ಅವರ ಕೊನೆಯ ಸೋಲು ಆಗಿತ್ತು.

ನಂತರ 2008ರಲ್ಲಿ ಮತ್ತೆ ಜೆಡಿಎಸ್​ಗೆ ಬಂದು ಹುಕ್ಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು. ಆದರೆ ಚುನಾವಣೆ ಬಳಿಕ ನಡೆದ ಆಪರೇಷನ್ ಕಮಲದ ಭಾಗವಾಗಿ ಕತ್ತಿ ಬಿಜೆಪಿ ಸೇರಿದರು.

ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಉಮೇಶ್ ಕತ್ತಿ ಗೆಲುವು ಸಾಧಿಸಿ, ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಬಂಧೀಖಾನೆ, ಕೃಷಿ ಸಚಿವರಾಗಿ ಕೆಲಸ ಮಾಡಿದರು.

ನಂತರದ 2013-2018ರ ವಿಧಾನಸಭಾ ಚುನಾವಣೆಯಲ್ಲಿಯೂ ಉಮೇಶ್ ಕತ್ತಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ನಿರಾಯಾಸವಾಗಿ ಗೆದ್ದುಬಂದರು. ನಂತರ ಇತ್ತೀಚಿನ ಯಡಿಯೂರಪ್ಪ ಸರ್ಕಾರದಲ್ಲಿಯೂ ಉಮೇಶ್ ಕತ್ತಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಈಗ ಹಾಲಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಹಾಗೂ ಅರಣ್ಯ ಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಪ್ರತ್ಯೇಕ ರಾಜ್ಯದ ಕನಸು ಕಂಡಿದ್ದ ಕತ್ತಿ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಉಮೇಶ್ ಕತ್ತಿ ಸ್ಪಷ್ಟ ನಿಲುವು ಹೊಂದಿದ್ದರು, ಪಕ್ಷದ ಆದೇಶ ಹಾಗೂ ನಿಲುವಿನ ವಿರುದ್ಧವಾಗಿ ಆಗಾಗ ಧ್ವನಿ ಎತ್ತುತ್ತಲೇ ಇದ್ದರು. ಭವಿಷ್ಯದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ, ಆ ರಾಜ್ಯಕ್ಕೆ ನಾನೇ ಮೊದಲ ಮುಖ್ಯಮಂತ್ರಿಯಾಗುತ್ತೇನೆ ಎಂದು ಆಗಾಗ ಮಾಧ್ಯಮದೆದುರು ಹೇಳಿಕೆ ನೀಡುತ್ತಿದ್ದರು, ಇದಲ್ಲದೇ ಅಖಂಡ ಕರ್ನಾಟಕಕ್ಕೂ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದರು.

Published On - 10:00 pm, Wed, 7 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?