AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka MLC Election: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 8ನೇ ಬಾರಿಗೆ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು

ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. 8ನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡ ಬಸವರಾಜ್ ಹೊರಟ್ಟಿ ಅವರ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

Karnataka MLC Election: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 8ನೇ ಬಾರಿಗೆ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು
ಬಸವರಾಜ ಹೊರಟ್ಟಿ
TV9 Web
| Edited By: |

Updated on:Jun 15, 2022 | 12:56 PM

Share

ಬೆಳಗಾವಿ: ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಬಸವರಾಜ ಹೊರಟ್ಟಿ (Basavaraj Horatti) ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಗೆದ್ದು ಬೀಗಿದ ಬಸವರಾಜ ಹೊರಟ್ಟಿ ಗೆಲುವಿನ ನಗು ಬೀರಿದ್ದಾರೆ. ಬಸವರಾಜ ಹೊರಟ್ಟಿಯ ದಿಗ್ವಿಜಯದಿಂದ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಬಸವರಾಜ್ ಗುರಿಕಾರ, ಜೆಡಿಎಸ್‌ ಪಕ್ಷದ ಅಭ್ಯರ್ಥಿ ಶ್ರೀಶೈಲ ಗಿಡದಿನ್ನಿಗೆ ಮುಖಭಂಗವಾಗಿದೆ.

ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. 8ನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡ ಬಸವರಾಜ್ ಹೊರಟ್ಟಿ ಅವರ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ಗೆದ್ದ ಹಿನ್ನೆಲೆಯಲ್ಲಿ ಬಸವರಾಜ್ ಹೊರಟ್ಟಿ ಅಭಿಮಾನಿಗಳಿಂದ ಬೆಳಗಾವಿಯಲ್ಲಿ ವಿಜಯೋತ್ಸವ ನಡೆಸಲಾಗುತ್ತಿದೆ. ಮತ ಎಣಿಕೆ ಕೇಂದ್ರದ ಹೊರಗಡೆ ವಿಜಯೋತ್ಸವ ನಡೆಯುತ್ತಿದೆ. ಬಸವರಾಜ ಹೊರಟ್ಟಿ ಅವರ ಭಾವಚಿತ್ರ ಹಿಡಿದು, ಅವರ ಪರ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.

ಇದನ್ನೂ ಓದಿ
Image
ಬೆಳಗಾವಿ ಮತಗಟ್ಟೆ ಪೆಟ್ಟಿಗೆಯಲ್ಲಿ ಹೆಚ್ಚುವರಿ 5 ಮತ ಪತ್ರ ಪತ್ತೆ! ಕೌಂಟಿಂಗ್​ಗೆ ತಡೆಯೊಡ್ಡುವ ಬೆದರಿಕೆ ಹಾಕಿದ ಪಕ್ಷೇತರ ಅಭ್ಯರ್ಥಿ
Image
ಮಾತಿನ ಭರದಲ್ಲಿ ‘ಯಾವನ್ರೀ ಅವನು ಡಿಸಿ?’ ಅಂದುಬಿಟ್ಟರು ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ
Image
ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಮತ್ತು ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರ ಲಾಂಛನ ಬಳಸಿದ ಹಿನ್ನಲೆ ಬಸವರಾಜ ಹೊರಟ್ಟಿ ವಿರುದ್ಧ ನೋಟಿಸ್​ ಜಾರಿ
Image
ಟಿಕೆಟ್​ಗಾಗಿ ಹೊರಟ್ಟಿ ಮತ್ತು ಲಿಂಬಿಕಾಯಿ ನಡುವೆ ಪೈಪೋಟಿ |ಯಾರಿಗೆ ಒಲಿಯಲಿದೆ ಹುಬ್ಬಳ್ಳಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಟಿಕೆಟ್

ಇದನ್ನೂ ಓದಿ: ಇಂದು ಪರಿಷತ್​ನ 4 ಕ್ಷೇತ್ರಗಳ ಚುನಾವಣಾ ಫಲಿತಾಂಶ: 3 ಪಕ್ಷಗಳ 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ವಾಯುವ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 1400 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ವಾಯವ್ಯ ಪದವೀಧರ ಮತಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಗೊಂದಲ ಮುಂದುವರಿದಿದೆ. ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಮತಪೆಟ್ಟಿಗೆಯಲ್ಲಿ ಹೆಚ್ಚುವರಿ 5 ಮತ ಪತ್ರ ಪತ್ತೆಯಾಗಿದ್ದು, ಗೊಂದಲ ಸೃಷ್ಟಿಯಾಗಿದೆ. ಇಳಕಲ್ ಪಟ್ಟಣದ ಮತಗಟ್ಟೆ 101(ಎ) ಪೆಟ್ಟಿಗೆಯಲ್ಲಿ 171 ಮತ ಇರಬೇಕಿತ್ತು. ಆದರೆ 5 ಮತ ಪತ್ರ ಹೆಚ್ಚಿದೆ. ಹೆಚ್ಚುವರಿ 5 ಮತ ಪತ್ರ ಬಂದಿದ್ದಕ್ಕೆ ಪಕ್ಷೇತರ ಅಭ್ಯರ್ಥಿ ಎನ್​ಬಿ ಬನ್ನೂರು ಆಕ್ರೋಶ ವ್ಯಕ್ತಪಡಿಸಿದ್ದು, ಗೊಂದಲ ನಿವಾರಿಸದಿದ್ದರೆ ಕೌಂಟಿಂಗ್​ಗೆ ನಾವು ತಡೆ ಒಡ್ಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Wed, 15 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ