AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಇತ್ತೀಚೆಗೆ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ಜೈ ಶ್ರೀರಾಮ ಎಂದು ಹೇಳಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಅನ್ಯಕೋಮಿನ 20 ಯುವಕರ ಗುಂಪು ಸೇರಿ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ ಬೈಲಹೊಂಗಲ(Bailhongal)ದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದೆ.

ಬೆಳಗಾವಿ: ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ
Sahadev Mane
| Edited By: |

Updated on: Apr 25, 2024 | 8:59 PM

Share

ಬೆಳಗಾವಿ, ಏ.25:  ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬೈಲಹೊಂಗಲ(Bailhongal) ಬಸ್ ನಿಲ್ದಾಣದಲ್ಲಿ ನಡೆದಿದೆ. ಇನ್ನು ಈ ಬಸ್​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟ್ಟಿತ್ತು. ಈ ವೇಳೆ ಓಡಿ ಬಂದು ಬಸ್ ಹತ್ತಲು ಮಹಿಳೆ ಯತ್ನಿಸಿದ್ದಾರೆ. ಆಗ ಮಹಿಳೆಗೆ ನಿರ್ವಾಹಕ ಬೈಯ್ದಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ

ಇನ್ನು ಈ ವೇಳೆ ಜಗಳ ಬಿಡಿಸಲು ಬಂದ ಚಾಲಕರ ಮೇಲೆಯೂ ಹಲ್ಲೆ ಮಾಡಿದ ಯುವಕರು, ಬಸ್ ನಿಲ್ದಾಣದಲ್ಲಿದ್ದ ಕಂಟ್ರೋಲರ್ ಕೊಠಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಬಳಿಕ ರೊಚ್ಚಿಗೆದ್ದ ಚಾಲಕರು ಮತ್ತು ನಿರ್ವಾಹಕರು ಬೈಲಹೊಂಗಲ ಬಸ್ ನಿಲ್ದಾಣದಿಂದ ಹೊರಡುವ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಬೈಲಹೊಂಗಲ ಪೊಲೀಸ್ ಠಾಣೆ ಬಳಿ ಜಮಾವಣೆಯಾದ ಅವರು, ಹಲ್ಲೆ ಮಾಡಿದವರನ್ನ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಇದನ್ನೂ ಓದಿ:ಜೈಶ್ರೀರಾಮ ಹೇಳಿದ್ದಕ್ಕೆ ಹಲ್ಲೆ: ಘಟನೆ ಹೇಗಾಯ್ತು? ದೂರಿನಲ್ಲಿ ಘಟನೆ ಬಗ್ಗೆ ವಿವರಿಸಿದ ಹಲ್ಲೆಗೊಳಗಾದ ಯವಕ

ಘಟನೆ ವಿವರ

ಚಲಿಸುವ ವೇಳೆ ಬಸ್ ಹತ್ತಿದ ಮಹಿಳೆಗೆ, ಬಸ್​ ಹೊರಡುವಾಗ ಹತ್ತಬೇಡ ಎಂದು ನಿರ್ವಾಹಕ ಬುದ್ದಿವಾದ ಹೇಳಿದ್ದಾನೆ. ಈ ವೇಳೆ ಮಹಿಳೆ ನಿರ್ವಾಹಕನಿಗೆ ಬೈಯ್ದಿದ್ದಾರೆ. ಇದರಿಂದ ಮಾತಿನ ಚಕಮಕಿಯಾಗಿ ಚಾಲಕ ಬಸ್ ನಿಲ್ಲಿಸಿದ್ದಾನೆ. ಅದೇ ಸಮಯಕ್ಕೆ ಅಲ್ಲೇ ಸ್ಥಳದಲ್ಲಿದ್ದ ಕೆಲ ಯುವಕರ ಗುಂಪು ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ‌ ನಡೆಸಿದೆ. ಇನ್ನು ಪ್ರತಿಭಟನೆ ಸ್ಥಳಕ್ಕೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಭೇಟಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್