AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಅಂಬೇಡ್ಕರ್​ ಭಾವಚಿತ್ರಕ್ಕೆ ಅಪಮಾನ, ಎರಡು ಗುಂಪುಗಳ ನಡುವೆ ಗಲಾಟೆ

ಏ.14 ಡಾ. ಬಿಆರ್​ ಅಂಬೇಡ್ಕರ್​ ಅವರ ಜನ್ಮದಿನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆ ಮೇಲೆ ಇದ್ದ ಅಂಬೇಡ್ಕರ್​ ಅವರ ಭಾವಚಿತ್ರವನ್ನು ಕಿಡಿಗೇಡಿಗಳು ಕೆಳಗೆ ಬೀಳಿಸಿದ್ದು, ಇದರಿಂದ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.

ಬೆಳಗಾವಿ: ಅಂಬೇಡ್ಕರ್​ ಭಾವಚಿತ್ರಕ್ಕೆ ಅಪಮಾನ, ಎರಡು ಗುಂಪುಗಳ ನಡುವೆ ಗಲಾಟೆ
ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ, ಹಲ್ಲೆಗೊಳಗಾದ ಮಹಿಳೆ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:Apr 15, 2024 | 8:40 AM

Share

ಬೆಳಗಾವಿ, ಏಪ್ರಿಲ್​ 15: ಚಿಕ್ಕೋಡಿ (Chikkodi) ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಡಾ. ಬಿಆರ್​ ಅಂಬೇಡ್ಕರ್ (BR Ambedkar)​ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದ್ದು, ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ರವಿವಾರ (ಏ.14) ರಂದು ಬಿಆರ್​ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಿಕೆ ಮೇಲೆ ಅಂಬೇಡ್ಕರ್​ ಅವರ ಭಾವಚಿತ್ರವಿಟ್ಟು ಗೌರವಿಸಲಾಗಿತ್ತು. ಬಳಿಕ ಮೆರವಣೆಗೆ ನಡೆಯುವ ಸಂದರ್ಭದಲ್ಲಿ, ವೇದಿಕೆ ಮೇಲಿದ್ದ ಅಂಬೇಡ್ಕರ್​ ಅವರ ಭಾವಚಿತ್ರವನ್ನು ಕಿಡಿಗೇಡಿಗಳ ಗುಂಪು ಕೆಳಗೆ ಬೀಳಿಸಿ ಅಪಮಾನ ಮಾಡಿದೆ.

ಇದನ್ನು ಕಂಡ ಕಾರ್ಯಕ್ರಮ ಆಯೋಜಕರು ಮತ್ತು ಮೆರವಣಿಗೆಯಲ್ಲಿ ಭಾಗಿಯಾದ ಜನ ಕಿಡಿಗೇಡಿಗಳ ಗುಂಪನ್ನು ಪ್ರಶ್ನಿಸಿದ್ದಾರೆ. ಆಗ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಕಿಡಿಗೇಡಿಗಳ ಗುಂಪು ಮೆರವಣಿಗೆಯಲ್ಲಿ ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯುವಕರು, ಮಕ್ಕಳು ಮತ್ತು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಅಂಬೇಡ್ಕರ್ ಜಯಂತಿ ನಿಮಿತ್ತ ಹೊಸಪೇಟೆ ಉತ್ತರಾಧಿ ಮಠಕ್ಕೆ ಪ್ರವೇಶ ಮಾಡಿದ ದಲಿತರು

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದನ್ನು ಖಂಡಿಸಿ ಸದಲಗಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗಿತ್ತು. ಕೂಡಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ಸದಲಗಾ ಪೊಲೀಸ್ ಠಾಣೆ ಒಳಗೆ ಮತ್ತು ಠಾಣೆ ಮುಂದೆ ಮಹಿಳೆಯರು ಧರಣಿ ನಡೆಸಿದರು. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರನ್ನು ಬಂಧಿಸುವಂತೆ ಪಟ್ಟು ಹಿಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:54 am, Mon, 15 April 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ