AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ತೀರದಲ್ಲಿ ನೀರಿಗಾಗಿ ಹಾಹಾಕಾರ; ಜೀವವನ್ನೂ ಲೆಕ್ಕಿಸದೇ ಮೆಟ್ಟಲಿಲ್ಲದ ಬಾವಿಗಳಿದು ನೀರು ತುಂಬುತ್ತಿರೋ ಮಹಿಳೆಯರು

ಕೃಷ್ಣಾ ನದಿ ತೀರದಲ್ಲಿ ಭೀಕರ ಬರ ಎದುರಾಗಿದೆ. ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿದ್ದು, ಕಿಮೀ ಗಟ್ಟಲೆ ನಡೆದುಕೊಂಡು ಹೋಗಿ ನೀರು ತರುವ ಸ್ಥಿತಿ ಇದೆ. ಅದರಲ್ಲೂ ತೋಟದ ಮನೆಗಳಲ್ಲಿ ಹನಿ ನೀರಿಗೂ ಹಾಹಾಕಾರ ಶುರುವಾಗಿದ್ದು, ಬಾವಿ ನೀರಿನ ಮೇಲೆ ಅವಲಂಬನೆಯಾಗಿದ್ದಾರೆ. ಗ್ರಾಮದ ಮಹಿಳೆಯರು ಜೀವ ಲೆಕ್ಕಿಸದೇ ಬಾವಿಗಿಳಿದು ನೀರು ತರುವ ದೃಶ್ಯ ಎದೆ ಝಲ್ ಅನಿಸುತ್ತದೆ. ಅಷ್ಟಕ್ಕೂ ಹೇಗಿದೆ ಕೃಷ್ಣಾ ನದಿ ತಟದ ಗ್ರಾಮಗಳಲ್ಲಿ ನೀರಿಗಾಗಿ ಜನರ ಸ್ಥಿತಿ ಅಂತೀರಾ? ಈ ಸ್ಟೋರಿ ಓದಿ.

ಕೃಷ್ಣಾ ತೀರದಲ್ಲಿ ನೀರಿಗಾಗಿ ಹಾಹಾಕಾರ; ಜೀವವನ್ನೂ ಲೆಕ್ಕಿಸದೇ ಮೆಟ್ಟಲಿಲ್ಲದ ಬಾವಿಗಳಿದು ನೀರು ತುಂಬುತ್ತಿರೋ ಮಹಿಳೆಯರು
ಅಥಣಿ ತಾಲೂಕಿನಲ್ಲಿ ನೀರಿಗಾಗಿ ಹಾಹಾಕಾರ
Sahadev Mane
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 16, 2024 | 7:07 PM

Share

ಬೆಳಗಾವಿ, ಏ.16: ಜಿಲ್ಲೆಯ ಅಥಣಿ(Athani)ತಾಲೂಕಿನ ಅರಟಾಳ್ ಗ್ರಾಮದ ಮಹಾಲಿಂಗರಾಯ ತೋಟದ ಕಾಲೋನಿಯಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಮನೆಗಳಿದ್ದು, ಇದೀಗ ಹನಿ ನೀರಿಗೂ ಆ ಎಲ್ಲ ಕುಟುಂಬಗಳು ಪರಿತಪ್ಪಿಸುತ್ತಿವೆ. ಗಂಡಸರೆಲ್ಲರೂ ಕೆಲಸಕ್ಕೆ ಹೋದರೆ, ಮನೆಯಲ್ಲಿರುವ ಮಹಿಳೆಯರು ಇಡೀ ದಿನ ನೀರು ತುಂಬುವ ಕೆಲಸ ಮಾಡಬೇಕು. ಹೌದು, ಎರಡ್ಮೂರು ಕಿಮೀ ನಡೆದುಕೊಂಡು ಹೋಗಿ, ಜೀವವನ್ನ ಲೆಕ್ಕಿಸದೇ ಇಪ್ಪತ್ತು ಅಡಿ ಮೆಟ್ಟಿಲಿಲ್ಲದ ಬಾವಿಗೆ ಇಳಿದು ನೀರು ತುಂಬಿಕೊಂಡು ಬರಬೇಕು.

ಇನ್ನು ಜೀವ ಜಲಕ್ಕಾಗಿ ನಿತ್ಯವೂ ಈ ಗ್ರಾಮದ ಜನರು ಪರಿತಪ್ಪಿಸುತ್ತಿದ್ದಾರೆ. ಸಾಕಷ್ಟು ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಊರ ಪಕ್ಕದ ಕೆರೆ ತುಂಬಿಸುವಂತೆ ಮನವಿ ಮಾಡಿದರೂ ಪ್ರಯೋಜನ ಆಗುತ್ತಿಲ್ಲ. ಈ ಗ್ರಾಮದಿಂದ ಹತ್ತು ಕಿಮೀ ದೂರದಲ್ಲಿ ಕೃಷ್ಣಾ ನದಿ ಇದ್ದು, ಅಲ್ಲಿಂದ ನೀರು ತಂದು ತುಂಬಿಸುವ ಕೆಲಸ ಮಾಡುತ್ತಿಲ್ಲ. ಇದರಿಂದ ಬೆಸಿಗೆ ಬಂದರೆ ಸಾಕು ಮಹಿಳೆಯರು ನೀರು ತರುವುದನ್ನೇ ಕೆಲಸ ಮಾಡಿಕೊಳ್ಳುತ್ತಾರೆ. ಸ್ವಲ್ಪ ಯಾಮಾರಿದರೂ ಜೀವ ಹೋಗುವ ಸ್ಥಿತಿ ಇದ್ದರೂ,  ಅನಿವಾರ್ಯವಾಗಿ ಬಾವಿಗಿಳಿದು ನೀರು ತುಂಬುತ್ತಾರೆ. ಈ ಕುರಿತ ಅಧಿಕಾರಿಗಳಿಗೆ ಹೇಳಿ ಸುಸ್ತಾಗಿರುವ ಗ್ರಾಮಸ್ಥರು, ನೀರು ಸಿಗದಿದ್ದಕ್ಕೆ ಊರು ಬಿಟ್ಟು ಹೋಗುವ ಸ್ಥಿತಿ ಇದೆ, ಕಡೆ ಪಕ್ಷ ಟ್ಯಾಂಕರ್ ನೀರಿನ ವ್ಯವಸ್ಥೆ ಆದರೂ ಮಾಡಿಸಿ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಅನುದಾನ ಬಿಡುಗಡೆ ಮಾಡದ ಕಾಂಗ್ರೆಸ್ ಸರ್ಕಾರ; ಯಾದಗಿರಿ ನಗರದಲ್ಲಿ ನೀರಿಗಾಗಿ ಹಾಹಾಕಾರ

ಸದ್ಯ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಬೋರ್​ವೆಲ್​ಗಳು ಬತ್ತುತ್ತಿವೆ. ಇತ್ತ ಕೆರೆಯಲ್ಲಿ ನೀರು ಖಾಲಿಯಾಗಿ ಜನ ಊರು ಬಿಡುವ ಸ್ಥಿತಿ ಕೂಡ ನಿರ್ಮಾಣವಾಗಿದೆ. ಚುನಾವಣೆಯಲ್ಲಿ ಬಿಜಿ ಇರುವ ಅಧಿಕಾರಿಗಳು ಜನರ ನೀರಿನ ಸಮಸ್ಯೆಯನ್ನ ಬಗೆ ಹರಿಸುವ ಕೆಲಸ ಮಾಡಲಿ. ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್ ನೀರು ಕೊಡಿ ಎಂದು ಜಿಲ್ಲಾಧಿಕಾರಿ ಹೇಳಿದರೂ ಅಧಿಕಾರಿಗಳು ಮಾತ್ರ ಡೋಂಟ್ ಕೆರ್ ಅಂತಿದ್ದು, ಇನ್ನಾದರೂ ಈ ಗ್ರಾಮದ ಜನರಿಗೆ ನೀರು ಕೊಡಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?