Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ತೀರದಲ್ಲಿ ನೀರಿಗಾಗಿ ಹಾಹಾಕಾರ; ಜೀವವನ್ನೂ ಲೆಕ್ಕಿಸದೇ ಮೆಟ್ಟಲಿಲ್ಲದ ಬಾವಿಗಳಿದು ನೀರು ತುಂಬುತ್ತಿರೋ ಮಹಿಳೆಯರು

ಕೃಷ್ಣಾ ನದಿ ತೀರದಲ್ಲಿ ಭೀಕರ ಬರ ಎದುರಾಗಿದೆ. ಕುಡಿಯುವ ನೀರಿಗಾಗಿ ಜನ ಪರಿತಪ್ಪಿಸುತ್ತಿದ್ದು, ಕಿಮೀ ಗಟ್ಟಲೆ ನಡೆದುಕೊಂಡು ಹೋಗಿ ನೀರು ತರುವ ಸ್ಥಿತಿ ಇದೆ. ಅದರಲ್ಲೂ ತೋಟದ ಮನೆಗಳಲ್ಲಿ ಹನಿ ನೀರಿಗೂ ಹಾಹಾಕಾರ ಶುರುವಾಗಿದ್ದು, ಬಾವಿ ನೀರಿನ ಮೇಲೆ ಅವಲಂಬನೆಯಾಗಿದ್ದಾರೆ. ಗ್ರಾಮದ ಮಹಿಳೆಯರು ಜೀವ ಲೆಕ್ಕಿಸದೇ ಬಾವಿಗಿಳಿದು ನೀರು ತರುವ ದೃಶ್ಯ ಎದೆ ಝಲ್ ಅನಿಸುತ್ತದೆ. ಅಷ್ಟಕ್ಕೂ ಹೇಗಿದೆ ಕೃಷ್ಣಾ ನದಿ ತಟದ ಗ್ರಾಮಗಳಲ್ಲಿ ನೀರಿಗಾಗಿ ಜನರ ಸ್ಥಿತಿ ಅಂತೀರಾ? ಈ ಸ್ಟೋರಿ ಓದಿ.

ಕೃಷ್ಣಾ ತೀರದಲ್ಲಿ ನೀರಿಗಾಗಿ ಹಾಹಾಕಾರ; ಜೀವವನ್ನೂ ಲೆಕ್ಕಿಸದೇ ಮೆಟ್ಟಲಿಲ್ಲದ ಬಾವಿಗಳಿದು ನೀರು ತುಂಬುತ್ತಿರೋ ಮಹಿಳೆಯರು
ಅಥಣಿ ತಾಲೂಕಿನಲ್ಲಿ ನೀರಿಗಾಗಿ ಹಾಹಾಕಾರ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 16, 2024 | 7:07 PM

ಬೆಳಗಾವಿ, ಏ.16: ಜಿಲ್ಲೆಯ ಅಥಣಿ(Athani)ತಾಲೂಕಿನ ಅರಟಾಳ್ ಗ್ರಾಮದ ಮಹಾಲಿಂಗರಾಯ ತೋಟದ ಕಾಲೋನಿಯಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಮನೆಗಳಿದ್ದು, ಇದೀಗ ಹನಿ ನೀರಿಗೂ ಆ ಎಲ್ಲ ಕುಟುಂಬಗಳು ಪರಿತಪ್ಪಿಸುತ್ತಿವೆ. ಗಂಡಸರೆಲ್ಲರೂ ಕೆಲಸಕ್ಕೆ ಹೋದರೆ, ಮನೆಯಲ್ಲಿರುವ ಮಹಿಳೆಯರು ಇಡೀ ದಿನ ನೀರು ತುಂಬುವ ಕೆಲಸ ಮಾಡಬೇಕು. ಹೌದು, ಎರಡ್ಮೂರು ಕಿಮೀ ನಡೆದುಕೊಂಡು ಹೋಗಿ, ಜೀವವನ್ನ ಲೆಕ್ಕಿಸದೇ ಇಪ್ಪತ್ತು ಅಡಿ ಮೆಟ್ಟಿಲಿಲ್ಲದ ಬಾವಿಗೆ ಇಳಿದು ನೀರು ತುಂಬಿಕೊಂಡು ಬರಬೇಕು.

ಇನ್ನು ಜೀವ ಜಲಕ್ಕಾಗಿ ನಿತ್ಯವೂ ಈ ಗ್ರಾಮದ ಜನರು ಪರಿತಪ್ಪಿಸುತ್ತಿದ್ದಾರೆ. ಸಾಕಷ್ಟು ಬಾರಿ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಊರ ಪಕ್ಕದ ಕೆರೆ ತುಂಬಿಸುವಂತೆ ಮನವಿ ಮಾಡಿದರೂ ಪ್ರಯೋಜನ ಆಗುತ್ತಿಲ್ಲ. ಈ ಗ್ರಾಮದಿಂದ ಹತ್ತು ಕಿಮೀ ದೂರದಲ್ಲಿ ಕೃಷ್ಣಾ ನದಿ ಇದ್ದು, ಅಲ್ಲಿಂದ ನೀರು ತಂದು ತುಂಬಿಸುವ ಕೆಲಸ ಮಾಡುತ್ತಿಲ್ಲ. ಇದರಿಂದ ಬೆಸಿಗೆ ಬಂದರೆ ಸಾಕು ಮಹಿಳೆಯರು ನೀರು ತರುವುದನ್ನೇ ಕೆಲಸ ಮಾಡಿಕೊಳ್ಳುತ್ತಾರೆ. ಸ್ವಲ್ಪ ಯಾಮಾರಿದರೂ ಜೀವ ಹೋಗುವ ಸ್ಥಿತಿ ಇದ್ದರೂ,  ಅನಿವಾರ್ಯವಾಗಿ ಬಾವಿಗಿಳಿದು ನೀರು ತುಂಬುತ್ತಾರೆ. ಈ ಕುರಿತ ಅಧಿಕಾರಿಗಳಿಗೆ ಹೇಳಿ ಸುಸ್ತಾಗಿರುವ ಗ್ರಾಮಸ್ಥರು, ನೀರು ಸಿಗದಿದ್ದಕ್ಕೆ ಊರು ಬಿಟ್ಟು ಹೋಗುವ ಸ್ಥಿತಿ ಇದೆ, ಕಡೆ ಪಕ್ಷ ಟ್ಯಾಂಕರ್ ನೀರಿನ ವ್ಯವಸ್ಥೆ ಆದರೂ ಮಾಡಿಸಿ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಅನುದಾನ ಬಿಡುಗಡೆ ಮಾಡದ ಕಾಂಗ್ರೆಸ್ ಸರ್ಕಾರ; ಯಾದಗಿರಿ ನಗರದಲ್ಲಿ ನೀರಿಗಾಗಿ ಹಾಹಾಕಾರ

ಸದ್ಯ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಬೋರ್​ವೆಲ್​ಗಳು ಬತ್ತುತ್ತಿವೆ. ಇತ್ತ ಕೆರೆಯಲ್ಲಿ ನೀರು ಖಾಲಿಯಾಗಿ ಜನ ಊರು ಬಿಡುವ ಸ್ಥಿತಿ ಕೂಡ ನಿರ್ಮಾಣವಾಗಿದೆ. ಚುನಾವಣೆಯಲ್ಲಿ ಬಿಜಿ ಇರುವ ಅಧಿಕಾರಿಗಳು ಜನರ ನೀರಿನ ಸಮಸ್ಯೆಯನ್ನ ಬಗೆ ಹರಿಸುವ ಕೆಲಸ ಮಾಡಲಿ. ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್ ನೀರು ಕೊಡಿ ಎಂದು ಜಿಲ್ಲಾಧಿಕಾರಿ ಹೇಳಿದರೂ ಅಧಿಕಾರಿಗಳು ಮಾತ್ರ ಡೋಂಟ್ ಕೆರ್ ಅಂತಿದ್ದು, ಇನ್ನಾದರೂ ಈ ಗ್ರಾಮದ ಜನರಿಗೆ ನೀರು ಕೊಡಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ