AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ

ಕರ್ನಾಟಕದ ಚಳಿಗಾಲದ ಅಧಿವೇಶನವು ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಮುಡಾ ಹಗರಣ, ವಕ್ಫ್ ಆಸ್ತಿ ವಿವಾದ, ಮತ್ತು ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳು ಮುಖ್ಯ ಚರ್ಚಾ ವಿಷಯಗಳಾಗುವ ಸಾಧ್ಯತೆ ಇದೆ. ವಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆರೋಪಗಳನ್ನು ಮಾಡುವ ನಿರೀಕ್ಷೆಯಿದೆ.

ಡಿಸೆಂಬರ್​ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ
ಸುವರ್ಣ ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Nov 20, 2024 | 2:05 PM

Share

ಬೆಳಗಾವಿ, ನವೆಂಬರ್​ 19: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ (Karnataka Winter session) ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Soudha) ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅವರು ಅಧಿವೇಶನ ಕರೆದಿದ್ದಾರೆ. ಡಿಸೆಂಬರ್​ 9 ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ಇತ್ತೀಚಿಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾಸಭಾಧ್ಯಕ್ಷ ಯು.ಟಿ ಖಾದರ್​ ಮತ್ತು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು.

ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿರುವ ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಚಾಟಿ ಬೀಸಲು ವಿಪಕ್ಷಗಳು ತಯಾರಿ ನಡೆಸಿವೆ. ಹಾಗೇ ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳಾದ ಮೂಲಭೂತ ಸೌಕರ್ಯದ ವಿಚಾರಕ್ಕೆ ಈ ಬಾರಿಯಾದರೂ ಪರಿಹಾರ ಸಿಗುತ್ತಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಗಾಂಧೀಜಿ ಬೆಳಗಾವಿ ಸಭೆಗೆ 100 ವರ್ಷ, ಜಂಟಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ: ಹೆಚ್​ಕೆ ಪಾಟೀಲ್​

ಚಳಿಗಾಲದ ಅಧಿವೇಶನದ ಜೊತೆಗೆ ಡಿಸೆಂಬರ್​ 26 ಮತ್ತು 27 ರಂದು ಬೆಳಗಾವಿಯಲ್ಲೇ ಕಾಂಗ್ರೆಸ್​ ಅಧಿವೇಶನ ನೆಡಸಲು ಪಕ್ಷ ತೀರ್ಮಾನಿಸಿದೆ. 1924 ಡಿಸೆಂಬರ್​ 26 ಮತ್ತು 27 ರಂದು ಬೆಳಗಾವಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್​ ಅಧಿವೇಶನ ಉದ್ದೇಶಿಸಿ ಮಹಾತ್ಮಾ ಗಾಂಧೀಜಿ ಮಾತನಾಡಿದ್ದರು. ಈ ಕಾರ್ಯಕ್ರಮಕ್ಕೆ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ ಬಾರಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಅಧಿವೇಶನ ನೆಡೆಸಲು ನಿರ್ಧರಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Tue, 19 November 24

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ