AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ

ಕರ್ನಾಟಕದ ಚಳಿಗಾಲದ ಅಧಿವೇಶನವು ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಮುಡಾ ಹಗರಣ, ವಕ್ಫ್ ಆಸ್ತಿ ವಿವಾದ, ಮತ್ತು ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳು ಮುಖ್ಯ ಚರ್ಚಾ ವಿಷಯಗಳಾಗುವ ಸಾಧ್ಯತೆ ಇದೆ. ವಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ಆರೋಪಗಳನ್ನು ಮಾಡುವ ನಿರೀಕ್ಷೆಯಿದೆ.

ಡಿಸೆಂಬರ್​ 9 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ
ಸುವರ್ಣ ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 20, 2024 | 2:05 PM

Share

ಬೆಳಗಾವಿ, ನವೆಂಬರ್​ 19: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ (Karnataka Winter session) ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Soudha) ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅವರು ಅಧಿವೇಶನ ಕರೆದಿದ್ದಾರೆ. ಡಿಸೆಂಬರ್​ 9 ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.

ಇತ್ತೀಚಿಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾಸಭಾಧ್ಯಕ್ಷ ಯು.ಟಿ ಖಾದರ್​ ಮತ್ತು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು.

ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಮುಡಾ ಹಗರಣದ ಆರೋಪ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿರುವ ವಕ್ಫ್ ಆಸ್ತಿ ವಿವಾದ ಚರ್ಚೆಗೆ ಪ್ರಮುಖ ಬಿಂದುಗಳಾಗಬಹದು. ಈ ಎರಡೂ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಚಾಟಿ ಬೀಸಲು ವಿಪಕ್ಷಗಳು ತಯಾರಿ ನಡೆಸಿವೆ. ಹಾಗೇ ಉತ್ತರ ಕರ್ನಾಟಕದ ಜಲ್ವಂತರ ಸಮಸ್ಯೆಗಳಾದ ಮೂಲಭೂತ ಸೌಕರ್ಯದ ವಿಚಾರಕ್ಕೆ ಈ ಬಾರಿಯಾದರೂ ಪರಿಹಾರ ಸಿಗುತ್ತಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಗಾಂಧೀಜಿ ಬೆಳಗಾವಿ ಸಭೆಗೆ 100 ವರ್ಷ, ಜಂಟಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ: ಹೆಚ್​ಕೆ ಪಾಟೀಲ್​

ಚಳಿಗಾಲದ ಅಧಿವೇಶನದ ಜೊತೆಗೆ ಡಿಸೆಂಬರ್​ 26 ಮತ್ತು 27 ರಂದು ಬೆಳಗಾವಿಯಲ್ಲೇ ಕಾಂಗ್ರೆಸ್​ ಅಧಿವೇಶನ ನೆಡಸಲು ಪಕ್ಷ ತೀರ್ಮಾನಿಸಿದೆ. 1924 ಡಿಸೆಂಬರ್​ 26 ಮತ್ತು 27 ರಂದು ಬೆಳಗಾವಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್​ ಅಧಿವೇಶನ ಉದ್ದೇಶಿಸಿ ಮಹಾತ್ಮಾ ಗಾಂಧೀಜಿ ಮಾತನಾಡಿದ್ದರು. ಈ ಕಾರ್ಯಕ್ರಮಕ್ಕೆ 100 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ ಬಾರಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಅಧಿವೇಶನ ನೆಡೆಸಲು ನಿರ್ಧರಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Tue, 19 November 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್