AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಪ್ಪು ಹಂದಿಯನ್ನು ಖಾನಾಪುರದಿಂದ ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ ಆರೋಪಿಗಳು ಅರೆಸ್ಟ್​

ಬೆಳಗಾವಿ ಜಿಲ್ಲೆಯ ಖಾನಾಪುರ ಕಾಡಿನಲ್ಲಿನ ಚಿಪ್ಪು ಹಂದಿಯನ್ನು ಅಕ್ರವಾಗಿ ಚೀನಾಗೆ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳನ್ನು ರಕ್ಷಣೆ ಮಾಡಲು ಇಂತಹ ಖದೀಮರ ಗ್ಯಾಂಗ್ ಅನ್ನು ಅರಣ್ಯ ಇಲಾಖೆ ಮಟ್ಟ ಹಾಕಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಚಿಪ್ಪು ಹಂದಿಯನ್ನು ಖಾನಾಪುರದಿಂದ ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ ಆರೋಪಿಗಳು ಅರೆಸ್ಟ್​
ಚಿಪ್ಪು ಹಂದಿಯ ರಕ್ಷಣೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 04, 2024 | 8:44 AM

Share

ಬೆಳಗಾವಿ, ಅಕ್ಟೋಬರ್​ 04: ಚಿಪ್ಪು ಹಂದಿಯನ್ನು (Shell Pork) ಚೀನಾಗೆ (China) ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಗುರುವಾರ ಖಾನಾಪುರ (Khanapur) ಕಾಡಿನಲ್ಲಿ ಚಿಪ್ಪು ಹಂದಿಯನ್ನು ಹಿಡಿದು, ಲೋಂಡಾ ಗ್ರಾಮದ ರೇಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ಚೀಲದ ಕೆಳಭಾಗದಲ್ಲಿ ಚಿಪ್ಪು ಹಂದಿ ಇರಿಸಿ, ಮೇಲ್ಭಾಗದಲ್ಲಿ ತರಕಾರಿ ಇಟ್ಟು ಯಾರಿಗೂ ಸಂಶಯ ಬರದಂತೆ ಬಂದಿದ್ದಾರೆ.

ನಿಲ್ದಾಣದಲ್ಲಿ ಆರೋಪಿಗಳ ಸಂಶಯಾಸ್ಪದ ಓಡಾಟ ಕಂಡ ಅರಣ್ಯ ಇಲಾಖೆ ಸಿಬ್ಬಂದಿ, ಹಿಡಿದು ವಿಚಾರಣೆ ಮಾಡಿದಾಗ ಚಿಪ್ಪು ಹಂದಿ ಸಾಗಾಟ ಬೆಳಕಿಗೆ ಬಂದಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಚಿಪ್ಪು ಹಂದಿಯನ್ನ ರಕ್ಷಣೆ ಮಾಡಿದ್ದಾರೆ. ವಿಚಾರಣೆ ನಡೆಸಿ ಆರೋಪಿಗಳನ್ನು ಹಾಗೂ ಜೀವಂತ ಚಿಪ್ಪು ಹಂದಿಯನ್ನು ಅಧಿಕಾರಿಗಳು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಚಿಪ್ಪು ಹಂದಿಯನ್ನು ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಲೋಂಡಾ ರೇಲ್ವೆ ನಿಲ್ದಾಣದಿಂದ ಕಾರವಾರ ಅಥವಾ ಗೋವಾದ ಬಂದರಿಗೆ ಚಿಪ್ಪು ಹಂದಿಯನ್ನು ಸಾಗಿಸುತ್ತಾರೆ. ಅಲ್ಲಿಂದ ಕೊಲ್ಕತ್ತಾ ಬಂದರಿಗೆ ಹೋಗುವ ಈ ಚಿಪ್ಪು ಹಂದಿ, ಅಲ್ಲಿಂದ ನೇರವಾಗಿ ಹಡಗಿನಲ್ಲಿ ಚೀನಾಗೆ ಹೋಗುತ್ತೆ.

ಇದನ್ನೂ ಓದಿ: ಬೆಳಗಾವಿ ಕರ್ನಾಟಕದ ಮೊಟ್ಟ ಮೊದಲ ಕತ್ತೆಕಿರುಬ ಸಂರಕ್ಷಿತ ಪ್ರದೇಶ: ಪ್ರಸ್ತಾವನೆ ಸಲ್ಲಿಕೆ

ಈ ಚಿಪ್ಪು ಹಂದಿಯ ಚಿಪ್ಪನ್ನು ಪುರುಷತ್ವ ಹೆಚ್ಚಿಸುವ ಔಷಧಕ್ಕೆ ಬಳಸಲಾಗುತ್ತದೆ. ಹೀಗೆ ತಯಾರು ಮಾಡಿದ ಔಷದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬಲು ಬೇಡಿಕೆ ಇದೆ. ಹೀಗಾಗಿ ಚಿಪ್ಪು ಹಂದಿಗಳನ್ನು ವ್ಯವಸ್ಥಿತವಾಗಿ ಸಾಗಿಸುವ ಗ್ಯಾಂಗ್ ಆ್ಯಕ್ಟಿವ್​ ಆಗಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು, ಇವರ ಹಿಂದೆ ಯಾರಿದ್ದಾರೆ, ಗ್ಯಾಂಗ್​ ಹೇಗೆ ಕೆಲಸ ಮಾಡುತ್ತಿದೆ ಎಂಬೆಲ್ಲ ಆಯಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳನ್ನು ಸಂರಕ್ಷಣೆ ಮಾಡಲು ಇಂತಹ ಖದೀಮರ ಗ್ಯಾಂಗ್ ಅನ್ನು ಅರಣ್ಯ ಇಲಾಖೆ ಮಟ್ಟ ಹಾಕಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ