ಚಿಪ್ಪು ಹಂದಿಯನ್ನು ಖಾನಾಪುರದಿಂದ ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ ಆರೋಪಿಗಳು ಅರೆಸ್ಟ್​

ಬೆಳಗಾವಿ ಜಿಲ್ಲೆಯ ಖಾನಾಪುರ ಕಾಡಿನಲ್ಲಿನ ಚಿಪ್ಪು ಹಂದಿಯನ್ನು ಅಕ್ರವಾಗಿ ಚೀನಾಗೆ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳನ್ನು ರಕ್ಷಣೆ ಮಾಡಲು ಇಂತಹ ಖದೀಮರ ಗ್ಯಾಂಗ್ ಅನ್ನು ಅರಣ್ಯ ಇಲಾಖೆ ಮಟ್ಟ ಹಾಕಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಚಿಪ್ಪು ಹಂದಿಯನ್ನು ಖಾನಾಪುರದಿಂದ ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ ಆರೋಪಿಗಳು ಅರೆಸ್ಟ್​
ಚಿಪ್ಪು ಹಂದಿಯ ರಕ್ಷಣೆ
Follow us
| Updated By: ವಿವೇಕ ಬಿರಾದಾರ

Updated on: Oct 04, 2024 | 8:44 AM

ಬೆಳಗಾವಿ, ಅಕ್ಟೋಬರ್​ 04: ಚಿಪ್ಪು ಹಂದಿಯನ್ನು (Shell Pork) ಚೀನಾಗೆ (China) ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಗುರುವಾರ ಖಾನಾಪುರ (Khanapur) ಕಾಡಿನಲ್ಲಿ ಚಿಪ್ಪು ಹಂದಿಯನ್ನು ಹಿಡಿದು, ಲೋಂಡಾ ಗ್ರಾಮದ ರೇಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ಚೀಲದ ಕೆಳಭಾಗದಲ್ಲಿ ಚಿಪ್ಪು ಹಂದಿ ಇರಿಸಿ, ಮೇಲ್ಭಾಗದಲ್ಲಿ ತರಕಾರಿ ಇಟ್ಟು ಯಾರಿಗೂ ಸಂಶಯ ಬರದಂತೆ ಬಂದಿದ್ದಾರೆ.

ನಿಲ್ದಾಣದಲ್ಲಿ ಆರೋಪಿಗಳ ಸಂಶಯಾಸ್ಪದ ಓಡಾಟ ಕಂಡ ಅರಣ್ಯ ಇಲಾಖೆ ಸಿಬ್ಬಂದಿ, ಹಿಡಿದು ವಿಚಾರಣೆ ಮಾಡಿದಾಗ ಚಿಪ್ಪು ಹಂದಿ ಸಾಗಾಟ ಬೆಳಕಿಗೆ ಬಂದಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಚಿಪ್ಪು ಹಂದಿಯನ್ನ ರಕ್ಷಣೆ ಮಾಡಿದ್ದಾರೆ. ವಿಚಾರಣೆ ನಡೆಸಿ ಆರೋಪಿಗಳನ್ನು ಹಾಗೂ ಜೀವಂತ ಚಿಪ್ಪು ಹಂದಿಯನ್ನು ಅಧಿಕಾರಿಗಳು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಚಿಪ್ಪು ಹಂದಿಯನ್ನು ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಗಳು ಲೋಂಡಾ ರೇಲ್ವೆ ನಿಲ್ದಾಣದಿಂದ ಕಾರವಾರ ಅಥವಾ ಗೋವಾದ ಬಂದರಿಗೆ ಚಿಪ್ಪು ಹಂದಿಯನ್ನು ಸಾಗಿಸುತ್ತಾರೆ. ಅಲ್ಲಿಂದ ಕೊಲ್ಕತ್ತಾ ಬಂದರಿಗೆ ಹೋಗುವ ಈ ಚಿಪ್ಪು ಹಂದಿ, ಅಲ್ಲಿಂದ ನೇರವಾಗಿ ಹಡಗಿನಲ್ಲಿ ಚೀನಾಗೆ ಹೋಗುತ್ತೆ.

ಇದನ್ನೂ ಓದಿ: ಬೆಳಗಾವಿ ಕರ್ನಾಟಕದ ಮೊಟ್ಟ ಮೊದಲ ಕತ್ತೆಕಿರುಬ ಸಂರಕ್ಷಿತ ಪ್ರದೇಶ: ಪ್ರಸ್ತಾವನೆ ಸಲ್ಲಿಕೆ

ಈ ಚಿಪ್ಪು ಹಂದಿಯ ಚಿಪ್ಪನ್ನು ಪುರುಷತ್ವ ಹೆಚ್ಚಿಸುವ ಔಷಧಕ್ಕೆ ಬಳಸಲಾಗುತ್ತದೆ. ಹೀಗೆ ತಯಾರು ಮಾಡಿದ ಔಷದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬಲು ಬೇಡಿಕೆ ಇದೆ. ಹೀಗಾಗಿ ಚಿಪ್ಪು ಹಂದಿಗಳನ್ನು ವ್ಯವಸ್ಥಿತವಾಗಿ ಸಾಗಿಸುವ ಗ್ಯಾಂಗ್ ಆ್ಯಕ್ಟಿವ್​ ಆಗಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು, ಇವರ ಹಿಂದೆ ಯಾರಿದ್ದಾರೆ, ಗ್ಯಾಂಗ್​ ಹೇಗೆ ಕೆಲಸ ಮಾಡುತ್ತಿದೆ ಎಂಬೆಲ್ಲ ಆಯಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳನ್ನು ಸಂರಕ್ಷಣೆ ಮಾಡಲು ಇಂತಹ ಖದೀಮರ ಗ್ಯಾಂಗ್ ಅನ್ನು ಅರಣ್ಯ ಇಲಾಖೆ ಮಟ್ಟ ಹಾಕಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?