AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಜಮೀನಿನ ಹಕ್ಕು ಪತ್ರಕ್ಕಾಗಿ 9 ಗ್ರಾಮಗಳ ರೈತರು ನಡೆಸುತ್ತಿದ್ದ ಪ್ರತಿಭಟನೆ ತಾತ್ಕಾಲಿಕ ವಾಪಸ್

ಜಮೀನಿನ ಹಕ್ಕು ಪತ್ರಗಳನ್ನು ನೀಡುವಂತೆ ಆಗ್ರಹಿಸಿ ಬೆಳಗಾವಿಯ ಕಿತ್ತೂರಿನಲ್ಲಿ ಕುಲವಳ್ಳಿ ಸೇರಿದಂತೆ ಒಟ್ಟು ಒಂಬತ್ತು ಗ್ರಾಮಗಳ ರೈತರು ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ನಡುವೆ ಮಧ್ಯಪ್ರವೇಶಿಸಿದ ಇಬ್ಬರು ಸ್ವಾಮೀಜಿಗಳು ರೈತರೊಂದಿಗೆ ಸಂಧಾನ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಶ್ರಮಿಸುವ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಬೆಳಗಾವಿ: ಜಮೀನಿನ ಹಕ್ಕು ಪತ್ರಕ್ಕಾಗಿ 9 ಗ್ರಾಮಗಳ ರೈತರು ನಡೆಸುತ್ತಿದ್ದ ಪ್ರತಿಭಟನೆ ತಾತ್ಕಾಲಿಕ ವಾಪಸ್
ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ತಾತ್ಕಾಲಿಕವಾಗಿ ವಾಪಸ್
ಸಹದೇವ್​ ಮಾನೆ
| Edited By: Rakesh Nayak Manchi|

Updated on: Dec 09, 2023 | 7:53 PM

Share

ಬೆಳಗಾವಿ, ಡಿ.9: ಜಮೀನು ಹಕ್ಕು ಪತ್ರಗಳನ್ನು ನೀಡುವಂತೆ ಆಗ್ರಹಿಸಿ ಜಿಲ್ಲೆಯ (Belagavi) ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಕುಲವಳ್ಳಿ ಸೇರಿ ಒಂಬತ್ತು ಗ್ರಾಮಗಳ ರೈತರು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೇಂದ್ರ ಸ್ವಾಮೀಜಿ ಹಾಗೂ ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಯವರು ಸಚಿವರನ್ನು ಭೇಟಿ ಮಾಡಿಸೋ ಜವಾಬ್ದಾರಿ ಹೊತ್ತ ಹಿನ್ನೆಲೆ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೇಂದ್ರ ಸ್ವಾಮೀಜಿ ಹಾಗೂ ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು ರೈತರೊಂದಿಗೆ ಸಂಧಾನ ನಡೆಸಿ ಅವರ ಮನವೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಚಿವರನ್ನು ಭೇಟಿ ಮಾಡಿಸುವ ಜವಾಬ್ದಾರಿಯನ್ನು ಇಬ್ಬರು ಶ್ರೀಗಳು ಹೊತ್ತ ಹಿನ್ನೆಲೆ ಸತ್ಯಾಗ್ರಹವನ್ನು ತಾತ್ಕಾಲಿಕ ವಾಪಸ್ ಪಡೆಯಲು ರೈತರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಡಿ.13 ರಂದು ಬೆಳಗಾವಿಯಲ್ಲಿ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ

ಬಂಧಿತ 12 ಜನರಿಗೆ ಜಾಮೀನು ಆದ ಬಳಿಕ ಸಚಿವರು, ಜಿಲ್ಲಾಧಿಕಾರಿ ಅವರ ಭೇಟಿಗೆ ತೀರ್ಮಾನ ಮಾಡಲಾಗುವುದು. ಬಂಧಿತರ ಬಳಿ ಭೂಮಿಗೆ ಸಂಬಂಧಿತ ದಾಖಲು ಪತ್ರಗಳು ಇವೆ. ಜಾಮೀನು ಸಿಕ್ಕ ಬಳಿಕ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಕೆಗೆ ತೀರ್ಮಾ‌ನ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ