AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೋಮಿನ ಗುಂಪಿನಿಂದ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಚಾಕು, ರಾಡ್, ಕಲ್ಲಿನಿಂದ ಹಲ್ಲೆ

ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.

ಒಂದು ಕೋಮಿನ ಗುಂಪಿನಿಂದ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಚಾಕು, ರಾಡ್, ಕಲ್ಲಿನಿಂದ ಹಲ್ಲೆ
ಗಾಯಗೊಳಗಾದ ಯುವಕರು
TV9 Web
| Updated By: ವಿವೇಕ ಬಿರಾದಾರ|

Updated on:Oct 09, 2022 | 6:24 PM

Share

ಬೆಳಗಾವಿ: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ಬೈಕ್ ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಒಂದು ಕೋಮಿನ ಐದಕ್ಕೂ ಅಧಿಕ ಯುವಕರು ಚಾಕು, ರಾಡ್, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್‌ಗೆ ಚಾಕು ಇರಿಯಲಾಗಿದೆ. ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್​ನಿಂದ ಹಲ್ಲೆ ಮಾಡಲಾಗಿದೆ.

ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ್ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೀನ್ ಜಂಗಲಶೇಖ್ ಮತ್ತು ಸಹಚರರಿಂದ ಹಲ್ಲೆ ನಡೆದದಿರುವ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆಸ್ಪತ್ರೆ ಬಳಿ ಸಂಬಂಧಿಕರು ಜಮಾವಣೆಗೊಳ್ಳುತ್ತಿದ್ದಾರೆ. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಂಡತಿ ಮೇಲೆ ಕಣ್ಣು ಹಾಕಿದ್ದಕ್ಕೆ ಸ್ನೇಹಿತನ ಮರ್ಡರ್

ಬೆಳಗಾವಿ: ಅ.7ರಂದು ಕರೋಶಿ ಗ್ರಾಮದಲ್ಲಿ ಕೊಳೆತ ಸ್ಥಿಯಲ್ಲಿ ಯುವಕನ ಶವ ಪತ್ತೆಯಾಗಿತ್ತು. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಚಿಕ್ಕೋಡಿ ಪೊಲೀಸರು, ಸಾವಿನ ಕಾರಣವನ್ನು ಬೇಧಿಸಿದ್ದಾರೆ. ಕಳೆದ ರವಿವಾರ ಅ.2 ರಂದು ಕೊಲೆಯಾದ ಸುನೀಲ್ ಸಾಳುಂಕೆ ಕೆಲಸಕ್ಕೆ ಹೋಗಿದ್ದನು. ಕೆಲಸಕ್ಕೆ ಹೋದ ಸುನೀಲ್​ಗೆ ಸಂಜೆ ಮಹಾಂತೇಶ್ ತಳವಾರ್ ಎಂಬಾತ ಪಾರ್ಟಿಗೆಂದು ಕರೆದಿದ್ದಾನೆ. ಪಾರ್ಟಿಗೆ ಬಂದ ಸುನಿಲ್​ಗೆ ಮಹಾಂತೇಶ್ ತಳವಾರ್ ಮತ್ತು ಕಲ್ಲೋಳ ಗ್ರಾಮದ ರಾಜು ದೊಡ್ಡಮನಿ ಹಗ್ಗದಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾರೆ.

ಕೊಲೆ ಮಾಡಿ, ಆರೋಪಿಗಳು ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿದ್ದರು. ಕೊಲೆಯಾದ ಐದು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಸುನೀಲ್ ಶವ ಪತ್ತೆಯಾಗಿತ್ತು. ಈಗ ಶವ ಪತ್ತೆಯಾಗಿ 8 ದಿನಗಳ ಬಳಿಕ ಪೊಲೀಸರು ಜೈನಾಪುರ ಗ್ರಾಮದ ಮಹಾಂತೇಶ್ ತಳವಾರ್ ಮತ್ತು ಕಲ್ಲೋಳ ಗ್ರಾಮದ ರಾಜು ದೊಡ್ಡಮನಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸುನೀಲ್​, ಮಹಾಂತೇಶ್ ತಳವಾರ್ ಮೇಲೆ ಕಣ್ಣು ಹಾಕಿದ್ದಕ್ಕೆ ಕೊಲೆ ಮಾಡಿದ್ದಾಕಿ ಬಾಯಿ ಬಿಟ್ಟಿದ್ದಾನೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:55 pm, Sun, 9 October 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!