AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಣೆ ಮಾಡಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ: ಡಿಕೆ ಶಿವಕುಮಾರ್

DK Shivakumar: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಭಯ್ ಪಾಟೀಲ್, ಸಿ.ಟಿ ರವಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಣೆ ಮಾಡಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ: ಡಿಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 29, 2021 | 5:47 PM

Share

ಬೆಳಗಾವಿ: ಸುವರ್ಣಸೌಧ ನಿರ್ಮಿಸಿ ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಣೆ ಮಾಡಿ ಬಳಿಕ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಸುವರ್ಣಸೌಧದಲ್ಲಿ ಒಂದು ವಾರ ಅಧಿವೇಶನ ನಡೆಸಬೇಕು. 1 ವಾರ ಕಲಾಪ ನಡೆಸಿದ್ರೆ ಬೆಳಗಾವಿಗೆ ಆರ್ಥಿಕ ಬಲ ಬರುತ್ತೆ. ಆದರೆ ಬೆಳಗಾವಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿಯೇ ಇಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

20 ವರ್ಷದಿಂದ ಬೆಳಗಾವಿ ಪಾಲಿಕೆಯಲ್ಲಿ ಸಿಡಿಪಿ ಇರಲಿಲ್ಲ. ಸತೀಶ್ ಜಾರಕಿಹೊಳಿ‌ ಸಚಿವರಾಗಿದ್ದಾಗ ಸಿಡಿಪಿ ಬಂದಿದೆ. ಕಾಂಗ್ರೆಸ್​ಗೆ ಅಧಿಕಾರ ಕೊಟ್ರೆ ಹೊಸ ಸಿಡಿಪಿಗೆ ಶಿಫಾರಸು ಮಾಡುತ್ತೇವೆ. ಮತ್ತೊಂದು ಸಿಡಿಪಿ ಕೊಡ್ತೀವೆ ಜೊತೆಗೆ ಉದ್ಯೋಗ ಸೃಷ್ಟಿ ಮಾಡಲಾಗುತ್ತದೆ. ಜನ ಉದ್ಯೋಗಕ್ಕೆ ಬೆಂಗಳೂರಿಗೆ ಹೋಗೋದು ತಪ್ಪಬೇಕು. ಬಿಲ್ಡಿಂಗ್‌ಗಳು ಕೇವಲ ಬೆಂಗಳೂರಿಗೆ ಸೀಮಿತ ಆಗಬಾರದು ಎಂದು ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಸೆಪ್ಟಂಬರ್ 3 ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಸಂತೋಷ, ವಿಶ್ವಾಸದಿಂದ ನಾನು ಬೆಳಗಾವಿಗೆ ಆಗಮಿಸಿದ್ದೇನೆ. ಲೋಕಸಭೆ ಬೈಎಲೆಕ್ಷನ್​ನಲ್ಲಿ ಅತಿಹೆಚ್ಚು ವಿಶ್ವಾಸ ಕೊಟ್ಟಿದ್ದಾರೆ. ಬೆಳಗಾವಿ ಜನತೆ ನಮಗೆ ಅತಿಹೆಚ್ಚು ವಿಶ್ವಾಸವನ್ನ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಸೋತರೂ ನಮ್ಮ ಅಭ್ಯರ್ಥಿಗೆ ಹೆಚ್ಚಿನ ಬಲ ಬಂದಿದೆ. ಮೊದಲ ಬಾರಿಗೆ ಬಿಜೆಪಿಯವರು ಪ್ರಣಾಳಿಕೆಯನ್ನ ಬಿಟ್ಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಸುರೇಶ್ ಅಂಗಡಿ ಅಂತ್ಯಸಂಸ್ಕಾರ ಕುರಿತು ಪ್ರಸ್ತಾಪಿಸಿದ ಶಿವಕುಮಾರ್ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಸುರೇಶ್ ಅಂಗಡಿ ಅಂತ್ಯಸಂಸ್ಕಾರವನ್ನು ಸರ್ಕಾರ ಅಮಾನವೀಯಾಗಿ ಮಾಡಿತು. ಕೊವಿಡ್​​ನಿಂದಾಗಿ ಜನ ಸತ್ತು ಹೋದ್ರು. ನನ್ನ ಮಿತ್ರ ಕೇಂದ್ರ ಸಚಿವ ಸುರೇಶ್ ಅಂಗಡಿಯೂ ತೀರಿಕೊಂಡ್ರು. ಓರ್ವ ಕೇಂದ್ರ ಸಚಿವರ ಶವ ತರಲು ಆಗಲಿಲ್ಲ ಇವರ ಕೈಯಲ್ಲಿ. ಕ್ಷೇತ್ರದ ಜನರಿಗೆ ಸುರೇಶ್ ಅಂಗಡಿ ದರ್ಶನ ಕೊಡಿಸಲಾಗಲಿಲ್ಲ. ನಾನು ಬೇಕಂತಲೇ ಲೋಕಸಭೆ ಬೈಎಲೆಕ್ಷನ್​ನಲ್ಲಿ ಮಾತಾಡಿಲ್ಲ. ಏಕೆಂದರೆ ಸುರೇಶ್​ ಅವರ ಧರ್ಮಪತ್ನಿ ಚುನಾವಣೆಗೆ ನಿಂತಿದ್ರು. ಅಮಾನವೀಯವಾಗಿ ಕೇಂದ್ರ ಸರ್ಕಾರ ಶವಸಂಸ್ಕಾರ ಮಾಡಿತು. ಇದಕ್ಕೆ ಬಿಜೆಪಿಗೆ ವೋಟ್ ಹಾಕಬೇಕಾ ಎಂದು ಡಿ.ಕೆ. ಶಿವಕುಮಾರ್​​ ಟೀಕಿಸಿದ್ದಾರೆ.

ಶಾಸಕ ಅಭಯ್ ಪಾಟೀಲ್, ಸಿ.ಟಿ ರವಿ ಹೇಳಿಕೆಗೆ ತಿರುಗೇಟು ಎಂಇಎಸ್ ಕಾಂಗ್ರೆಸ್ ಬಿ ಟೀಮ್ ಎಂಬ ಆರೋಪ ಹಾಗೂ ನಾಡದ್ರೋಹಿ ಎಂಇಎಸ್ ಬಗ್ಗೆ ಡಿಕೆಶಿ ಸಾಫ್ಟ್ ಕಾರ್ನರ್ ಎಂಬ ಶಾಸಕ ಅಭಯ್ ಪಾಟೀಲ್ ಆರೋಪಕ್ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ವಂತಕ್ಕೆ ಏನು ಬೇಕಾದರೂ ಅಂದುಕೊಳ್ಳಲಿ. ನಾವು ಯಾರನ್ನು ಅಗೌರವದಿಂದ ಕಾಣಲ್ಲ. ಬಿಜೆಪಿಯವರನ್ನೂ ಗೌರವದಿಂದ ಕಾಣುತ್ತೇವೆ. ಎಂಇಎಸ್‌ನವರನ್ನೂ ಗೌರವದಿಂದ ಕಾಣುತ್ತೇವೆ. ಅವರವರ ಪಕ್ಷದ ನಾಯಕರು ಏನಾದ್ರೂ ಹೇಳಿಕೊಳ್ಳಲಿ. ಬೆಳಗಾವಿ ಜನರ ವಿಚಾರದ ಬಗ್ಗೆ ಕಾಂಗ್ರೆಸ್​​ ಚಿಂತನೆ ನಡೆಸುತ್ತದೆ ಎಂದು ತಿಳಿಸಿದ್ದಾರೆ.

‘ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಬೇಕಾದ್ರೆ ಜೈಲಿಗೆ ಹೋಗಬೇಕು’ ಎಂಬ ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಸಿ.ಟಿ.ರವಿ ಈ ರೀತಿಯಾಗಿ ಹೇಳಿರುವುದು ಬಹಳ ಸಂತೋಷ. ಬಿಜೆಪಿ ನಾಯಕ ಸಿ.ಟಿ. ರವಿ ಸರ್ಟಿಫಿಕೇಟ್ ಅವಶ್ಯಕತೆ ಇದೆ. ಪಾಪ ಯಡಿಯೂರಪ್ಪನವರಿಗೂ ಒಂದು ಸರ್ಟಿಫಿಕೇಟ್ ಇತ್ತು. ಅಮಿತ್ ಶಾ ಸರ್‌ಗೂ ಒಂದು ಸರ್ಟಿಫಿಕೇಟ್ ಇತ್ತು. ಉಮಾಭಾರತಿಯವರಿಗೂ ಒಂದು ಸರ್ಟಿಫಿಕೇಟ್ ಇತ್ತು. ಇನ್ನೂ ಬೇಕಾದಷ್ಟು ಹೆಸರುಗಳಿವೆ ಎಂದು ಜೈಲಿಗೆ ಹೋಗಿರುವ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಡಿಕೆಶಿ ಕೊತ್ವಾಲ್ ರಾಮಚಂದ್ರ ಶಿಷ್ಯ ಎಂಬ ಹೇಳಿಕೆಗೂ ಸಿ.ಟಿ. ರವಿ ಅವರೇ ಶಿಷ್ಯರಾಗಿರಬೇಕು ಎಂದು ಡಿ.ಕೆ. ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಚುನಾವಣೆ: ಎಂಇಎಸ್ ಬಂಡಾಯ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆ; ಪ್ರಣಾಳಿಕೆ ಬಿಡುಗಡೆ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟ

Published On - 5:45 pm, Sun, 29 August 21

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ