AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಣೆ ಮಾಡಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ: ಡಿಕೆ ಶಿವಕುಮಾರ್

DK Shivakumar: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಭಯ್ ಪಾಟೀಲ್, ಸಿ.ಟಿ ರವಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಣೆ ಮಾಡಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ: ಡಿಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 29, 2021 | 5:47 PM

Share

ಬೆಳಗಾವಿ: ಸುವರ್ಣಸೌಧ ನಿರ್ಮಿಸಿ ಬೆಳಗಾವಿಯನ್ನು 2ನೇ ರಾಜಧಾನಿ ಎಂದು ಘೋಷಣೆ ಮಾಡಿ ಬಳಿಕ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಸುವರ್ಣಸೌಧದಲ್ಲಿ ಒಂದು ವಾರ ಅಧಿವೇಶನ ನಡೆಸಬೇಕು. 1 ವಾರ ಕಲಾಪ ನಡೆಸಿದ್ರೆ ಬೆಳಗಾವಿಗೆ ಆರ್ಥಿಕ ಬಲ ಬರುತ್ತೆ. ಆದರೆ ಬೆಳಗಾವಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿಯೇ ಇಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

20 ವರ್ಷದಿಂದ ಬೆಳಗಾವಿ ಪಾಲಿಕೆಯಲ್ಲಿ ಸಿಡಿಪಿ ಇರಲಿಲ್ಲ. ಸತೀಶ್ ಜಾರಕಿಹೊಳಿ‌ ಸಚಿವರಾಗಿದ್ದಾಗ ಸಿಡಿಪಿ ಬಂದಿದೆ. ಕಾಂಗ್ರೆಸ್​ಗೆ ಅಧಿಕಾರ ಕೊಟ್ರೆ ಹೊಸ ಸಿಡಿಪಿಗೆ ಶಿಫಾರಸು ಮಾಡುತ್ತೇವೆ. ಮತ್ತೊಂದು ಸಿಡಿಪಿ ಕೊಡ್ತೀವೆ ಜೊತೆಗೆ ಉದ್ಯೋಗ ಸೃಷ್ಟಿ ಮಾಡಲಾಗುತ್ತದೆ. ಜನ ಉದ್ಯೋಗಕ್ಕೆ ಬೆಂಗಳೂರಿಗೆ ಹೋಗೋದು ತಪ್ಪಬೇಕು. ಬಿಲ್ಡಿಂಗ್‌ಗಳು ಕೇವಲ ಬೆಂಗಳೂರಿಗೆ ಸೀಮಿತ ಆಗಬಾರದು ಎಂದು ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಸೆಪ್ಟಂಬರ್ 3 ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದೆ. ಸಂತೋಷ, ವಿಶ್ವಾಸದಿಂದ ನಾನು ಬೆಳಗಾವಿಗೆ ಆಗಮಿಸಿದ್ದೇನೆ. ಲೋಕಸಭೆ ಬೈಎಲೆಕ್ಷನ್​ನಲ್ಲಿ ಅತಿಹೆಚ್ಚು ವಿಶ್ವಾಸ ಕೊಟ್ಟಿದ್ದಾರೆ. ಬೆಳಗಾವಿ ಜನತೆ ನಮಗೆ ಅತಿಹೆಚ್ಚು ವಿಶ್ವಾಸವನ್ನ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಸೋತರೂ ನಮ್ಮ ಅಭ್ಯರ್ಥಿಗೆ ಹೆಚ್ಚಿನ ಬಲ ಬಂದಿದೆ. ಮೊದಲ ಬಾರಿಗೆ ಬಿಜೆಪಿಯವರು ಪ್ರಣಾಳಿಕೆಯನ್ನ ಬಿಟ್ಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಸುರೇಶ್ ಅಂಗಡಿ ಅಂತ್ಯಸಂಸ್ಕಾರ ಕುರಿತು ಪ್ರಸ್ತಾಪಿಸಿದ ಶಿವಕುಮಾರ್ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಸುರೇಶ್ ಅಂಗಡಿ ಅಂತ್ಯಸಂಸ್ಕಾರವನ್ನು ಸರ್ಕಾರ ಅಮಾನವೀಯಾಗಿ ಮಾಡಿತು. ಕೊವಿಡ್​​ನಿಂದಾಗಿ ಜನ ಸತ್ತು ಹೋದ್ರು. ನನ್ನ ಮಿತ್ರ ಕೇಂದ್ರ ಸಚಿವ ಸುರೇಶ್ ಅಂಗಡಿಯೂ ತೀರಿಕೊಂಡ್ರು. ಓರ್ವ ಕೇಂದ್ರ ಸಚಿವರ ಶವ ತರಲು ಆಗಲಿಲ್ಲ ಇವರ ಕೈಯಲ್ಲಿ. ಕ್ಷೇತ್ರದ ಜನರಿಗೆ ಸುರೇಶ್ ಅಂಗಡಿ ದರ್ಶನ ಕೊಡಿಸಲಾಗಲಿಲ್ಲ. ನಾನು ಬೇಕಂತಲೇ ಲೋಕಸಭೆ ಬೈಎಲೆಕ್ಷನ್​ನಲ್ಲಿ ಮಾತಾಡಿಲ್ಲ. ಏಕೆಂದರೆ ಸುರೇಶ್​ ಅವರ ಧರ್ಮಪತ್ನಿ ಚುನಾವಣೆಗೆ ನಿಂತಿದ್ರು. ಅಮಾನವೀಯವಾಗಿ ಕೇಂದ್ರ ಸರ್ಕಾರ ಶವಸಂಸ್ಕಾರ ಮಾಡಿತು. ಇದಕ್ಕೆ ಬಿಜೆಪಿಗೆ ವೋಟ್ ಹಾಕಬೇಕಾ ಎಂದು ಡಿ.ಕೆ. ಶಿವಕುಮಾರ್​​ ಟೀಕಿಸಿದ್ದಾರೆ.

ಶಾಸಕ ಅಭಯ್ ಪಾಟೀಲ್, ಸಿ.ಟಿ ರವಿ ಹೇಳಿಕೆಗೆ ತಿರುಗೇಟು ಎಂಇಎಸ್ ಕಾಂಗ್ರೆಸ್ ಬಿ ಟೀಮ್ ಎಂಬ ಆರೋಪ ಹಾಗೂ ನಾಡದ್ರೋಹಿ ಎಂಇಎಸ್ ಬಗ್ಗೆ ಡಿಕೆಶಿ ಸಾಫ್ಟ್ ಕಾರ್ನರ್ ಎಂಬ ಶಾಸಕ ಅಭಯ್ ಪಾಟೀಲ್ ಆರೋಪಕ್ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ವಂತಕ್ಕೆ ಏನು ಬೇಕಾದರೂ ಅಂದುಕೊಳ್ಳಲಿ. ನಾವು ಯಾರನ್ನು ಅಗೌರವದಿಂದ ಕಾಣಲ್ಲ. ಬಿಜೆಪಿಯವರನ್ನೂ ಗೌರವದಿಂದ ಕಾಣುತ್ತೇವೆ. ಎಂಇಎಸ್‌ನವರನ್ನೂ ಗೌರವದಿಂದ ಕಾಣುತ್ತೇವೆ. ಅವರವರ ಪಕ್ಷದ ನಾಯಕರು ಏನಾದ್ರೂ ಹೇಳಿಕೊಳ್ಳಲಿ. ಬೆಳಗಾವಿ ಜನರ ವಿಚಾರದ ಬಗ್ಗೆ ಕಾಂಗ್ರೆಸ್​​ ಚಿಂತನೆ ನಡೆಸುತ್ತದೆ ಎಂದು ತಿಳಿಸಿದ್ದಾರೆ.

‘ಕಾಂಗ್ರೆಸ್‌ನಲ್ಲಿ ಪ್ರಮೋಷನ್ ಬೇಕಾದ್ರೆ ಜೈಲಿಗೆ ಹೋಗಬೇಕು’ ಎಂಬ ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಸಿ.ಟಿ.ರವಿ ಈ ರೀತಿಯಾಗಿ ಹೇಳಿರುವುದು ಬಹಳ ಸಂತೋಷ. ಬಿಜೆಪಿ ನಾಯಕ ಸಿ.ಟಿ. ರವಿ ಸರ್ಟಿಫಿಕೇಟ್ ಅವಶ್ಯಕತೆ ಇದೆ. ಪಾಪ ಯಡಿಯೂರಪ್ಪನವರಿಗೂ ಒಂದು ಸರ್ಟಿಫಿಕೇಟ್ ಇತ್ತು. ಅಮಿತ್ ಶಾ ಸರ್‌ಗೂ ಒಂದು ಸರ್ಟಿಫಿಕೇಟ್ ಇತ್ತು. ಉಮಾಭಾರತಿಯವರಿಗೂ ಒಂದು ಸರ್ಟಿಫಿಕೇಟ್ ಇತ್ತು. ಇನ್ನೂ ಬೇಕಾದಷ್ಟು ಹೆಸರುಗಳಿವೆ ಎಂದು ಜೈಲಿಗೆ ಹೋಗಿರುವ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಡಿಕೆಶಿ ಕೊತ್ವಾಲ್ ರಾಮಚಂದ್ರ ಶಿಷ್ಯ ಎಂಬ ಹೇಳಿಕೆಗೂ ಸಿ.ಟಿ. ರವಿ ಅವರೇ ಶಿಷ್ಯರಾಗಿರಬೇಕು ಎಂದು ಡಿ.ಕೆ. ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಚುನಾವಣೆ: ಎಂಇಎಸ್ ಬಂಡಾಯ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆ; ಪ್ರಣಾಳಿಕೆ ಬಿಡುಗಡೆ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟ

Published On - 5:45 pm, Sun, 29 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!