AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಸುರೇಶ್ ಅಂಗಡಿ ಬಗ್ಗೆ ಡಿಕೆ ಶಿವಕುಮಾರ್ ಶವಸಂಸ್ಕಾರದ ರಾಜಕಾರಣ ಮಾಡುತ್ತಿದ್ದಾರೆ: ಈಶ್ವರಪ್ಪ

ಸುರೇಶ್ ಅಂಗಡಿ ಅಂತ್ಯಸಂಸ್ಕಾರ ಬಿಜೆಪಿ ಹೀನಾಯವಾಗಿ ನಡೆದುಕೊಂಡಿತ್ತು ಎನ್ನುವ ಡಿಕೆಶಿ ಅವರ ಮಾತು ನನಗೆ ತುಂಬಾ ನೋವಾಯಿತು. ಶವಸಂಸ್ಕಾರದ ಬಗ್ಗೆ ರಾಜಕಾರಣ ಮಾಡುತ್ತಾರೆ ಅಂತಾ ನೋವಾಗಿದೆ.

ಬೆಳಗಾವಿ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಸುರೇಶ್ ಅಂಗಡಿ ಬಗ್ಗೆ ಡಿಕೆ ಶಿವಕುಮಾರ್ ಶವಸಂಸ್ಕಾರದ  ರಾಜಕಾರಣ ಮಾಡುತ್ತಿದ್ದಾರೆ: ಈಶ್ವರಪ್ಪ
ಸಚಿವ ಕೆ.ಎಸ್. ಈಶ್ವರಪ್ಪ
TV9 Web
| Updated By: sandhya thejappa|

Updated on:Aug 31, 2021 | 10:52 AM

Share

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ (BJP) ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದೆ. ಕೇಂದ್ರ, ರಾಜ್ಯ ಸರ್ಕಾರ ಮಾಡಿದ ಕೆಲಸಗಳ ಮೇಲೆ ಜನರು ಬೆಂಬಲ ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಇದೇ ವೇಳೆ ಸುರೇಶ್ ಅಂಗಡಿ (Suresh Angadi) ಅವರ ಅಂತ್ಯಸಂಸ್ಕಾರ ಬಿಜೆಪಿ ಹೀನಾಯವಾಗಿ ಮಾಡಿತು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಬಂದ ಸಂದರ್ಭದಲ್ಲಿ ಡಿಕೆಶಿ ಕಾಂಗ್ರೆಸ್ ಪಕ್ಷ ಏನೂ ಮಾಡುತ್ತದೆ ಎನ್ನುವುದನ್ನು ಹೇಳಿದರೆ ಚೆನ್ನಾಗಿತ್ತು ಅಂತ ಅಭಿಪ್ರಾಯಪಟ್ಟರು.

ಅದನ್ನ ಬಿಟ್ಟು ಸುರೇಶ್ ಅಂಗಡಿ ಅಂತ್ಯಸಂಸ್ಕಾರ ಬಿಜೆಪಿ ಹೀನಾಯವಾಗಿ ನಡೆದುಕೊಂಡಿತ್ತು ಎನ್ನುವ ಡಿಕೆಶಿ ಅವರ ಮಾತು ನನಗೆ ತುಂಬಾ ನೋವಾಯಿತು. ಶವಸಂಸ್ಕಾರದ ಬಗ್ಗೆ ರಾಜಕಾರಣ ಮಾಡುತ್ತಾರೆ ಅಂತಾ ನೋವಾಗಿದೆ. ಸುರೇಶ್ ಅಂಗಡಿ ಕುಟುಂಬದವರ ಜತೆಗೆ ನಾಯಕರು ಮಾತಾಡಿ ತೀರ್ಮಾನ ತೆಗೆದುಕೊಂಡರು. ಕಾಂಗ್ರೆಸ್​ಗೆ ಶವಸಂಸ್ಕಾರದ ಬಗ್ಗೆ ಆಸಕ್ತಿ ಬಹಳ ಜಾಸ್ತಿ. ಸತ್ತು ಹೋಗಿರುವ ಕಾಂಗ್ರೆಸ್ ಶವಸಂಸ್ಕಾರದ ಬಗ್ಗೆ ಮಾತಾಡದೇ ಇನ್ನು ಯಾರು ಬಗ್ಗೆ ಮಾತಾಡುತ್ತಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಇತ್ತು, ಅಲ್ಲಿ ಸತ್ತು ಹೋಗಿದೆ, ರಾಜ್ಯದಲ್ಲಿ ಕಾಂಗ್ರೆಸ್ ಇತ್ತು, ಇಲ್ಲೂ ಸತ್ತು ಹೋಗಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬರಲ್ಲ. ಇಲ್ಲೂ ಕಾಂಗ್ರೆಸ್ ಸತ್ತು ಹೋಗಿದೆ. ಸತ್ತು ಹೋಗಿರುವ ಕಾಂಗ್ರೆಸ್ ದಿ.ಸುರೇಶ್ ಅಂಗಡಿ ಶವಸಂಸ್ಕಾರದ ಬಗ್ಗೆ ಹೀನಾಯವಾಗಿ ಮಾತಾಡುವುದು ನೋವಾಗಿದೆ. ಕಾಂಗ್ರೆಸ್​ನವರು ಬಗ್ಗೆ ಕ್ಷಮೆ ಕೇಳಬೇಕು ಅಂತ ಈಶ್ವರಪ್ಪ ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್​ಗೆ ಸ್ಮಾರ್ಟ್ ಸಿಟಿ ಬಗ್ಗೆ ಕಲ್ಪನೆ ಇಲ್ಲ. ಸಾಮಾನ್ಯ ಜನರಿಗೆ ಎನೂ ಬೇಕು ಅಂತಾ ಚರ್ಚೆಯಾಗಿ ಕಾಮಗಾರಿ ಆಗುತ್ತದೆ. ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಮಾಮೂಲಿ. ತಿಹಾರ್ ಜೈಲಿನಲ್ಲಿ ಇದ್ದು ಬಂದವರು ಭ್ರಷ್ಟಾಚಾರ ಹೇಗೆ ಮಾಡಬೇಕು ಅಂತಾ ಅವರಿಗೆ ಗೊತ್ತು. ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶದಲ್ಲಿ ಯಾರು ಸತ್ತೆ ಇಲ್ಲ, ಶವಸಂಸ್ಕಾರ ಮಾಡೇ ಇಲ್ಲ. ಬಿಜೆಪಿ ಸರ್ಕಾರದಲ್ಲಿ ಸಾವು ಖಚಿತ ಅಂತಾ ಡಿಕೆಶಿ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತ ಮಾಡುವಾಗ ಜನರು ಚಿರಂಜೀವಿಗಳಾ? ಅಂತ ಪ್ರಶ್ನಿಸಿದ ಈಶ್ವರಪ್ಪ, ಕಾಂಗ್ರೆಸ್​ನ ಇಂತಹ ಹೇಳಿಕೆಯಿಂದಲೇ ಜನರು ಸೋಲಿಸಿದ್ದಾರೆ ಎಂದು ಹೇಳಿದರು.

ಡಿಕೆಶಿ ಮಾತು ಯಾರು ಕೇಳಲ್ಲ. ಸೋಲುತ್ತೇವೆ ಎಂದು ಬೆಳಗಾವಿಗೆ ಯಾವ ನಾಯಕರು ಬರುತ್ತಿಲ್ಲ. ಚುನಾವಣೆ ಬಂದ ಸಂದರ್ಭದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೀವಿ ಅಂತ ಕಾಂಗ್ರೆಸ್​ನವರು ಹೇಳುತ್ತಾರೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ಸೋತರು. ಕಾಂಗ್ರೆಸ್​ನವರು ಚುನಾವಣೆ ಗೆಲ್ಲುತ್ತೀವಿ ಅಂತಾರೆ. ಆದರೆ ಬಿಜೆಪಿಯವರು ಅಲ್ಲಿ ಗೆದ್ದಿರುತ್ತಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತದಿಂದ ಬಿಜೆಪಿ ಗೆಲ್ಲುತ್ತದೆ ಅಂತ ಸಚಿವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಹೊಸೂರು ಶಾಸಕ ಪ್ರಕಾಶ್ ಪತ್ನಿ ಇತ್ತೀಚೆಗೆ ಮೃತಪಟ್ಟಿದ್ರು; ಅತ್ತೆ ಮಗಳನ್ನ ವಿವಾಹವಾಗಬೇಕಿದ್ದ ಮಗ-ಭಾವೀ ಪತ್ನಿ ಸಹ ಸಾವು

ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮೈಸೂರಿನಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

(KS Eshwarappa react to DK Shivakumar statement of Suresh Angadi funeral)

Published On - 10:50 am, Tue, 31 August 21

ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!