AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಬಿಜೆಪಿ ಸೋಲಿಗೆ ಡಿಕೆ ಶಿವಕುಮಾರ್, ಮಹಾಂತೇಶ್ ಕವಟಗಿಮಠ ಕಾರಣ: ಲಖನ್ ಜಾರಕಿಹೊಳಿ ಆರೋಪ

ಡಿಕೆ ಶಿವಕುಮಾರ್ ಜತೆಗೆ ಕವಟಗಿಮಠ ಮೀಟಿಂಗ್ ಮಾಡಿಕೊಂಡರು. ಇಲ್ಲವಾದರೆ ಮೊದಲು ಬಿಜೆಪಿ ಆಮೇಲೆ ನಾನು‌ ಗೆಲ್ಲುತ್ತಿದೆ. ಬಿಜೆಪಿ ಸೋಲಿಗೆ ಮುಖ್ಯ ಕಾರಣ ಡಿ.ಕೆ. ಶಿವಕುಮಾರ್ ಎಂದು ಲಖನ್​ ಜಾರಕಿಹೊಳಿ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಬಿಜೆಪಿ ಸೋಲಿಗೆ ಡಿಕೆ ಶಿವಕುಮಾರ್, ಮಹಾಂತೇಶ್ ಕವಟಗಿಮಠ ಕಾರಣ: ಲಖನ್ ಜಾರಕಿಹೊಳಿ ಆರೋಪ
ಲಖನ್ ಜಾರಕಿಹೊಳಿ
TV9 Web
| Edited By: |

Updated on: Dec 14, 2021 | 10:46 PM

Share

ಬೆಳಗಾವಿ: ವಿಧಾನ ಪರಿಷತ್ ಸ್ಥಾನ ಬೆಳಗಾವಿಯಲ್ಲಿ ಬಿಜೆಪಿ ಸೋಲಿಗೆ ಮುಖ್ಯ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್. ಸೋಲಿಗೆ ಡಿ.ಕೆ. ಶಿವಕುಮಾರ್, ಮಹಾಂತೇಶ್ ಕವಟಗಿಮಠ ಅವರ ಫಿಕ್ಸಿಂಗ್ ಕಾರಣ ಎಂದು ವಿಜೇತ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ. ಶಿವಕುಮಾರ್ ಜತೆಗೆ ಕವಟಗಿಮಠ ಮೀಟಿಂಗ್ ಮಾಡಿಕೊಂಡರು. ಇಲ್ಲವಾದರೆ ಮೊದಲು ಬಿಜೆಪಿ ಆಮೇಲೆ ನಾನು‌ ಗೆಲ್ಲುತ್ತಿದೆ. ಬಿಜೆಪಿ ಸೋಲಿಗೆ ಮುಖ್ಯ ಕಾರಣ ಡಿ.ಕೆ. ಶಿವಕುಮಾರ್ ಎಂದು ಲಖನ್​ ಜಾರಕಿಹೊಳಿ ಆರೋಪಿಸಿದ್ದಾರೆ.

ಮಹಾಂತೇಶ್ ಕವಟಗಿಮಠ ಅವರಿಗೆ ಇದು ಗೊತ್ತಾಗಲಿಲ್ಲ ಎಂದು ಡಿಕೆಶಿ​ ವಿರುದ್ಧ ಲಖನ್​ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ. ಮತದಾರರ ಆಶೀರ್ವಾದದಿಂದ ನಾನು ಗೆದ್ದಿದ್ದೇನೆ. ಎಲ್ಲಾ ಜಾತಿ ಮತದಾರರ ಆಶೀರ್ವಾದ ನಮಗೆ ಮಾಡಿದ್ದಾರೆ. ಆದರೆ, ಹದಿಮೂರು ಜನ ಬಿಜೆಪಿ ಶಾಸಕರು, ಇಬ್ಬರು ಸಂಸದರು, ಓರ್ವ ರಾಜ್ಯಸಭಾ ಸದಸ್ಯರಿದ್ದಾರೆ‌. ಇಷ್ಟೆಲ್ಲಾ ಇದ್ದೂ ಕೂಡ ರಮೇಶ್ ಜಾರಕಿಹೊಳಿ‌ ಸೊಲಿಸಿದ್ರು ಅಂತಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ರಮೇಶ್ ಕಾರಣ. ರಮೇಶ್ ಜಾರಕಿಹೊಳಿ‌ಯನ್ನ ಸೋತ್ರು ಮತ್ತು ಗೆದ್ದರು ಟಾರ್ಗೆಟ್ ಮಾಡುತ್ತಾರೆ. ನಾನು ಬಿಜೆಪಿ ಬಂಡಾಯ ಅಭ್ಯರ್ಥಿ ಅಲ್ಲಾ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಲ್ಲ. ನಾನು ಪಕ್ಷೇತರ ಅಭ್ಯರ್ಥಿ ಬಂಡಾಯ ಅಭ್ಯರ್ಥಿ ಅಲ್ಲ. ಎಂದು ಲಖನ್ ಹೇಳಿಕೆ ನೀಡಿದ್ದಾರೆ.

ಜಾರಕಿಹೊಳಿ ವಿರುದ್ಧ ಧಮ್​ ಇದ್ರೆ ಬಿಜೆಪಿ ಕ್ರಮ ಕೈಗೊಳ್ಳಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಫಲಿತಾಂಶದ ಬಗ್ಗೆ ಪಕ್ಷದ ನಾಯಕರು ಚರ್ಚೆ ಮಾಡುತ್ತಾರೆ. ಬೆಳಗಾವಿ ಫಲಿತಾಂಶ ಇದು ಅನಿರೀಕ್ಷಿತ ಹಿನ್ನಡೆ, ಸರಿಪಡಿಸುವ ಕೆಲಸ ಮಾಡ್ತೇವೆ. ಈ ಪರಿಷತ್ ಫಲಿತಾಂಶದಿಂದ ಒಂದು ಸಂದೇಶ ಹೋಗುತ್ತೆ ಎಂದು ಬೆಳಗಾವಿಯಲ್ಲಿ ವಸತಿ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಲಖನ್​ ಜಾರಕೊಹೊಳಿಗೆ ಗೆಲುವು: ಸಂಭ್ರಮಾಚರಣೆ ವೇಳೆ ನೋಟುಗಳನ್ನ ತೂರಿ ಹುಚ್ಚಾಟ ಸ್ವತಂತ್ರ ಅಭ್ಯರ್ಥಿ ಲಖನ್​ ಜಾರಕೊಹೊಳಿಗೆ ಗೆಲುವು ಹಿನ್ನೆಲೆ ಸಂಭ್ರಮಾಚರಣೆ ವೇಳೆ ನೋಟುಗಳನ್ನ ತೂರಿ ಹುಚ್ಚಾಟ ಮಾಡಿರುವ ಘಟನೆ ನಡೆದಿದೆ. 500 ರೂ. ನೋಟುಗಳನ್ನ ತೂರಿ ಬೆಂಬಲಿಗ ಹುಚ್ಚಾಟ ಮೆರೆದಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬೆಂಬಲಿಗನ ಹುಚ್ಚಾಟ ಕಂಡುಬಂದಿದೆ. ಸಂಭ್ರಮಾಚರಣೆ ಮಧ್ಯೆ ನೋಟುಗಳನ್ನ ತೂರಲಾಗಿದೆ. ಬೆಂಬಲಿಗನೊಬ್ಬ ಸಾವಿರಾರು ರೂಪಾಯಿಯಷ್ಟು ನೋಟುಗಳ ತೂರಿದ್ದಾನೆ. ನೋಟುಗಳನ್ನ ತೂರುತ್ತಿದ್ದಂತೆ ಸ್ಥಳೀಯರು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿಗೆ ಮುಳುವಾಯ್ತಾ ಲಖನ್ ಜಾರಕಿಹೊಳಿ ಸ್ಪರ್ಧೆ? ಬೆಳಗಾವಿಯಲ್ಲಿ ಕಾಂಗ್ರೆಸ್​ಗೆ ಗೆಲುವು

ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ; ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗರಂ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ