AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು

Lakshmi Hebbalkar's car accident: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಹೋದರ ಚನ್ನರಾಜ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ನಾಯಿ ಅಡ್ಡ ಬಂದಿದ್ದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಕಾರಿನಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸೋದರ ಚನ್ನರಾಜ ಅಪಾಯದಿಂದ ಪಾರು; ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಹೆಬ್ಬಾಳ್ಕರ್ ದಾಖಲು.

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು
ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 14, 2025 | 9:42 AM

Share

ಬೆಳಗಾವಿ, ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿರುವುದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಇದನ್ನೂ ಓದಿ: ಅರಮನೆ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ 2 ದಿನ ನಿಯಂತ್ರಣ, ಪರ್ಯಾಯ ಮಾರ್ಗ ಇಲ್ಲಿದೆ 

ನಾಯಿ ತಪ್ಪಿಸಲು ಹೋಗಿ ಅಪಘಾತ

ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾರಿಯಲ್ಲಿ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನ ಮಾಡಿದಾಗ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟಕ್ಕೆ ಕಾರಿನೊಳಗಿದ್ದವರಿಗೆ ಯಾವ ಪ್ರಾಣಾಪಾಯವಾಗಿಲ್ಲ.

Lakshmi Hebbalkar and brother survive accident after their car hits tree at Kittur, Belagavi, news in Kannada

ಲಕ್ಷ್ಮೀ ಹೆಬ್ಬಾಳ್ಕರ್

ಆಸ್ಪತ್ರೆಗೆ ಭೇಟಿ ನೀಡಿದ ಬೆಳಗಾವಿ ಎಸ್​ಪಿ

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ದಾಖಲು ಮಾಡಿರುವ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಎಸ್​ಪಿ ಭೀಮಾಶಂಕರ್ ಗುಳೇದ್ ಅವರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಹೆಬ್ಬಾಳ್ಕರ್ ಅವರ ತಾಯಿ ಹಾಗೂ ಸಹೋದರಿ ಕೂಡ ಆಸ್ಪತ್ರೆಗೆ ದೌಡಾಯಿಸಿ ಬಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ

ಇದೇ ವೇಳೆ, ಕೇಂದ್ರ ಗೃಹಸಚಿವ ಡಾ. ಜಿ ಪರಮೇಶ್ವರ್ ಅವರೂ ಕೂಡ ದೂರವಾಣಿ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರಿಗೆ ಜಿ. ಪರಮೇಶ್ವರ್ ಕರೆ ಮಾಡಿ ಮಾಹಿತಿ ಪಡೆದಿದ್ದು, ತಾಯಿಗೆ ಒಳ್ಳೆಯ ಚಿಕಿತ್ಸೆ ಕೊಡಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:14 am, Tue, 14 January 25

Follow Us
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ