AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಪ್ಪಂದೇನ್ ಐತಿ ಬೆಳಗಾವಿ ನಂದೈತಿ, ಸಾಮಾಜಿಕ ಜಾಲತಾಣದಲ್ಲಿ ಚಿರತೆ ಫೋಟೋ ಹಾಕಿ ವ್ಯಂಗ್ಯ

ಅರಣ್ಯ ಇಲಾಖೆ ಈವರೆಗೂ ಸುಮಾರು 30 ರಿಂದ 40 ಲಕ್ಷ ಹಣ ಖರ್ಚು ಮಾಡಿದೆ. ನಿತ್ಯವೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತಿದ್ದರು ಚಿರತೆ ಸಿಗುತ್ತಿಲ್ಲ.

ಯಾರಪ್ಪಂದೇನ್ ಐತಿ ಬೆಳಗಾವಿ ನಂದೈತಿ, ಸಾಮಾಜಿಕ ಜಾಲತಾಣದಲ್ಲಿ ಚಿರತೆ ಫೋಟೋ ಹಾಕಿ ವ್ಯಂಗ್ಯ
ಸಾಮಾಜಿಕ ಜಾಲತಾಣದಲ್ಲಿ ಚಿರತೆ ಫೋಟೋ ಹಾಕಿ ವ್ಯಂಗ್ಯ
ಗಂಗಾಧರ​ ಬ. ಸಾಬೋಜಿ
|

Updated on: Aug 26, 2022 | 11:07 AM

Share

ಬೆಳಗಾವಿ: ಜಿಲ್ಲೆಯ ಗಾಲ್ಫ್ ಮೈದಾನದಲ್ಲಿ ಚಿರತೆ (leopard) ಪ್ರತ್ಯಕ್ಷ ಹಿನ್ನೆಲೆ, 22 ದಿನ ಕಳೆದರು ಸಿಗದ ಚಿರತೆ ಕುರಿತು ವಿಭಿನ್ನ ರೀತಿಯಲ್ಲಿ ಪೋಸ್ಟ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ ಮಾಡಲಾಗುತ್ತಿದೆ. ಚಿರತೆ ಪೋಟೊ ಹಾಕಿ ಚಿರತೆ ಹೆಸರಲ್ಲಿ ಆಧಾರ ಕಾರ್ಡ್ ರೆಡಿ ಮಾಡಿ ತಮಾಷೆ ಮಾಡಲಾಗಿದೆ. ಬಿಬತ್ಯಾ ಬೇಲ್ಗಾಂವ್‌ಕರ್ ಅಂತಾ ಚಿರತೆಗೆ ಹೆಸರು ಹಾಕಿ ಆಧಾರ್ ಕಾರ್ಡ್ ವೈರಲ್ ಮಾಡಲಾಗಿದೆ. ಎಷ್ಟು ಬೇಕಾದಷ್ಟು ಪ್ರಯತ್ನ ಮಾಡಿ ನಾನು ಗಣಪತಿ ಹಬ್ಬ ಮುಗಿಸಿಕೊಂಡು ಹೋಗುತ್ತೇನೆ. ಯಾರಪ್ಪಂದೇನ್ ಐತಿ ಬೆಳಗಾವಿ ನಂದೈತಿ ಬೆಳಗಾವಿ ಬಿಟ್ಟು ಹೋಗಲ್ಲ. ನಾನೇ ಆತಂಕವಾದಿನಾ ನನ್ನ ಹಿಡಿಯಲು ಆನೆ, ನಾಯಿ, ಪೊಲೀಸರು ಬಂದಿದ್ದೀರಿ, ಹೀಗೆ ಹಲವು ರೀತಿಯಲ್ಲಿ ಚಿರತೆ ಪೋಟೊ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ವೈರಲ್ ಮಾಡಲಾಗುತ್ತಿದೆ.

ಪ್ರತಿದಿನವು ಸುಮಾರು 3ಲಕ್ಷ ರೂ. ಖರ್ಚು:

ಕಳೆದ 22 ದಿನಗಳಿಂದ ಆಪರೇಷನ್ ಚಿರತೆ ಕಾರ್ಯಾಚರಣೆ ನಡೆಯುತ್ತಿದ್ದು, ಐದು ದಿನಗಳಿಂದ 160 ಸಿಬ್ಬಂದಿ, ಆನೆ, ಜೆಸಿಬಿಗಳಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಳೆದ 5 ದಿನಗಳಿಂದ ಪ್ರತಿದಿನವು ಸುಮಾರು 3ಲಕ್ಷದವರೆಗೂ ಖರ್ಚು ಮಾಡಲಾಗುತ್ತಿದ್ದು, ಅರಣ್ಯ ಇಲಾಖೆ ಈವರೆಗೂ ಸುಮಾರು 30 ರಿಂದ 40 ಲಕ್ಷ ಹಣ ಖರ್ಚು ಮಾಡಿದೆ. ನಿತ್ಯವೂ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತಿದ್ದರು ಚಿರತೆ ಸಿಗುತ್ತಿಲ್ಲ. ಸಿಬ್ಬಂದಿಗೆ ಊಟದ ವ್ಯವಸ್ಥೆ, ಆನೆಗೆ ಆಹಾರದ ವ್ಯವಸ್ಥೆ ಮಾಡಲು ಕೂಡ ಇಲಾಖೆ ಖರ್ಚು ಭರಿಸುತ್ತಿದೆ.

ಇದನ್ನೂ ಓದಿ: ಇಂದು ಕೂಡ ಚಿರತೆಗಾಗಿ ಮುಂದುವರೆದ ಹುಡುಕಾಟ: ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ

ಗಿಡಗಂಟೆಗಳು ಬೆಳೆದಿರುವುದರಿಂದ ಚಿರತೆ ತಪ್ಪಿಸಿಕೊಳ್ಳುತ್ತಿದೆ: ಡಿಎಫ್ಒ ಅಂಥೋನಿ

ಈ ಕುರಿತಾಗಿ ಟಿವಿ9ಗೆ ಬೆಳಗಾವಿ ಡಿಎಫ್ಒ ಅಂಥೋನಿ ಹೇಳಿಕೆ ನೀಡಿದ್ದು, 6 ಜೆಸಿಬಿ, 2 ಆನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ಮಾಡಲಾಗುತ್ತಿದೆ. ಗಾಲ್ಫ್ ಮೈದಾನದಲ್ಲಿ ಸಾಕಷ್ಟು ಗಿಡಗಂಟೆಗಳು ಬೆಳೆದಿವೆ. ಚಿರತೆ ಸುಲಭವಾಗಿ ತಪ್ಪಿಸಿಕೊಳ್ಳಲು ಅನುಕೂಲ ಆಗುತ್ತಿದೆ. ಮೊದಲು ಜೆಸಿಬಿಗಳಿಂದ ಗಿಡಗಂಟೆ ತೆರವು ಮಾಡುತ್ತೇವೆ. ನಾಳೆಯಿಂದ ಇನ್ನಷ್ಟು ಸಿಬ್ಬಂದಿ ಬಳಸಿಕೊಂಡು ಕೂಂಬಿಂಗ್ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ