AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corruption In Karnataka: ಮೃತ ಗುತ್ತಿಗೆದಾರ ಸಂತೋಷ್ ಪತ್ನಿಯಿಂದ ರಾಜ್ಯಪಾಲರಿಗೆ ಪತ್ರ: ಪಾರದರ್ಶಕ ತನಿಖೆಗೆ ಆಗ್ರಹ

ಪಾರದರ್ಶಕ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಲು ರಾಜ್ಯಪಾಲರಿಗೆ  ಜಯಶ್ರೀ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

Corruption In Karnataka: ಮೃತ ಗುತ್ತಿಗೆದಾರ ಸಂತೋಷ್ ಪತ್ನಿಯಿಂದ ರಾಜ್ಯಪಾಲರಿಗೆ ಪತ್ರ: ಪಾರದರ್ಶಕ ತನಿಖೆಗೆ ಆಗ್ರಹ
ಗುತ್ತಿಗೆದಾರ ಸಂತೋಷ್ ಪಾಟೀಲ್, ಕೆ.ಎಸ್​.ಈಶ್ವರಪ್ಪ, ಜಯಶ್ರೀ
TV9 Web
| Edited By: |

Updated on:Jul 15, 2022 | 8:51 AM

Share

ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ (Santosh Suicide Case) ಸಂಬಂಧ ಪಾರದರ್ಶಕ ತನಿಖೆಗೆ ಆಗ್ರಹಿಸಿ ಮೃತ ಸಂತೋಷ ಪತ್ನಿ ಜಯಶ್ರೀ ರಾಜ್ಯಪಾಲರ ಮೊರೆ ಹೋಗಿದ್ದು, ಪತ್ರ‌ ಬರೆಯಲಾಗಿದೆ. ಆತ್ಮಹತ್ಯೆ ಪ್ರಕರಣದ ತನಿಖೆ ಬಗ್ಗೆ ಪತ್ನಿ ಅನುಮಾನ ವ್ಯಕ್ತಪಡಿಸಿದ್ದು, ಪ್ರಮುಖ ಆರೋಪಿ ಮಾಜಿ ಸಚಿವ ಈಶ್ವರಪ್ಪ‌ ನಿರ್ದೇಶನದಂತೆ ತನಿಖೆ ನಡೆಯುತ್ತಿದೆಯಂತೆ. ಕೇವಲ 15 ದಿನದಲ್ಲಿ ಕೇಸ್​ನಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆಂದು ಮಾಜಿ ಸಚಿವ ಈಶ್ವರಪ್ಪ ನೀಡಿದ ಹೇಳಿಕೆಯನ್ನ ಪತ್ರದಲ್ಲಿ ಜಯಶ್ರೀ ಉಲ್ಲೇಖಿಸಿದ್ದಾರೆ. ಈಶ್ವರಪ್ಪ ಮಾಜಿ ಉಪಮುಖ್ಯಂತ್ರಿ, ಬಿಜೆಪಿ ಮಾಜಿ ರಾಜಾಧ್ಯಕ್ಷ, ಪ್ರಭಾವಿ ಶಾಸಕರಾಗಿದ್ದು, ತಮ್ಮ ಹಣಬಲ, ರಾಜಕೀಯ ಬಲ ಬಳಿಸಿ ಆತ್ಮಹತ್ಯೆ ಪ್ರಕರಣದ ತನಿಖೆ ದಿಕ್ಕು ತಪ್ಪಿಸಿರುವ ಅನುಮಾನ ಇದೆ. ಪೊಲೀಸ್ ಅಧಿಕಾರಿಗಳು ಈ ಕೇಸ್​ನ ಪ್ರತಿ ಹಂತದ ತನಿಖೆ ಸೋರಿಕೆ ಮಾಡುತ್ತಿದ್ದಾರೆ. ಈ ಮೂಲಕ ಈಶ್ವರಪ್ಪಗೆ ಅನುಕೂಲ ಮಾಡಿ ಕೇಸ್ ಮುಚ್ಚಿ ಹಾಕುವ ಹುನ್ನಾರ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೇಸ್​ಗೆ ಮತ್ತೊಂದು ಟ್ವಿಸ್ಟ್; ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯ

ಇದೇ ಕಾರಣಕ್ಕಾಗಿ ಈಶ್ವರಪ್ಪ ಬಹಿರಂಗವಾಗಿ ಪ್ರಕರಣದಿಂದ ಹೊರಬರುವ ಮಾತು ಹೇಳಿದ್ದಾರೆ. ಮಾಜಿ ಸಚಿವರ ಮಾತು ಗಮನಿಸಿದರೆ ಅವರ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ ಅನಿಸುತ್ತಿದೆ. ಕಾನೂನಿನ ಮುಂದೆ ಎಷ್ಟೇ ಪ್ರಭಾವಿಯಾದರೂ ಒಂದೇ ಅಂತಾ ಸಾಬೀತುಪಡಿಸಬೇಕಿದೆ. ಪಾರದರ್ಶಕ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಲು ರಾಜ್ಯಪಾಲರಿಗೆ  ಜಯಶ್ರೀ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಏಪ್ರಿಲ್.12ರಂದು ಉಡುಪಿಯ ಲಾಡ್ಜ್​​ನಲ್ಲಿ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದರು.

Published On - 8:00 am, Fri, 15 July 22

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?