AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್? ಚರ್ಚೆಗೆ ಗ್ರಾಸವಾದ ರಾಜ್ಯ ಸರ್ಕಾರದ ಸುತ್ತೋಲೆ

ಬೆಳಗಾವಿ ಹಾಗೂ ತುಮಕೂರು ಜಿಲ್ಲೆ ವಿಭಜನೆಗೆ ಹೆಚ್ಚಿನ ಒತ್ತಡ ಕೇಳಿ ಬರುತ್ತಿರುವ ನಡುವೆ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಸುತ್ತೋಲೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್‌ರಚಿಸುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖವಾಗಿದ್ದು, ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯ ಹೆಸರು ಉಲ್ಲೇಖವಾಗಿದೆ. ನಾಳೆ ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆಯಾಗುತ್ತಾ ಎನ್ನುವ ಕುತೂಹಲವೂ ಮೂಡಿಸಿದೆ.

ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್? ಚರ್ಚೆಗೆ ಗ್ರಾಸವಾದ ರಾಜ್ಯ ಸರ್ಕಾರದ ಸುತ್ತೋಲೆ
ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್? ಚರ್ಚೆಗೆ ಗ್ರಾಸವಾದ ರಾಜ್ಯ ಸರ್ಕಾರದ ಸುತ್ತೋಲೆ
Sahadev Mane
| Edited By: |

Updated on: Feb 15, 2024 | 10:23 PM

Share

ಬೆಳಗಾವಿ, ಫೆ.15: ಬೆಳಗಾವಿ (Belagavi) ಹಾಗೂ ತುಮಕೂರು (Tumkur) ಜಿಲ್ಲೆಗಳ ವಿಭಜನೆಗೆ ಹೆಚ್ಚಿನ ಒತ್ತಡ ಕೇಳಿ ಬರುತ್ತಿರುವ ನಡುವೆ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಸುತ್ತೋಲೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್‌ರಚಿಸುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖವಾಗಿದ್ದು, ಬೆಳಗಾವಿ ಮತ್ತು ತುಮಕೂರು ಜಿಲ್ಲೆಯ ಹೆಸರು ಉಲ್ಲೇಖವಾಗಿದೆ. ನಾಳೆ ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆಯಾಗುತ್ತಾ ಎನ್ನುವ ಕುತೂಹಲವೂ ಮೂಡಿಸಿದೆ.

ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್‌ರಚಿಸುವ ಬಗ್ಗೆ ರಾಜ್ಯ ಸರ್ಕಾರವು ಫೆಬ್ರವರಿ 8 ರಂದು ಹೊರಡಿಸಿರುವ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳಾಗಿರುವ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯ ಹೆಸರು ಉಲ್ಲೇಖವಾಗಿದ್ದು, ಸುತ್ತೋಲೆ ಬಗ್ಗೆ ಹಲವು ರೀತಿಯ ವ್ಯಾಖ್ಯಾನಗಳು ಮುನ್ನೆಲೆಗೆ ಬಂದಿವೆ.

ಇದನ್ನೂ ಓದಿ: ಪೌರ ಕಾರ್ಮಿಕ ಮಹಿಳೆಗೆ ಒಲಿದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ

ಬೆಳಗಾವಿ ಜಿಲ್ಲೆ ‌ವಿಭಜನೆ ಬಗ್ಗೆ ಚರ್ಚೆ ಹಿನ್ನೆಲೆ ಎರಡೂ ಜಿಲ್ಲೆಗಳ ಜನಪ್ರತಿನಿಧಿಗಳು ಅಲರ್ಟ್ ಆಗಿದ್ದು, ಪ್ರತ್ಯೇಕ ಜಿಲ್ಲೆಗಾಗಿ ಗೋಕಾಕ್, ಚಿಕ್ಕೋಡಿ, ಬೈಲಹೊಂಗಲ, ಅಥಣಿ ಮಧ್ಯೆ ಪೈಪೋಟಿ ನಡೆಯುತ್ತಿದೆ. ಈ ಎಲ್ಲದರ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಡಿಸುತ್ತಿರುವ ಬಜೆಟ್‌ನಲ್ಲಿ ಚಿಕ್ಕೋಡಿ, ಗೋಕಾಕ್ ಜಿಲ್ಲೆ ಘೋಷಣೆ ಆಗುತ್ತಾ ಎಂದು ಕುತೂಹಲ ಮೂಡಿಸಿದೆ.

ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ತುರ್ತು ಸಭೆ

ನಾಳೆಯ ಬಜೆಟ್​ನಲ್ಲಿ ಚಿಕ್ಕೋಡಿ, ಗೋಕಾಕ್ ಜಿಲ್ಲೆಯಾಗಿ ಘೋಷಣೆ ಸಾಧ್ಯತೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಶಾಖಾ ಮೂರುಸಾವಿರ ಮಠದಲ್ಲಿ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ತುರ್ತು ಸಭೆ ನಡೆಸಿತು. ಸಭೆಯಲ್ಲಿ ಮಠಾಧೀಶರು, ಹೋರಾಟಗಾರರು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮುಖಂಡರು ಭಾಗಿಯಾದರು.

ಸರ್ಕಾರ ಬೆಳಗಾವಿ ಜಿಲ್ಲೆ ವಿಭಜನೆ ಮಾಡಬಾರದು. ಒಂದು ವೇಳೆ ವಿಭಜನೆ ಮಾಡಿದರೆ ಬೈಲಹೊಂಗಲ ಜಿಲ್ಲೆ ಘೋಷಣೆ ಮಾಡುವಂತೆ ಒತ್ತಾಯಿಸಲಾಯಿತು. ಬ್ರಿಟಿಷರ ಕಾಲದಿಂದಲೂ ಬೈಲಹೊಂಗಲ ಉಪವಿಭಾಗವಾಗಿದ್ದು, ಈ ಕಾರಣಕ್ಕೆ ಜಿಲ್ಲಾ ವಿಭಜನೆ ಮಾಡಿದರೆ ಮೊದಲು ಬೈಲಹೊಂಗಲಗೆ ಪ್ರಾಮುಖ್ಯತೆ ನೀಡುವಂತೆ ಒತ್ತಾಯಿಸಲಾಯಿತು.

ಬೈಲಹೊಂಗಲ ಕಡೆಗಣಿಸಿದರೆ ಹೋರಾಟದ ಎಚ್ಚರಿಕೆ

ಸರ್ಕಾರ ನಾಳೆ ಬಜೆಟ್​ನಲ್ಲಿ ಬೈಲಹೊಂಗಲ ಕಡೆಗಣಿಸಿದರೆ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆಯೂ ನೀಡಲಾಗಿದೆ. ಜಿಲ್ಲೆ ಮಾಡದಿದ್ದರೆ ಮತ್ತೊಂದು ಹೋರಾಟದ ಕ್ರಾಂತಿ ನಡೆಯಲಿದೆ ಎಂದು ರಾಜ್ಯ ಸರ್ಕಾರಕ್ಕೆ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ