AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್? ಚರ್ಚೆಗೆ ಗ್ರಾಸವಾದ ರಾಜ್ಯ ಸರ್ಕಾರದ ಸುತ್ತೋಲೆ

ಬೆಳಗಾವಿ ಹಾಗೂ ತುಮಕೂರು ಜಿಲ್ಲೆ ವಿಭಜನೆಗೆ ಹೆಚ್ಚಿನ ಒತ್ತಡ ಕೇಳಿ ಬರುತ್ತಿರುವ ನಡುವೆ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಸುತ್ತೋಲೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್‌ರಚಿಸುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖವಾಗಿದ್ದು, ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯ ಹೆಸರು ಉಲ್ಲೇಖವಾಗಿದೆ. ನಾಳೆ ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆಯಾಗುತ್ತಾ ಎನ್ನುವ ಕುತೂಹಲವೂ ಮೂಡಿಸಿದೆ.

ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್? ಚರ್ಚೆಗೆ ಗ್ರಾಸವಾದ ರಾಜ್ಯ ಸರ್ಕಾರದ ಸುತ್ತೋಲೆ
ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್? ಚರ್ಚೆಗೆ ಗ್ರಾಸವಾದ ರಾಜ್ಯ ಸರ್ಕಾರದ ಸುತ್ತೋಲೆ
Sahadev Mane
| Edited By: Rakesh Nayak Manchi|

Updated on: Feb 15, 2024 | 10:23 PM

Share

ಬೆಳಗಾವಿ, ಫೆ.15: ಬೆಳಗಾವಿ (Belagavi) ಹಾಗೂ ತುಮಕೂರು (Tumkur) ಜಿಲ್ಲೆಗಳ ವಿಭಜನೆಗೆ ಹೆಚ್ಚಿನ ಒತ್ತಡ ಕೇಳಿ ಬರುತ್ತಿರುವ ನಡುವೆ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಸುತ್ತೋಲೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್‌ರಚಿಸುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖವಾಗಿದ್ದು, ಬೆಳಗಾವಿ ಮತ್ತು ತುಮಕೂರು ಜಿಲ್ಲೆಯ ಹೆಸರು ಉಲ್ಲೇಖವಾಗಿದೆ. ನಾಳೆ ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆಯಾಗುತ್ತಾ ಎನ್ನುವ ಕುತೂಹಲವೂ ಮೂಡಿಸಿದೆ.

ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್‌ರಚಿಸುವ ಬಗ್ಗೆ ರಾಜ್ಯ ಸರ್ಕಾರವು ಫೆಬ್ರವರಿ 8 ರಂದು ಹೊರಡಿಸಿರುವ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳಾಗಿರುವ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯ ಹೆಸರು ಉಲ್ಲೇಖವಾಗಿದ್ದು, ಸುತ್ತೋಲೆ ಬಗ್ಗೆ ಹಲವು ರೀತಿಯ ವ್ಯಾಖ್ಯಾನಗಳು ಮುನ್ನೆಲೆಗೆ ಬಂದಿವೆ.

ಇದನ್ನೂ ಓದಿ: ಪೌರ ಕಾರ್ಮಿಕ ಮಹಿಳೆಗೆ ಒಲಿದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ

ಬೆಳಗಾವಿ ಜಿಲ್ಲೆ ‌ವಿಭಜನೆ ಬಗ್ಗೆ ಚರ್ಚೆ ಹಿನ್ನೆಲೆ ಎರಡೂ ಜಿಲ್ಲೆಗಳ ಜನಪ್ರತಿನಿಧಿಗಳು ಅಲರ್ಟ್ ಆಗಿದ್ದು, ಪ್ರತ್ಯೇಕ ಜಿಲ್ಲೆಗಾಗಿ ಗೋಕಾಕ್, ಚಿಕ್ಕೋಡಿ, ಬೈಲಹೊಂಗಲ, ಅಥಣಿ ಮಧ್ಯೆ ಪೈಪೋಟಿ ನಡೆಯುತ್ತಿದೆ. ಈ ಎಲ್ಲದರ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಡಿಸುತ್ತಿರುವ ಬಜೆಟ್‌ನಲ್ಲಿ ಚಿಕ್ಕೋಡಿ, ಗೋಕಾಕ್ ಜಿಲ್ಲೆ ಘೋಷಣೆ ಆಗುತ್ತಾ ಎಂದು ಕುತೂಹಲ ಮೂಡಿಸಿದೆ.

ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ತುರ್ತು ಸಭೆ

ನಾಳೆಯ ಬಜೆಟ್​ನಲ್ಲಿ ಚಿಕ್ಕೋಡಿ, ಗೋಕಾಕ್ ಜಿಲ್ಲೆಯಾಗಿ ಘೋಷಣೆ ಸಾಧ್ಯತೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಶಾಖಾ ಮೂರುಸಾವಿರ ಮಠದಲ್ಲಿ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ತುರ್ತು ಸಭೆ ನಡೆಸಿತು. ಸಭೆಯಲ್ಲಿ ಮಠಾಧೀಶರು, ಹೋರಾಟಗಾರರು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮುಖಂಡರು ಭಾಗಿಯಾದರು.

ಸರ್ಕಾರ ಬೆಳಗಾವಿ ಜಿಲ್ಲೆ ವಿಭಜನೆ ಮಾಡಬಾರದು. ಒಂದು ವೇಳೆ ವಿಭಜನೆ ಮಾಡಿದರೆ ಬೈಲಹೊಂಗಲ ಜಿಲ್ಲೆ ಘೋಷಣೆ ಮಾಡುವಂತೆ ಒತ್ತಾಯಿಸಲಾಯಿತು. ಬ್ರಿಟಿಷರ ಕಾಲದಿಂದಲೂ ಬೈಲಹೊಂಗಲ ಉಪವಿಭಾಗವಾಗಿದ್ದು, ಈ ಕಾರಣಕ್ಕೆ ಜಿಲ್ಲಾ ವಿಭಜನೆ ಮಾಡಿದರೆ ಮೊದಲು ಬೈಲಹೊಂಗಲಗೆ ಪ್ರಾಮುಖ್ಯತೆ ನೀಡುವಂತೆ ಒತ್ತಾಯಿಸಲಾಯಿತು.

ಬೈಲಹೊಂಗಲ ಕಡೆಗಣಿಸಿದರೆ ಹೋರಾಟದ ಎಚ್ಚರಿಕೆ

ಸರ್ಕಾರ ನಾಳೆ ಬಜೆಟ್​ನಲ್ಲಿ ಬೈಲಹೊಂಗಲ ಕಡೆಗಣಿಸಿದರೆ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆಯೂ ನೀಡಲಾಗಿದೆ. ಜಿಲ್ಲೆ ಮಾಡದಿದ್ದರೆ ಮತ್ತೊಂದು ಹೋರಾಟದ ಕ್ರಾಂತಿ ನಡೆಯಲಿದೆ ಎಂದು ರಾಜ್ಯ ಸರ್ಕಾರಕ್ಕೆ ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿ ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?