AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಮೇಲೆ ಪಿಎಂ-ಸಿಎಂ ಕಣ್ಣು, ಅಖಾಡಕ್ಕೆ ಏಕಕಾಲಕ್ಕೆ ಮೋದಿ, ಸಿದ್ದರಾಮಯ್ಯ ಎಂಟ್ರಿ

ಉತ್ತರ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೇ 7 ರಂದು ರಾಜ್ಯದ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಸಂಬಂಧ ಪ್ರಚಾರ ಜೋರಾಗಿಯೇ ನಡೆಯುತ್ತಿದ್ದು, ಬೆಳಗಾವಿ ಅಖಾಡಕ್ಕೆ ಪಿಎಂ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಏಕಕಾಲಕ್ಕೆ ಧುಮುಕಲಿದ್ದಾರೆ. ಹೌದು ಏ.28 ರಂದು ಬೆಳಗಾವಿಗೆ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದಾರಾಮಯ್ಯ ಭೇಟಿ ನೀಡಲಿದ್ದಾರೆ.

ಬೆಳಗಾವಿ ಮೇಲೆ ಪಿಎಂ-ಸಿಎಂ ಕಣ್ಣು, ಅಖಾಡಕ್ಕೆ ಏಕಕಾಲಕ್ಕೆ ಮೋದಿ, ಸಿದ್ದರಾಮಯ್ಯ ಎಂಟ್ರಿ
ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ
Sahadev Mane
| Edited By: |

Updated on:Apr 27, 2024 | 8:36 AM

Share

ಬೆಳಗಾವಿ, ಏಪ್ರಿಲ್​ 27: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ. ಈ ಹಿನ್ನೆಲೆಯಲ್ಲಿ ಪ್ರಚಾರ ಇನ್ನೂ ನಡೆದಿದೆ. ರಾಜಕೀಯ ಪವರ್​ ಸೆಂಟರ್ ಎನಿಸಿಕೊಂಡಿರುವ ಬೆಳಗಾವಿ (Belagavi) ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ (Narendra Modi) ಮತ್ತು ಸಿಎಂ ಸಿದ್ದರಾಮಯ್ಯ (Siddaramaiah) ಧುಮುಕಲಿದ್ದಾರೆ.

ಏಪ್ರಿಲ್ 28ರ ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇದೇ ದಿನದಂದು ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್ ಖುರ್ದ್, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಮಾವೇಶ ನಡೆಸಲಿದ್ದಾರೆ.

ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ತನ್ನದೆಯಾದ ಪ್ರಭಾವ ಹೊಂದಿದೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್​ ಹೆಬ್ಬಾಳ್ಕರ್​​ ಅವರನ್ನು ಕಣಕ್ಕಿಳಿಸಿ, ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಅವರನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ.

ರಾಜ್ಯದಲ್ಲಿ ಮೋದಿ ಪ್ರವಾಸ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಏ.27) ರಾತ್ರಿ 8.50ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಗರದ ಐಟಿಸಿ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ (ಏ.28) ಬೆಳಿಗ್ಗೆ 10.55ಕ್ಕೆ ಹೋಟೆಲ್​ನಿಂದ ಹೊರಡುವ ಪ್ರಧಾನಿ ಮೋದಿ, 11 ಗಂಟೆಗೆ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ 11.55 ಬೆಳಗಾವಿಯಿಂದ ಶಿರಸಿಗೆ ಪ್ರಯಾಣ ಬೆಳಸಲಿದ್ದಾರೆ.

ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಬೇಡಿಕೆ: ವರ ನೀಡಿದ ಶನೇಶ್ವರ, ವಿಡಿಯೋ ವೈರಲ್

ಮಧ್ಯಾಹ್ನ 12.55ಕ್ಕೆ ಉತ್ತರ ಕನ್ನಡ ಜಿಲ್ಲೆ ಶಿರಸಿಗೆ ಆಗಮಿಸುವ ಮೋದಿ, 1 ಗಂಟೆಗೆ ಶಿರಸಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. 2 ಗಂಟೆಗೆ ಶಿರಸಿಯಿಂದ ಹೊರಟು 2.50ಕ್ಕೆ ದಾವಣಗೆರೆಗೆ ತಲುಪಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ನಂತರ 4.05ಕ್ಕೆ ದಾವಣಗೆರೆಯಿಂದ ಹೊಸಪೇಟೆ ಕಡೆಗೆ ಹೊರಡುವ ಪ್ರಧಾನಿ ಮೋದಿ, ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗಿಯಾಗಿ, 6 ಗಂಟೆಗೆ ಹೊಸಪೇಟೆ ಹೋಟೆಲ್​ಗೆ ಆಗಮಿಸಿ, ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಿಂದ ಮೋದಿ ನಿರ್ಗಮಿಸಿ, ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಪ್ರಯಾಣ ಬೆಳಸಲಿದ್ದಾರೆ.

ಡ್ರೋನ್ ಹಾರಾಟಕ್ಕೆ ನಿಷೇಧ

ಬೆಳಗಾವಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಇಂದು (ಏ.27) ರ ಮುಂಜಾನೆ 6 ಗಂಟೆಯಿಂದ ನಾಳೆ (28)ರ ಸಂಜೆ 6 ಗಂಟೆಯವರಗೆ ಡ್ರೋನ್ ಹಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ತಾಲೂಕಿನ ವ್ಯಾಪ್ತಿಯನ್ನು ರೆಡ್ ಜೋನ್ ಎಂದು ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:32 am, Sat, 27 April 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ