AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ನಿರ್ಮಿಸದೇ 23 ಕೋಟಿ ರೂ.ಗುಳುಂ:ಕೊಳಚೆ ನಿರ್ಮೂಲನಾ ಮಂಡಳಿ ಮೇಲೆ ಲೋಕಾಯುಕ್ತ ದಾಳಿ

ಕರ್ನಾಟಕದಲ್ಲಿ ಲೋಕಾಯುಕ್ತ (Lokayuktha) ಭ್ರಷ್ಟ ಅಧಿಕಾರಿಗಳ ವಿರುದ್ಧದ ಸಮರ ಮುಂದುವರೆಸಿದ್ದು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ AEE ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ದಾಳಿ ಸಂಪೂರ್ಣ ವಿವರ ಇಲ್ಲಿದೆ.

ಮನೆ ನಿರ್ಮಿಸದೇ  23 ಕೋಟಿ ರೂ.ಗುಳುಂ:ಕೊಳಚೆ ನಿರ್ಮೂಲನಾ ಮಂಡಳಿ ಮೇಲೆ ಲೋಕಾಯುಕ್ತ ದಾಳಿ
Belagavi Slum Development
Sahadev Mane
| Edited By: |

Updated on: May 19, 2026 | 8:18 PM

Share

ಬೆಳಗಾವಿ/ಬೆಂಗಳೂರು, (ಮೇ 19): ಕೋಟ್ಯಾಂತರ ರೂಪಾಯಿ ಅನುದಾನ ದುರ್ಬಳಕೆ ಆರೋಪ ಮೇಲೆ ಬೆಳಗಾವಿ (Belagavi) ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯಕ್ತ (Lokayukta) ದಾಳಿಯಾಗಿದೆ. 600 ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡದೇ 33 ಕೋಟಿ ರೂ. ಅನುದಾನದಲ್ಲಿ 23 ಕೋಟಿ ರೂ.ಲೂಟಿ ಮಾಡಿದ್ದಾರೆ ಎನ್ನುವ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮೇ 19) ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗಳಿಗೆ ಸೇರಿದ 8 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ದಾಳಿ ವೇಳೆ ಕೋಟ್ಯಂತರ ರೂ. ಮೌಲ್ಯದ ಬಿಲ್​​​ಗಳು ಸೇರಿ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ.

ಮುಖ್ಯಾಂಶ

  • ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾ ದಾಳಿ
  • ಬೆಳಗಾವಿ ಸೇರಿದಂತೆ 8 ಕಡೆ ಲೋಕಾಯುಕ್ತ ಪೊಲೀಸರಿಂದ ದಾಳಿ
  • ಕೋಟ್ಯಂತರ ರೂ. ಮೌಲ್ಯದ ಬಿಲ್​ಗಳು, ಮಹತ್ವದ ದಾಖಲೆ ಜಪ್ತಿ
  • ಬೆಳಗಾವಿ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿದ್ದ ವಂಚನೆ ಕೇಸ್
  • ಸರ್ಕಾರದ ಹಣ ದುರುಪಯೋಗ ಕೇಸ್​ನಡಿ ದೂರು ದಾಖಲಾಗಿತ್ತು

ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನ ದಡಿ 600 ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡದೇ 33 ಕೋಟಿ ರೂಪಾಯಿ ಅನುದಾನದಲ್ಲಿ 23 ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಕೊಳಚೆ ನಿರ್ಮೂಲನಾ ಅಭಿವೃದ್ಧಿ ಇಲಾಖೆ ನಿವೃತ್ತ ಎಇಇ ಶಂಭುಲಿಂಗಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ಲಮಾಣಿ, NTCC ಮ್ಯಾನೇಜರ್ ಎನ್.ಪ್ರಸಾದ್, ವಿಜಯಪುರ ಗುತ್ತಿಗೆದಾರ ಗಿರಮಲಪ್ಪ ಜೋಗೂರ ವಿರುದ್ಧ  ಸರ್ಕಾರದ ಹಣ ದುರುಪಯೋಗ ಕೇಸ್​ನಡಿ ಕೇಸ್ ದಾಖಲಾಗಿದ್ದು, ಈ ದೂರಿನ ಅನ್ವಯ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ: ಕೋಟ್ಯಂತರ ವಂಚನೆ ಕೇಸ್​: ಖಾತೆಯಲ್ಲಿ ನೂರಾರು ಕೋಟಿ ಪತ್ತೆಯಾದ್ರೂ ಬ್ಯಾಂಕ್ ಗಪ್‌ಚುಪ್; ಶಿವಾನಂದನೊಂದಿಗೆ ಅಧಿಕಾರಿಗಳು ಶಾಮೀಲು?

ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಕಚೇರಿ ಮತ್ತು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಪತ್ತೆಯಾದ 23 ಕೋಟಿ ರೂಪಾಯಿ ಅನಧಿಕೃತ ಬಿಲ್ ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ.

50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ AEE

ಬೆಂಗಳೂರು: ಇನ್ನು ಬೆಂಗಳೂರಿನಲ್ಲಿ ಬೆಸ್ಕಾಂ (BESCOM) ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾತ್ಕಾಲಿಕವಾಗಿ ಮೀಟರ್​ಗೆ 25 ಕಿಲೋ ವ್ಯಾಟ್ ವಿದ್ಯುತ್ ಪೂರೈಕೆ ಮಾಡಲು ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ AEE ಮನೋಜ್​ ಕುಮಾರ್​​ ಲಾಕ್​ ಆಗಿದ್ದಾರೆ. ಮನೋಜ್ ಜೊತೆಗೆ ಕಂಠರಾಜು ಎಂಬ ವಿದ್ಯುತ್ ಗುತ್ತಿಗೆದಾರ ಕೂಡ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನ ಜೆಪಿ ನಗರದ ಬೆಸ್ಕಾಂ ಕಚೇರಿಯಲ್ಲಿ AEE ಆಗಿರುವ ಮನೋಜ್ ಕುಮಾರ್​, ತಾತ್ಕಾಲಿಕವಾಗಿ ಮೀಟರ್‌ಗೆ 25 ಕಿಲೋ ವ್ಯಾಟ್ ವಿದ್ಯುತ್ ಪೂರೈಕೆ ಮಾಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣವನ್ನು ವಿದ್ಯುತ್ ಗುತ್ತಿಗೆದಾರ ಕಂಠರಾಜುಗೆ ನೀಡಲು AEE ಮನೋಜ್ ಕುಮಾರ್​ ಸೂಚನೆ ನೀಡಿದ್ದರು. ಈ ಬಗ್ಗೆ ದೂರುದಾರ ರಘುರಾಜ್‌ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್​​ ದೇವರಾಜ್​​ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, AEE ಮನೋಜ್ ಕುಮಾರ್ ಮತ್ತು ವಿದ್ಯುತ್ ಗುತ್ತಿಗೆದಾರ ಕಂಠರಾಜು 50 ಸಾವಿರ ಹಣ ಪಡೆಯುವಾಗ‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಇಬ್ಬರನ್ನು ಬಂಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sahadev Mane
Sahadev Mane
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ