AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ

ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಆಕೆಯ ಗಂಡ ಹಾಗೂ ಸಹೋದರ ಮಾಡಿದ ಮಾರಣಾಂತಿಕವಾಗಿ ಹಲ್ಲೆಯಿಂದ ಆಸ್ಪತ್ರೆ ಸೇರುವಂತಾಗಿದೆ. ರಾತ್ರಿ ವೇಳೆ ಮಹಿಳೆಯ ಬಳಿಗೆ ಹೋಗಿದ್ದಾಗ ಯವಕನ ಮೇಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ಹಲ್ಲೆ ನಡೆದಿದೆ.

ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಕ್ಷಯ್
Sahadev Mane
| Edited By: |

Updated on: Jan 02, 2026 | 2:22 PM

Share

ಬೆಳಗಾವಿ, ಜನವರಿ 2: ಮೂರು ಮಕ್ಕಳ ತಾಯಿ ಜತೆ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಯುವಕನ ಮೇಲೆ ಮಹಿಳೆಯ ಪತಿ ಹಾಗೂ ಆತನ ಸಹೋರ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಕರೋಶಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಕ್ಸಂಬಾ ಪಟ್ಟಣದ ಅಕ್ಷಯ ಕಲ್ಲಟಗಿ ಎಂಬ ಯುವಕ ನಾಲ್ಕು ವರ್ಷಗಳಿಂದ ವಿವಾಹಿತ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದುತ್ತಿದ್ದ ಆರೋಪ ಅಕ್ಷಯ ಮೇಲೆ ಇದೆ.

ರಾತ್ರಿ ಬಾ ಎಂದು ಕರೆದಿದ್ದ ಮಹಿಳೆ: ನಂಬಿ ಹೋದವನಿಗೆ ಬಿತ್ತು ಗೂಸಾ

ರಾತ್ರಿ ಭೇಟಿಯಾಗಲು ಬಾ ಎಂದು ಅಕ್ಷಯ್​ಗೆ ಮಹಿಳೆಯೇ ಕರೆ ಮಾಡಿ ಹೇಳಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಅದರಂತೆ ಅಕ್ಷಯ್ ಆಕೆಯ ಭೇಟಿಯಾಗಲು ತೆರಳಿದ್ದಾರೆ. ಈ ವೇಳೆ, ಅಕ್ಷಯನನ್ನು ದಾರಿ ಮಧ್ಯೆ ತಡೆದ ಮಹಿಳೆಯ ಗಂಡ ಹಾಗೂ ಆಕೆಯ ಸಹೋದರ ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಗ್ಗಾಮುಗ್ಗಾ ಹಲ್ಲೆ ನಡೆದಿದ್ದರಿಂದ ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಹಿಂಡಲಗಾ ಜೈಲಿನ ಒಳಗೆ ಮೊಬೈಲ್, ಡ್ರಗ್ಸ್! ಸಿಬ್ಬಂದಿಯೇ ಅಕ್ರಮದಲ್ಲಿ ಶಾಮೀಲು?

ತೀವ್ರವಾಗಿ ಗಾಯಗೊಂಡ ಅಕ್ಷಯನನ್ನು ತಕ್ಷಣ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ