AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಬಿಸಿ ಅತ್ಯಾಚಾರ ಎಸಗಿ, ಬೇರೆ ಮದುವೆ ಆಗಲು ಹೊರಟ ಯುವಕ; ನ್ಯಾಯಕ್ಕಾಗಿ ಸಂತ್ರಸ್ತೆ ಅಳಲು

ಯುವತಿ ಬಾಡಿಗೆ ಕಟ್ಟಡದಲ್ಲಿ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಇದೇ ವಸತಿ ನಿಲಯ ಬಾಡಿಗೆ ನೀಡಿದ್ದ ಕಟ್ಟಡ ಮಾಲೀಕನ ಪುತ್ರನ ವಿರುದ್ಧ ಇದೀಗ ಮೋಸ ಮಾಡಿರುವ ಆರೋಪ ಮಾಡಿದ್ದಾರೆ.

ನಂಬಿಸಿ ಅತ್ಯಾಚಾರ ಎಸಗಿ, ಬೇರೆ ಮದುವೆ ಆಗಲು ಹೊರಟ ಯುವಕ; ನ್ಯಾಯಕ್ಕಾಗಿ ಸಂತ್ರಸ್ತೆ ಅಳಲು
ನಂಬಿಸಿ ಅತ್ಯಾಚಾರ ಎಸಗಿ, ಬೇರೆ ಮದುವೆ ಆಗಲು ಹೊರಟ ಯುವಕ; ನ್ಯಾಯಕ್ಕಾಗಿ ಸಂತ್ರಸ್ತೆ ಅಳಲು
TV9 Web
| Edited By: |

Updated on: Feb 21, 2022 | 1:20 PM

Share

ಬೆಳಗಾವಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಮೋಸ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇನ್ನೂ ಮೋಸ ಮಾಡಿದ ಯುವಕ ಇಂದು ಬೇರೆ ಯುವತಿ ಜೊತೆಗೆ ಮದುವೆ ಆಗುತ್ತಿದ್ದಾನೆ. ನ್ಯಾಯಕ್ಕಾಗಿ ನೊಂದ ಯುವತಿ ಬೆಳಗಾವಿ ಎಸ್.ಪಿ ಮೊರೆ ಹೋಗಿದ್ದಾರೆ. ಗೋಕಾಕ್‌ ನಗರದ ಆದರ್ಶ ಮಾಲದಿನ್ನಿ ವಿರುದ್ಧ ನೊಂದ ಯುವತಿ ಆರೋಪ ಮಾಡಿದ್ದಾರೆ.

ಯುವತಿ ಬಾಡಿಗೆ ಕಟ್ಟಡದಲ್ಲಿ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಇದೇ ವಸತಿ ನಿಲಯ ಬಾಡಿಗೆ ನೀಡಿದ್ದ ಕಟ್ಟಡ ಮಾಲೀಕನ ಪುತ್ರನ ವಿರುದ್ಧ ಇದೀಗ ಮೋಸ ಮಾಡಿರುವ ಆರೋಪ ಮಾಡಿದ್ದಾರೆ. 2016ರ ಡಿಸೆಂಬರ್ 5ರಂದು ಯುವತಿಯನ್ನ ಮನೆಗೆ ಕರೆದು ಬಳಿಕ ಅತ್ಯಾಚಾರ ಎಸಗಿದ್ದನಂತೆ. ಅತ್ಯಾಚಾರ ಎಸಗುವ ದೃಶ್ಯವನ್ನು ಮೊಬೈಲಿನಲ್ಲಿ ಸೆರೆ ಹಿಡಿದಿದ್ದು ಈ ವಿಷಯ ಬಹಿರಂಗ ಪಡಿಸಿದರೆ ವಿಡಿಯೋ, ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಯುವತಿ ಪೊಲೀಸರಿಗೆ ದೂರು ನೀಡಲು ಮುಂದಾಗುತ್ತಿದ್ದಂತೆ ಮದುವೆ ಆಗುವುದಾಗಿ ಮತ್ತೆ ಯುವತಿಯನ್ನ ನಂಬಿಸಿದ್ದಾನೆ. ಹೀಗೆ ನಂಬಿಸಿ ಅತ್ಯಾಚಾರ ಎಸಗಿ ಮೋಸ ಮಾಡಿರುವ ಯುವಕ ಇಂದು ಬೇರೆ ಯುವತಿ ಜೊತೆಗೆ ಮದುವೆ ಆಗುತ್ತಿರುವುದಾಗಿ ಯುವತಿ ಅಳಲು ತೋಡಿಕೊಂಡಿದ್ದಾರೆ.

ಈ ವಿಷಯವನ್ನ ಯುವತಿ, ಯುವಕನ ತಂದೆ ತಾಯಿ ಗಮನಕ್ಕೆ ತಂದಿದ್ದಾರೆ. ಆಗ ಯುವತಿಗೆ ಹಣದ ಆಮಿಷ ತೋರಿಸಿರುವ ಯುವಕನ ಪೋಷಕರು ಬಳಿಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಆರೋಪಿದ್ದಾರೆ. ಇಂದು ಗೋಕಾಕ್‌ನಲ್ಲಿ ಬೇರೆ ಯುವತಿ ಜೊತೆಗೆ ಯುವಕ ಮದುವೆಯಾಗುತ್ತಿದ್ದು ನ್ಯಾಯ ದೊರಕಿಸಿಕೊಡುವಂತೆ ಮ‌ನವಿ ಮಾಡಿದ್ದಾರೆ‌. ವಕೀಲ ಎಂ.ಟಿ.ಪಾಟೀಲ್ ಮೂಲಕ ಎಸ್‌ಪಿ ಕಚೇರಿಗೆ ತೆರಳಿ ಯುವತಿ ದೂರು ನೀಡಿದ್ದಾರೆ. ನಿನ್ನೆ ಸಂಜೆ ಯುವತಿ ಎಸ್‌ಪಿ ಅವರಿಗೆ ಮನವಿ ಮಾಡಿಕೊಂಡಿದ್ದು ಇಂದು ಮದುವೆಯನ್ನ ತಡೆದು ತಮಗೆ ನ್ಯಾಯ ಕೊಡಿಸಿ ಅಂತಾ ಕೇಳಿಕೊಂಡಿದ್ದಾರೆ. ಆದ್ರೇ ಯುವತಿಗೆ ಅನ್ಯಾಯವಾದ ಬಗ್ಗೆ ಎಲ್ಲಿಯೂ ದೂರು ನೀಡಿಲ್ಲ.

ವರದಿ: ಸಹದೇವ ಮಾನೆ, ಟಿವಿ9 ಬೆಳಗಾವಿ

ಇದನ್ನೂ ಓದಿ: Deepak Chahar Injury: ಭಾರತಕ್ಕೆ ದೊಡ್ಡ ಶಾಕ್: ರೋಹಿತ್​​ನ ನಂಬಿಕಸ್ಥ ಪ್ಲೇಯರ್ ಶ್ರೀಲಂಕಾ ಸರಣಿಯಿಂದ ಔಟ್?

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ