AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಬಿಸಿ ಅತ್ಯಾಚಾರ ಎಸಗಿ, ಬೇರೆ ಮದುವೆ ಆಗಲು ಹೊರಟ ಯುವಕ; ನ್ಯಾಯಕ್ಕಾಗಿ ಸಂತ್ರಸ್ತೆ ಅಳಲು

ಯುವತಿ ಬಾಡಿಗೆ ಕಟ್ಟಡದಲ್ಲಿ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಇದೇ ವಸತಿ ನಿಲಯ ಬಾಡಿಗೆ ನೀಡಿದ್ದ ಕಟ್ಟಡ ಮಾಲೀಕನ ಪುತ್ರನ ವಿರುದ್ಧ ಇದೀಗ ಮೋಸ ಮಾಡಿರುವ ಆರೋಪ ಮಾಡಿದ್ದಾರೆ.

ನಂಬಿಸಿ ಅತ್ಯಾಚಾರ ಎಸಗಿ, ಬೇರೆ ಮದುವೆ ಆಗಲು ಹೊರಟ ಯುವಕ; ನ್ಯಾಯಕ್ಕಾಗಿ ಸಂತ್ರಸ್ತೆ ಅಳಲು
ನಂಬಿಸಿ ಅತ್ಯಾಚಾರ ಎಸಗಿ, ಬೇರೆ ಮದುವೆ ಆಗಲು ಹೊರಟ ಯುವಕ; ನ್ಯಾಯಕ್ಕಾಗಿ ಸಂತ್ರಸ್ತೆ ಅಳಲು
Follow us
TV9 Web
| Updated By: ಆಯೇಷಾ ಬಾನು

Updated on: Feb 21, 2022 | 1:20 PM

ಬೆಳಗಾವಿ: ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಮೋಸ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇನ್ನೂ ಮೋಸ ಮಾಡಿದ ಯುವಕ ಇಂದು ಬೇರೆ ಯುವತಿ ಜೊತೆಗೆ ಮದುವೆ ಆಗುತ್ತಿದ್ದಾನೆ. ನ್ಯಾಯಕ್ಕಾಗಿ ನೊಂದ ಯುವತಿ ಬೆಳಗಾವಿ ಎಸ್.ಪಿ ಮೊರೆ ಹೋಗಿದ್ದಾರೆ. ಗೋಕಾಕ್‌ ನಗರದ ಆದರ್ಶ ಮಾಲದಿನ್ನಿ ವಿರುದ್ಧ ನೊಂದ ಯುವತಿ ಆರೋಪ ಮಾಡಿದ್ದಾರೆ.

ಯುವತಿ ಬಾಡಿಗೆ ಕಟ್ಟಡದಲ್ಲಿ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಇದೇ ವಸತಿ ನಿಲಯ ಬಾಡಿಗೆ ನೀಡಿದ್ದ ಕಟ್ಟಡ ಮಾಲೀಕನ ಪುತ್ರನ ವಿರುದ್ಧ ಇದೀಗ ಮೋಸ ಮಾಡಿರುವ ಆರೋಪ ಮಾಡಿದ್ದಾರೆ. 2016ರ ಡಿಸೆಂಬರ್ 5ರಂದು ಯುವತಿಯನ್ನ ಮನೆಗೆ ಕರೆದು ಬಳಿಕ ಅತ್ಯಾಚಾರ ಎಸಗಿದ್ದನಂತೆ. ಅತ್ಯಾಚಾರ ಎಸಗುವ ದೃಶ್ಯವನ್ನು ಮೊಬೈಲಿನಲ್ಲಿ ಸೆರೆ ಹಿಡಿದಿದ್ದು ಈ ವಿಷಯ ಬಹಿರಂಗ ಪಡಿಸಿದರೆ ವಿಡಿಯೋ, ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಯುವತಿ ಪೊಲೀಸರಿಗೆ ದೂರು ನೀಡಲು ಮುಂದಾಗುತ್ತಿದ್ದಂತೆ ಮದುವೆ ಆಗುವುದಾಗಿ ಮತ್ತೆ ಯುವತಿಯನ್ನ ನಂಬಿಸಿದ್ದಾನೆ. ಹೀಗೆ ನಂಬಿಸಿ ಅತ್ಯಾಚಾರ ಎಸಗಿ ಮೋಸ ಮಾಡಿರುವ ಯುವಕ ಇಂದು ಬೇರೆ ಯುವತಿ ಜೊತೆಗೆ ಮದುವೆ ಆಗುತ್ತಿರುವುದಾಗಿ ಯುವತಿ ಅಳಲು ತೋಡಿಕೊಂಡಿದ್ದಾರೆ.

ಈ ವಿಷಯವನ್ನ ಯುವತಿ, ಯುವಕನ ತಂದೆ ತಾಯಿ ಗಮನಕ್ಕೆ ತಂದಿದ್ದಾರೆ. ಆಗ ಯುವತಿಗೆ ಹಣದ ಆಮಿಷ ತೋರಿಸಿರುವ ಯುವಕನ ಪೋಷಕರು ಬಳಿಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಆರೋಪಿದ್ದಾರೆ. ಇಂದು ಗೋಕಾಕ್‌ನಲ್ಲಿ ಬೇರೆ ಯುವತಿ ಜೊತೆಗೆ ಯುವಕ ಮದುವೆಯಾಗುತ್ತಿದ್ದು ನ್ಯಾಯ ದೊರಕಿಸಿಕೊಡುವಂತೆ ಮ‌ನವಿ ಮಾಡಿದ್ದಾರೆ‌. ವಕೀಲ ಎಂ.ಟಿ.ಪಾಟೀಲ್ ಮೂಲಕ ಎಸ್‌ಪಿ ಕಚೇರಿಗೆ ತೆರಳಿ ಯುವತಿ ದೂರು ನೀಡಿದ್ದಾರೆ. ನಿನ್ನೆ ಸಂಜೆ ಯುವತಿ ಎಸ್‌ಪಿ ಅವರಿಗೆ ಮನವಿ ಮಾಡಿಕೊಂಡಿದ್ದು ಇಂದು ಮದುವೆಯನ್ನ ತಡೆದು ತಮಗೆ ನ್ಯಾಯ ಕೊಡಿಸಿ ಅಂತಾ ಕೇಳಿಕೊಂಡಿದ್ದಾರೆ. ಆದ್ರೇ ಯುವತಿಗೆ ಅನ್ಯಾಯವಾದ ಬಗ್ಗೆ ಎಲ್ಲಿಯೂ ದೂರು ನೀಡಿಲ್ಲ.

ವರದಿ: ಸಹದೇವ ಮಾನೆ, ಟಿವಿ9 ಬೆಳಗಾವಿ

ಇದನ್ನೂ ಓದಿ: Deepak Chahar Injury: ಭಾರತಕ್ಕೆ ದೊಡ್ಡ ಶಾಕ್: ರೋಹಿತ್​​ನ ನಂಬಿಕಸ್ಥ ಪ್ಲೇಯರ್ ಶ್ರೀಲಂಕಾ ಸರಣಿಯಿಂದ ಔಟ್?

ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ