AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವದತ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೇರಿದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​ಗಳು ಜಪ್ತಿ

ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​ಗಳನ್ನು ಜಪ್ತಿ ಮಾಡಿದ್ದಾರೆ. JDS ಅಭ್ಯರ್ಥಿ ಸೌರವ್ ಚೋಪ್ರಾ ಭಾವಚಿತ್ರವಿರುವ ಟಿಫಿನ್ ಬಾಕ್ಸ್‌ಗಳು ಜಪ್ತಿ.

ಸವದತ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೇರಿದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​ಗಳು ಜಪ್ತಿ
JDS ಅಭ್ಯರ್ಥಿ ಭಾವಚಿತ್ರವಿರುವ ಟಿಫಿನ್ ಬಾಕ್ಸ್‌
ಆಯೇಷಾ ಬಾನು
|

Updated on:Apr 19, 2023 | 9:51 AM

Share

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದು ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​ಗಳನ್ನು ಜಪ್ತಿ ಮಾಡಿದ್ದಾರೆ. ಸವದತ್ತಿಯ ಸಂಭವ ಟಿಂಬರ್ ಯಾರ್ಡ್ ಗೋದಾಮು ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು 23,84,272 ರೂ. ಮೌಲ್ಯದ 1,012 ಹೊಲಿಗೆ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

11,27,840 ರೂ. ಮೌಲ್ಯದ 1,060 ಐರನ್​ ಸ್ಟ್ಯಾಂಡ್​ಗಳು. JDS ಅಭ್ಯರ್ಥಿ ಸೌರವ್ ಚೋಪ್ರಾ ಭಾವಚಿತ್ರವಿರುವ 3.24 ಲಕ್ಷ ಮೌಲ್ಯದ 2,160 ಟಿಫಿನ್ ಬಾಕ್ಸ್‌ಗಳನ್ನು ಜಪ್ತಿ ಮಾಡಲಾಗಿದೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ದಾಖಲೆ ಇಲ್ಲದ 7 ಕೆಜಿಗೂ ಅಧಿಕ ಚಿನ್ನ ಜಪ್ತಿ

ಇನ್ನು ಮತ್ತೊಂದೆಡೆ ಬೆಂಗಳೂರಿನಲ್ಲಿ ದಾಖಲೆ ಇಲ್ಲದ 7 ಕೆಜಿಗೂ ಅಧಿಕ ಚಿನ್ನ ಜಪ್ತಿ ಮಾಡಲಾಗಿದೆ. 5 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಜಪ್ತಿ ಮಾಡಿದ್ದು ಮೂವರನ್ನು ವಿವೇಕ್​ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಚರ್ ವಾಹನದಲ್ಲಿ ದಾಖಲೆ ಇಲ್ಲದೆ ಚಿನ್ನ, ಬೆಳ್ಳಿಯನ್ನು ಸಾಗಿಸಲಾಗುತ್ತಿತ್ತು. ಸದ್ಯ ವಿವೇಕ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ 7 ಕೆಜಿ 999 ಗ್ರಾಂ ಚಿನ್ನ, 46 ಕೆಜಿ 700 ಗ್ರಾಂ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ ಬಗ್ಗೆ ಕೇಸ್ ದಾಖಲಾಗಿದ್ದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:51 am, Wed, 19 April 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು