AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahadayi water dispute: ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಗ್ಗಟ್ಟಾಗಿ ಹೋರಾಟ – ಏಕನಾಥ್ ಶಿಂಧೆ

ಮಹದಾಯಿ ನದಿ ನೀರು ಹಂಚಿಕ ವಿಚಾರವಾಗಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ ಹಾಗೂ ಗೋವಾ ಸರ್ಕಾರ ಒಗ್ಗಟ್ಟಾಗಿ "ಮಹದಾಯಿ ವಿಚಾರದಲ್ಲಿ ಹೋರಾಟ" ನಡೆಸಲು ಮುಂದಾಗಿವೆ.

Mahadayi water dispute: ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಗ್ಗಟ್ಟಾಗಿ ಹೋರಾಟ - ಏಕನಾಥ್ ಶಿಂಧೆ
ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಲ್ಲಿ ಭಾಗಿಯಾದ ಮಹಾರಾಷ್ಟ್ರ ಹಾಗೂ ಗೋವಾ ಸಿಎಂ
ವಿವೇಕ ಬಿರಾದಾರ
|

Updated on:Jun 18, 2023 | 8:15 AM

Share

ಬೆಳಗಾವಿ: ಮಹದಾಯಿ (Mahadayi River) ನದಿ ನೀರು ಹಂಚಿಕ ವಿಚಾರವಾಗಿ ಕರ್ನಾಟಕ (Karnataka) ಹಾಗೂ ಗೋವಾ (Goa) ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ (Maharashtra) ಹಾಗೂ ಗೋವಾ ಸರ್ಕಾರ ಒಗ್ಗಟ್ಟಾಗಿ “ಮಹದಾಯಿ ವಿಚಾರದಲ್ಲಿ ಹೋರಾಟ” ನಡೆಸಲು ಮುಂದಾಗಿವೆ. ಹೌದು ಒಂದಡೆ ಗಡಿ ಕ್ಯಾತೆ ತೆಗೆಯುತ್ತಿರುವ ಮಹರಾಷ್ಟ್ರ ಇದೀಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಿದೆ. ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. ಮಹದಾಯಿ ನೀರಿನ ಹೋರಾಟ ಮೂರು ರಾಜ್ಯಗಳ ಪ್ರಶ್ನೆಯಾಗಿದ್ದು, ಮಹಾರಾಷ್ಟ್ರ ಮತ್ತು ಗೋವಾ ಈ ಹೋರಾಟವನ್ನು ಒಟ್ಟಾಗಿ ಎದುರಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ಸಂ‌ಬಂಧ ಸಭೆ ‌ನಿನ್ನೆ (ಜೂ.17) ರಂದು ಮುಂಬೈನಲ್ಲಿ ನಡೆದಿದ್ದ ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆ ನಡೆಯಿತು. ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಭಾಗಿಯಾಗಿದ್ದರು.

ಇದನ್ನೂ ಓದಿ: ಹೊಸ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮಹದಾಯಿ ನದಿ ತಿರುವು ಯೋಜನೆಗೆ ಹೊಸ ಪ್ರಸ್ತಾವನೆ 

ದಶಕದ ಬಳಿಕ ನಡೆದ ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಲ್ಲಿ ತಿಲಾರಿ ಅಣೆಕಟ್ಟು ಯೋಜನೆ ನೆಪದಲ್ಲಿ ಮಹದಾಯಿ ವಿವಾದದ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೊಲ್ಲಾಪುರ ಜಿಲ್ಲೆಯ ತಿಲಾರಿ ಅಣೆಕಟ್ಟು ಬಗ್ಗೆ ಚರ್ಚಿಸಲು ಸಭೆ ಸೇರಲಾಗಿತ್ತು.

ಸಭೆಯಲ್ಲಿ ಮಹದಾಯಿ ನೀರಿಗಾಗಿ ಗೋವಾ ಮತ್ತು ಮಹಾರಾಷ್ಟ್ರ ಒಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಶಿಂಧೆ ಹೇಳಿದ್ದಾರೆ. ಇದರಿಂದಾಗಿ ಮಹದಾಯಿ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.

ಮಹಾದಾಯಿ ನೀರು ಹಂಚಿಕೆಯಲ್ಲಿ ಮಹಾರಾಷ್ಟ್ರ ಪಾಲು ತೀರಾ ಕಡಿಮೆ ಇದೆ. 2018 ರಲ್ಲಿ ನ್ಯಾಯಮಂಡಳಿಯು ಮಹದಾಯಿ ನದಿ ಜಲಾನಯನ ಪ್ರದೇಶದಿಂದ ಕರ್ನಾಟಕಕ್ಕೆ 13.42 ಟಿಎಂಸಿ, ಮಹಾರಾಷ್ಟ್ರಕ್ಕೆ 1.33 ಟಿಎಂಸಿ ಮತ್ತು ಗೋವಾಕ್ಕೆ 24 ಟಿಎಂಸಿ ನೀರನ್ನು ನೀಡಿತು. ಕರ್ನಾಟದಕದ ಪಾಲಿಗೆ ದೊರೆತ ನೀರು 5.5 ಟಿಎಂಸಿಕುಡಿಯುವ ನೀರಿನ ಪೂರೈಕೆ ಹಾಗೂ 8.02 ಟಿಎಂಸಿ ನೀರು ಜಲವಿದ್ಯುತ್ ಉತ್ಪಾದನೆಗೆ ಎಂದು ಹಂಚಿಕೆಯಾಗಿತ್ತು.ಹೀಗಿದ್ದರೂ ‌ಕರ್ನಾಟಕ ವಿರುದ್ಧ ಹಗೆ ಸಾಧಿಸಲು ಗೋವಾ ಜೊತೆಗೆ ಮಹಾರಾಷ್ಟ್ರ ಸರ್ಕಾರ ಕೈ ಜೋಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Sun, 18 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!