AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದೇ ಬರುವೆ ಬೆಳಗಾವಿಗೆ ಎಂದ ಮಹಾ ಸಚಿವ ದೇಸಾಯಿ: ರೊಚ್ಚಿಗೆದ್ದ ಕನ್ನಡಿಗರಿಂದ ಮಹಾರಾಷ್ಟ್ರ ಲಾರಿಗಳು ಗ್ಲಾಸ್​ ಪೀಸ್​, ಪೀಸ್

ಹಿರೇಬಾಗೇವಾಡಿ ಟೋಲ್ ಬಳಿ ಕರವೇ ದಂಡು ಬಂದು ಮಹಾರಾಷ್ಟ್ರದ ಲಾರಿಗಳನ್ನ ಅಡ್ಡಗಟ್ಟಿ ಬೆಳಗಾವಿ ನಮ್ಮದು ನಮ್ಮದು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಮಹಾರಾಷ್ಟ್ರದ ಐದು ಲಾರಿಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಬಂದೇ ಬರುವೆ ಬೆಳಗಾವಿಗೆ ಎಂದ ಮಹಾ ಸಚಿವ ದೇಸಾಯಿ: ರೊಚ್ಚಿಗೆದ್ದ ಕನ್ನಡಿಗರಿಂದ ಮಹಾರಾಷ್ಟ್ರ ಲಾರಿಗಳು ಗ್ಲಾಸ್​ ಪೀಸ್​, ಪೀಸ್
ಬೆಳಗಾವಿ ಗಡಿಯಲ್ಲಿ ಕನ್ನಡಿಗರಿಂದ ಪ್ರತಿಭಟನೆ
TV9 Web
| Edited By: |

Updated on: Dec 06, 2022 | 2:57 PM

Share

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕನ್ನಡಿಗರ ಸ್ವಾಭಿಮಾನ ಕೆಣಕಿದ ಮಹಾರಾಷ್ಟ್ರ ಸಚಿವರು, ನಾವು ಬೆಳಗಾವಿ ಬಂದೇ ಬರ್ತೇವೆ ಅಂತ ಸವಾಲ್​ ಹಾಕಿದ್ದಾರೆ. ಇದಕ್ಕೆ ಕೆರಳಿ ಕೆಂಡವಾದ ಕನ್ನಡಿಗರು ಬರ್ತೀರಾ. ಬನ್ನಿ ಒಂದು ಕೈ ನೋಡೇ ಬಿಡೋಣ ಎಂದು ಇವತ್ತು ದೊಡ್ಡ ದಂಡು ಕಟ್ಟಿಕೊಂಡು ಬೆಳಗಾವಿ ಗಡಿಗೆ ನುಗ್ಗಿದ್ದಾರೆ.

ಬೆಳಗಾವಿಯ ಹಿರೇಬಾಗೇವಾಡಿ ಟೋಲ್​ ಅಕ್ಷರಶಃ ರಣಾಂಗಣವಾಗಿದೆ. ಬೆಳಗಾವಿಗೆ ಕರವೇ ಕಾರ್ಯಕರ್ತರು ನುಗ್ಗುತ್ತಿದ್ದಂತೆ ಪೊಲೀಸರು ಹಿರೇಬಾಗೇವಾಡಿ ಟೋಲ್​ ಬಳಿ ಪೊಲೀಸ್ ಬಿಗಿ ಬಂದೂಬಸ್ತ್ ಮಾಡಿದ್ದಾರೆ. ಆದ್ರೆ ಕರವೇ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರದ 5 ಲಾರಿಗಳ ಗಾಜು ಒಡೆದು, ಮಸಿ ಬಳಿದು ಆಕ್ರೋಶ ಹೊರ ಹಾಕಿದೆ.

ಇದನ್ನೂ ಓದಿ: ಶೀಘ್ರದಲ್ಲೇ ಬೆಳಗಾವಿಗೆ ಭೇಟಿ ನೀಡುತ್ತೇವೆ: ಮಹಾರಾಷ್ಟ್ರ ಸಚಿವ ದೇಸಾಯಿ

ಮಹಾರಾಷ್ಟ್ರ ಲಾರಿಗಳ ಗ್ಲಾಸ್​ ಪೀಸ್​, ಪೀಸ್

ಹಿರೇಬಾಗೇವಾಡಿ ಟೋಲ್ ಬಳಿ ಕರವೇ ದಂಡು ಬಂದು ಮಹಾರಾಷ್ಟ್ರದ ಲಾರಿಗಳನ್ನ ಅಡ್ಡಗಟ್ಟಿ ಬೆಳಗಾವಿ ನಮ್ಮದು ನಮ್ಮದು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಮಹಾರಾಷ್ಟ್ರದ ಐದು ಲಾರಿಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಿಂದ ಲಾರಿಗಳ ಮುಂಭಾಗದ ಗ್ಲಾಸ್​ ಪೀಸ್​ ಪೀಸ್​ ಆಗಿದೆ. ಅಷ್ಟೆ ಅಲ್ಲದೆ ಟೋಲ್​ ಬಳಿ ನಿಂತಿದ್ದ ಮಹಾರಾಷ್ಟ್ರದ ಲಾರಿಗಳಿಗೆ ಕಪ್ಪು ಮಸಿ ಬಳಿಯೋ ಮೂಲಕ ಮಹಾರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಇದೇ ವೇಳೆ ನಂಬರ್​ ಪ್ಲೇಟ್​ ಕಿತ್ತು ಹಾಕಿ, ಲಾರಿಗಳ ಚಕ್ರದ ಗಾಳಿ ತೆಗೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಾಯವ್ಯ ಕರ್ನಾಟಕ ಸಾರಿಗೆ ಬಸ್​ನಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ. ಈ ವೇಳೆ ಪೊಲೀಸರ ವಿರುದ್ಧವೂ ಧಿಕ್ಕಾರ ಕೂಗಿ ಕರವೇ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಕನ್ನಡ ಬಾವುಟ ಹಿಡಿದು ಪೊಲೀಸ್ ವಾಹನದ ಮೇಲೇರಿ ಎಂಇಎಸ್​ ವಿರುದ್ಧ ಘೋಷಣೆ ಕೂಗಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್