AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಯಾವುದೇ ಸಂಘರ್ಷ ಮಾಡಲು ಬೆಳಗಾವಿಗೆ ಬರುತ್ತಿಲ್ಲ, ಡಿಸೆಂಬರ್​ 6ರಂದು ಹೋಗಿಯೇ ತೀರುತ್ತೇವೆ -ಗಡಿ ಸಚಿವ ಚಂದ್ರಕಾಂತ ಪಾಟೀಲ್

ಮುಂಬೈನಲ್ಲಿ ಮಾತನಾಡಿದ ಸಚಿವ ಚಂದ್ರಕಾಂತ ಪಾಟೀಲ್, ನನಗೆ ಯಾವುದೇ ಫ್ಯಾಕ್ಸ್ ಆಗಲಿ, ಬೊಮ್ಮಾಯಿ ಪತ್ರವಾಗಲಿ ತಲುಪಿಲ್ಲ. ಡಿಸೆಂಬರ್​ 6ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದರು.

ನಾವು ಯಾವುದೇ ಸಂಘರ್ಷ ಮಾಡಲು ಬೆಳಗಾವಿಗೆ ಬರುತ್ತಿಲ್ಲ, ಡಿಸೆಂಬರ್​ 6ರಂದು ಹೋಗಿಯೇ ತೀರುತ್ತೇವೆ -ಗಡಿ ಸಚಿವ ಚಂದ್ರಕಾಂತ ಪಾಟೀಲ್
ಚಂದ್ರಕಾಂತ ಪಾಟೀಲ್
TV9 Web
| Edited By: |

Updated on:Dec 03, 2022 | 10:31 AM

Share

ಬೆಳಗಾವಿ: ಡಿ.6ರಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವದ್ವಯರ ಭೇಟಿ ವಿಚಾರಕ್ಕೆ ಸಂಬಂಧಿಸಿ ಡಿಸೆಂಬರ್​ 6ರಂದು ನಾವು ಬೆಳಗಾವಿಗೆ ಹೋಗಿಯೇ ತೀರುತ್ತೇವೆ ಎಂದು ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕಕ್ಕೆ ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ತಿಳಿಸಿದ್ದರು. ಆದ್ರೆ ಸಿಎಂ ಪತ್ರಕ್ಕೂ ಕ್ಯಾರೆ ಎನ್ನದೆ ಸಚಿವ ಚಂದ್ರಕಾಂತ ಪಾಟೀಲ್ ಮೊಂಡುತನ ಮುಂದುವರೆಸಿದ್ದಾರೆ.

ಮುಂಬೈನಲ್ಲಿ ಮಾತನಾಡಿದ ಸಚಿವ ಚಂದ್ರಕಾಂತ ಪಾಟೀಲ್, ನನಗೆ ಯಾವುದೇ ಫ್ಯಾಕ್ಸ್ ಆಗಲಿ, ಬೊಮ್ಮಾಯಿ ಪತ್ರವಾಗಲಿ ತಲುಪಿಲ್ಲ. ನಾನು ಡಿ.3ರಂದು ಬೆಳಗಾವಿಗೆ ಹೋಗಬೇಕಿತ್ತು. ಆದ್ರೆ ಡಿಸೆಂಬರ್​ 6ರಂದು ಡಾ.ಬಿ.ಆರ್​.ಅಂಬೇಡ್ಕರ್​ ಪರಿನಿರ್ವಾಣ ದಿನ ಇದೆ. ಅಂದು ಬೆಳಗಾವಿಯಲ್ಲಿ ಹಲವು ಕಾರ್ಯಕ್ರಮಗಳು ಇರುತ್ತವೆ. ಎಲ್ಲರೂ ಸಹ ನನಗೆ ಡಿ.6ರಂದು ಆಗಮಿಸುವಂತೆ ವಿನಂತಿಸಿದ್ದಾರೆ. ನಾನು ಡಿ.6ರಂದೇ ಬೆಳಗಾವಿಗೆ ಭೇಟಿ ನೀಡುತ್ತೇನೆ. ಗಡಿ ಭಾಗದ ಜನ, ಗಡಿ ಹೋರಾಟದಲ್ಲಿ ಮೃತಪಟ್ಟ ಹುತಾತ್ಮರ ನಿವಾಸಕ್ಕೆ ಭೇಟಿ ನೀಡುತ್ತೇನೆ. ಈ ಪೈಕಿ ಅಂಬೇಡ್ಕರ್ ಉದ್ಯಾನವನದಲ್ಲಿರುವ ಬೃಹತ್ ಅಂಬೇಡ್ಕರ್ ಪ್ರತಿಮೆಗೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗಡಿ ವಿಚಾರದಲ್ಲಿ ಎಂಇಎಸ್ ಮತ್ತೆ ಕ್ಯಾತೆ: ಬೆಳಗಾವಿಗೆ ಬರುವಂತೆ ಮಹಾರಾಷ್ಟ್ರ ಗಡಿ ಸಮನ್ವಯ ಸಚಿವರಿಗೆ ಪತ್ರ

ಕರ್ನಾಟಕ ಸರ್ಕಾರಕ್ಕೆ ನಾನು ಹೇಳಬಯಸುವುದೇನೆಂದರೆ, ನಾವು ಯಾವುದೇ ಸಂಘರ್ಷ ಮಾಡಲು ಬರುತ್ತಿಲ್ಲ. 865 ಮರಾಠಿ ಭಾಷಿಕ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಏನು ಸೌಲಭ್ಯ ನೀಡಬಹುದು ಎಂಬ ಬಗ್ಗೆ ಚರ್ಚಿಸಲು ತೆರಳುತ್ತಿದ್ದೇನೆ. 865 ಹಳ್ಳಿಗಳು ಸಮಾಧಾನದಿಂದ ಇದ್ದಾರಂದ್ರೆ ಅದರ ಲಾಭ ನಿಮಗೆ ಇದೆ. ಕರ್ನಾಟಕ ಸರ್ಕಾರದ ನಾಗರಿಕರಿಗೆ ನೀವು ಅವರಿಗೆ ಸೌಲಭ್ಯ ನೀಡಲೇಬೇಕಾಗುತ್ತೆ. ಆದ್ರೆ 865 ಮರಾಠಿ ಭಾಷಿಕ ಜನರನ್ನು ಮಹಾರಾಷ್ಟ್ರದ ನಾಗರಿಕರೆಂದು ನಾವು ಸೌಲಭ್ಯ ನೀಡ್ತೇವೆ. ಯಾವುದೇ ನಿಷೇಧ ಹೇರಿದರೂ ನಾನು ನಿಲ್ಲುವ ಮನುಷ್ಯನಲ್ಲ. ನನಗೆ ನೀವು ಧಮ್ಕಿ ನೀಡಬೇಡಿ. ನಾವು ಸಮನ್ವಯದಿಂದ ಜನರ ಮನಸ್ಥಿತಿ ತಿಳಿದು ಅವರಿಗೆ ಮಹಾರಾಷ್ಟ್ರ ಸರ್ಕಾರದ ನಿಲುವು ತಿಳಿಸಲು ತೆರಳುತ್ತಿದ್ದೇವೆ ಎಂದು ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್ ಹೇಳಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:31 am, Sat, 3 December 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು