AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್ಇ, ಅರಿಹಂತ ಆಸ್ಪತ್ರೆಗೆ ನೋಟಿಸ್

ಮಹಾರಾಷ್ಟ್ರ ಆರೋಗ್ಯ ‌ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್ಓ‌ ಡಾ.‌ ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದೂ ಸೂಚಿಸಲಾಗಿದೆ. ಈ ಮಧ್ಯೆ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಉದ್ಧಟತನ ತೋರಿದೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್ಇ, ಅರಿಹಂತ ಆಸ್ಪತ್ರೆಗೆ ನೋಟಿಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 12, 2024 | 9:46 AM

Share

ಬೆಳಗಾವಿ, ಜನವರಿ 12: ಮಹಾರಾಷ್ಟ್ರ ಸರ್ಕಾರದ ಆರೋಗ್ಯ ವಿಮೆ‌ ಜಾರಿ‌ (Health Insurance) ವಿಚಾರವಾಗಿ ಬೆಳಗಾವಿಯ ಕೆಎಲ್ಇ ಹಾಗೂ ಅರಿಹಂತ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಮಹಾರಾಷ್ಟ್ರ (Maharashtra) ಆರೋಗ್ಯ ‌ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್ಓ‌ ಡಾ.‌ ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ಯಾವ ಕಾನೂನಿಡಿ ಮಹಾರಾಷ್ಟ್ರ ಆರೋಗ್ಯ ವಿಮೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿದ್ದೀರಿ? ಅದರಡಿ ಇಲ್ಲಿಯ ವರೆಗೆ ‌ಚಿಕಿತ್ಸೆ ಪಡೆದವರ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿ ರೋಗಿಗಳ ವಿವಿರ ಸಮೇತ ಮಾಹಿತಿ ನೀಡಲು‌ ನೋಟಿಸ್​​ನಲ್ಲಿ ಸೂಚಿಸಲಾಗಿದೆ.

ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದೂ ಸೂಚಿಸಲಾಗಿದೆ. ಈ ಮಧ್ಯೆ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಉದ್ಧಟತನ ತೋರಿದೆ.

ಮತ್ತೆ ಮಹಾರಾಷ್ಟ್ರ ಉದ್ಧಟತನ

ಗಡಿ ವಿವಾದ ಇರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಮಂಗೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆರೋಗ್ಯ ಪರಿಹಾರ ನಿಧಿ ಯೋಜನೆ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿಯೂ ನಾವು ಮಾಹಿತಿ ನೀಡಿದ್ದೇವೆ. ಇದು ಗಡಿ ಭಾಗದ ಮರಾಠಿ ಭಾಷಿಕರಿಗಾಗಿ ಅನುಷ್ಠಾನ ಮಾಡ್ತಿದ್ದೇವೆ ಎಂದು ವಿಡಿಯೋ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಎಸ್ಕೇಪ್​

ಮುಖ್ಯಮಂತ್ರಿ ಏಕನಾಥ ಶಿಂಧೆ ಸೂಚನೆ ಮೇರೆಗೆ ಯೋಜನೆ ಜಾರಿ ಮಾಡಿದ್ದೇವೆ. ಬೆಳಗಾವಿಯ ಅರಿಹಂತ ಆಸ್ಪತ್ರೆಗೆ 1 ಲಕ್ಷ ರೂ. ಸಂದಾಯ ಮಾಡಿದ್ದೇವೆ. ಮಹಾರಾಷ್ಟ್ರ ಸಿಎಂ ಪರಿಹಾರ ನಿಧಿಯಿಂದ 1 ಲಕ್ಷ ಹಣ ಸಂದಾಯ ಮಾಡಲಾಗಿದೆ. ಇದನ್ನು ಕನ್ನಡ ಪರ ಹೋರಾಟಗಾರರು ವಿರೋಧಿಸಿದ್ದಾರೆ. ಅಲ್ಲದೇ ಬೆಳಗಾವಿ ಜಿಲ್ಲಾಡಳಿತ ನಮಗೆ ನೋಟಿಸ್​ ಜಾರಿಗೊಳಿಸಿದೆ. ಕರ್ನಾಟಕ ಸರ್ಕಾರದ ಈ ನಿರ್ಧಾರ ಖಂಡಿಸುತ್ತೇವೆ. ಗಡಿ ಭಾಗದ ಜನರಿಗೆ ಈ ಯೋಜನೆ ವರವಾಗಿದೆ. ಇದನ್ನು ಕರ್ನಾಟಕ ಸರ್ಕಾರ ವಿರೋಧಿಸಬಾರದೆಂದು ಮಂಗೇಶ್ ಚಿವಟೆ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು