AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್ಇ, ಅರಿಹಂತ ಆಸ್ಪತ್ರೆಗೆ ನೋಟಿಸ್

ಮಹಾರಾಷ್ಟ್ರ ಆರೋಗ್ಯ ‌ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್ಓ‌ ಡಾ.‌ ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದೂ ಸೂಚಿಸಲಾಗಿದೆ. ಈ ಮಧ್ಯೆ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಉದ್ಧಟತನ ತೋರಿದೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್ಇ, ಅರಿಹಂತ ಆಸ್ಪತ್ರೆಗೆ ನೋಟಿಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 12, 2024 | 9:46 AM

Share

ಬೆಳಗಾವಿ, ಜನವರಿ 12: ಮಹಾರಾಷ್ಟ್ರ ಸರ್ಕಾರದ ಆರೋಗ್ಯ ವಿಮೆ‌ ಜಾರಿ‌ (Health Insurance) ವಿಚಾರವಾಗಿ ಬೆಳಗಾವಿಯ ಕೆಎಲ್ಇ ಹಾಗೂ ಅರಿಹಂತ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಮಹಾರಾಷ್ಟ್ರ (Maharashtra) ಆರೋಗ್ಯ ‌ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್ಓ‌ ಡಾ.‌ ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ಯಾವ ಕಾನೂನಿಡಿ ಮಹಾರಾಷ್ಟ್ರ ಆರೋಗ್ಯ ವಿಮೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿದ್ದೀರಿ? ಅದರಡಿ ಇಲ್ಲಿಯ ವರೆಗೆ ‌ಚಿಕಿತ್ಸೆ ಪಡೆದವರ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿ ರೋಗಿಗಳ ವಿವಿರ ಸಮೇತ ಮಾಹಿತಿ ನೀಡಲು‌ ನೋಟಿಸ್​​ನಲ್ಲಿ ಸೂಚಿಸಲಾಗಿದೆ.

ನೋಟಿಸ್ ತಲುಪಿದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದೂ ಸೂಚಿಸಲಾಗಿದೆ. ಈ ಮಧ್ಯೆ, ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಉದ್ಧಟತನ ತೋರಿದೆ.

ಮತ್ತೆ ಮಹಾರಾಷ್ಟ್ರ ಉದ್ಧಟತನ

ಗಡಿ ವಿವಾದ ಇರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಮಂಗೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆರೋಗ್ಯ ಪರಿಹಾರ ನಿಧಿ ಯೋಜನೆ ಬಗ್ಗೆ ಈಗಾಗಲೇ ತಿಳಿಸಿದ್ದೇವೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿಯೂ ನಾವು ಮಾಹಿತಿ ನೀಡಿದ್ದೇವೆ. ಇದು ಗಡಿ ಭಾಗದ ಮರಾಠಿ ಭಾಷಿಕರಿಗಾಗಿ ಅನುಷ್ಠಾನ ಮಾಡ್ತಿದ್ದೇವೆ ಎಂದು ವಿಡಿಯೋ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಎಸ್ಕೇಪ್​

ಮುಖ್ಯಮಂತ್ರಿ ಏಕನಾಥ ಶಿಂಧೆ ಸೂಚನೆ ಮೇರೆಗೆ ಯೋಜನೆ ಜಾರಿ ಮಾಡಿದ್ದೇವೆ. ಬೆಳಗಾವಿಯ ಅರಿಹಂತ ಆಸ್ಪತ್ರೆಗೆ 1 ಲಕ್ಷ ರೂ. ಸಂದಾಯ ಮಾಡಿದ್ದೇವೆ. ಮಹಾರಾಷ್ಟ್ರ ಸಿಎಂ ಪರಿಹಾರ ನಿಧಿಯಿಂದ 1 ಲಕ್ಷ ಹಣ ಸಂದಾಯ ಮಾಡಲಾಗಿದೆ. ಇದನ್ನು ಕನ್ನಡ ಪರ ಹೋರಾಟಗಾರರು ವಿರೋಧಿಸಿದ್ದಾರೆ. ಅಲ್ಲದೇ ಬೆಳಗಾವಿ ಜಿಲ್ಲಾಡಳಿತ ನಮಗೆ ನೋಟಿಸ್​ ಜಾರಿಗೊಳಿಸಿದೆ. ಕರ್ನಾಟಕ ಸರ್ಕಾರದ ಈ ನಿರ್ಧಾರ ಖಂಡಿಸುತ್ತೇವೆ. ಗಡಿ ಭಾಗದ ಜನರಿಗೆ ಈ ಯೋಜನೆ ವರವಾಗಿದೆ. ಇದನ್ನು ಕರ್ನಾಟಕ ಸರ್ಕಾರ ವಿರೋಧಿಸಬಾರದೆಂದು ಮಂಗೇಶ್ ಚಿವಟೆ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ