AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೆಸರಿನಲ್ಲಿ ಬ್ಯಾಂಕ್​ನಿಂದ ಸಾಲ ಪಡೆದ ಸಕ್ಕರೆ ಕಾರ್ಖಾನೆ: 169 ಜನರ ಹೆಸರಲ್ಲಿ 8 ಲಕ್ಷ ಸಾಲ

ಕಾರ್ಖಾನೆಯ ಆಡಳಿತ ಮಂಡಳಿಯು ರೈತರು ಹಾಗೂ ಅಮಾಯಕರ ಮೇಲೆ ಸಾಲ ತೆಗೆದಿದೆ. 169 ಮಂದಿಯ ಹೆಸರಿನಲ್ಲಿ ₹8 ಲಕ್ಷದವರೆಗೆ ಸಾಲ ಪಡೆಯಲಾಗಿದೆ

ರೈತರ ಹೆಸರಿನಲ್ಲಿ ಬ್ಯಾಂಕ್​ನಿಂದ ಸಾಲ ಪಡೆದ ಸಕ್ಕರೆ ಕಾರ್ಖಾನೆ: 169 ಜನರ ಹೆಸರಲ್ಲಿ 8 ಲಕ್ಷ ಸಾಲ
ರೈತರು ದಾಖಲೆಗಳನ್ನು ಪ್ರದರ್ಶಿಸಿದರು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 21, 2022 | 3:01 PM

Share

ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಗೋಲಮಾಲ್ ನಡೆದಿದೆ ಎಂಬ ಮಾತುಗಳು ಕೇಳಿಬಂದಿವೆ. ಕಾರ್ಖಾನೆಯ ಆಡಳಿತ ಮಂಡಳಿಯು ರೈತರು ಹಾಗೂ ಅಮಾಯಕರ ಮೇಲೆ ಸಾಲ ತೆಗೆದಿದೆ. 169 ಮಂದಿಯ ಹೆಸರಿನಲ್ಲಿ ₹8 ಲಕ್ಷದವರೆಗೆ ಸಾಲ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಇಂಡಿಯಾದದಲ್ಲಿ ಸಾಲ ಪಡೆಯಲಾಗಿದೆ. ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ರೈತರು ಹಾಗೂ ವಂಚನೆಗೊಳಗಾದ ಅಮಾಯಕರು ಸಭೆ ನಡೆಸಿ ಆಗ್ರಹಿಸಿದರು. ಎಂ.ಕೆ.ಹುಬ್ಬಳ್ಳಿಯಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸಿದ ರೈತರು, ಪ್ರಕರಣದ ಸೂಕ್ತ ತನಿಖೆ ನಡೆಸಲು ದೂರು ನೀಡಬೇಕೆಂದು ತೀರ್ಮಾನಿಸಿದರು. ಹೋರಾಟಗಾರ್ತಿ ಜಯಶ್ರೀ ಗೂರಣ್ಣನವರ್, ರೈತ ಕಲ್ಲಪ್ಪ ನೇತೃತ್ವ ವಹಿಸಿದ್ದರು.

2017-18ರ ಕಬ್ಬಿನ ಬಾಕಿ ಬಿಲ್, ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ದಾಸ್ತಾನು ಗೋಲ್​ಮಾಲ್, ರೈತರು ಹಾಗೂ ಅಮಾಯಕರ ಹೆಸರಿನಲ್ಲಿ ಸಾಲ ತೆಗೆದುಕೊಳ್ಳಲಾಗಿದೆ‌ ಎಂದು ರೈತರ ದೂರು ನೀಡಿದ್ದಾರೆ. ರೈತರು ನೀಡಿದ ದೂರು ಆಧರಿಸಿ ಸರ್ಕಾರ ಹಾಗೂ ಆಯುಕ್ತರ ಕಚೇರಿಯಿಂದ ತನಿಖೆಗೆ ಆದೇಶ ನೀಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಕ್ಕರೆ ಆಯುಕ್ತರ ಕಚೇರಿ ಅಧಿಕಾರಿ ಶಿವಾನಂದ ಕಲಕೇರಿ ಟಿವಿ9ಗೆ ಮಾಹಿತಿ ನೀಡಿದರು.

ತನಿಖೆಗೆ ನಡೆಸಲೆಂದು ಜಿಲ್ಲಾ ಮಟ್ಟದ ಸಮಿತಿ ರೂಪಿಸಲಾಗಿದೆ. ತನಿಖೆ ನಡೆಸಿದ ನಂತರ ಅವರು ವರದಿ ನೀಡುತ್ತಾರೆ. ವರದಿ ಆಧರಿಸಿ ತಪ್ಪು ಮಾಡಿರುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಸಮಗ್ರ ತನಿಖೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಕಾಶ ಇರುತ್ತದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ರೈತರು ಅಲ್ಲದವರ ಹೆಸರ ಮೇಲೂ ಸಾಲ ತೆಗೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ರೈತರು ನೀಡಿದ ದೂರು ಮತ್ತು ಸಚಿವ ಶಂಕರ ಪಾಟೀಲ್ ಮುನೆನಕೊಪ್ಪ ಅವರ ಆದೇಶದ ಮೇರೆಗೆ ಹೆಚ್ಚಿನ ತನಿಖೆ ಮಾಡಿ ವಿವರವಾಗಿ ವರದಿ ನೀಡಲು ಆದೇಶ ಮಾಡಲಾಗದೆ ಎಂದು ಸಕ್ಕರೆ ಆಯುಕ್ತಾಲಯದ ಶಿವಾನಂದ ಕಲಕೇರಿ ತಿಳಿಸಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ