AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೆಸರಿನಲ್ಲಿ ಬ್ಯಾಂಕ್​ನಿಂದ ಸಾಲ ಪಡೆದ ಸಕ್ಕರೆ ಕಾರ್ಖಾನೆ: 169 ಜನರ ಹೆಸರಲ್ಲಿ 8 ಲಕ್ಷ ಸಾಲ

ಕಾರ್ಖಾನೆಯ ಆಡಳಿತ ಮಂಡಳಿಯು ರೈತರು ಹಾಗೂ ಅಮಾಯಕರ ಮೇಲೆ ಸಾಲ ತೆಗೆದಿದೆ. 169 ಮಂದಿಯ ಹೆಸರಿನಲ್ಲಿ ₹8 ಲಕ್ಷದವರೆಗೆ ಸಾಲ ಪಡೆಯಲಾಗಿದೆ

ರೈತರ ಹೆಸರಿನಲ್ಲಿ ಬ್ಯಾಂಕ್​ನಿಂದ ಸಾಲ ಪಡೆದ ಸಕ್ಕರೆ ಕಾರ್ಖಾನೆ: 169 ಜನರ ಹೆಸರಲ್ಲಿ 8 ಲಕ್ಷ ಸಾಲ
ರೈತರು ದಾಖಲೆಗಳನ್ನು ಪ್ರದರ್ಶಿಸಿದರು.
TV9 Web
| Edited By: |

Updated on: Jan 21, 2022 | 3:01 PM

Share

ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಗೋಲಮಾಲ್ ನಡೆದಿದೆ ಎಂಬ ಮಾತುಗಳು ಕೇಳಿಬಂದಿವೆ. ಕಾರ್ಖಾನೆಯ ಆಡಳಿತ ಮಂಡಳಿಯು ರೈತರು ಹಾಗೂ ಅಮಾಯಕರ ಮೇಲೆ ಸಾಲ ತೆಗೆದಿದೆ. 169 ಮಂದಿಯ ಹೆಸರಿನಲ್ಲಿ ₹8 ಲಕ್ಷದವರೆಗೆ ಸಾಲ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಇಂಡಿಯಾದದಲ್ಲಿ ಸಾಲ ಪಡೆಯಲಾಗಿದೆ. ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ರೈತರು ಹಾಗೂ ವಂಚನೆಗೊಳಗಾದ ಅಮಾಯಕರು ಸಭೆ ನಡೆಸಿ ಆಗ್ರಹಿಸಿದರು. ಎಂ.ಕೆ.ಹುಬ್ಬಳ್ಳಿಯಲ್ಲಿ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸಿದ ರೈತರು, ಪ್ರಕರಣದ ಸೂಕ್ತ ತನಿಖೆ ನಡೆಸಲು ದೂರು ನೀಡಬೇಕೆಂದು ತೀರ್ಮಾನಿಸಿದರು. ಹೋರಾಟಗಾರ್ತಿ ಜಯಶ್ರೀ ಗೂರಣ್ಣನವರ್, ರೈತ ಕಲ್ಲಪ್ಪ ನೇತೃತ್ವ ವಹಿಸಿದ್ದರು.

2017-18ರ ಕಬ್ಬಿನ ಬಾಕಿ ಬಿಲ್, ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ದಾಸ್ತಾನು ಗೋಲ್​ಮಾಲ್, ರೈತರು ಹಾಗೂ ಅಮಾಯಕರ ಹೆಸರಿನಲ್ಲಿ ಸಾಲ ತೆಗೆದುಕೊಳ್ಳಲಾಗಿದೆ‌ ಎಂದು ರೈತರ ದೂರು ನೀಡಿದ್ದಾರೆ. ರೈತರು ನೀಡಿದ ದೂರು ಆಧರಿಸಿ ಸರ್ಕಾರ ಹಾಗೂ ಆಯುಕ್ತರ ಕಚೇರಿಯಿಂದ ತನಿಖೆಗೆ ಆದೇಶ ನೀಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಕ್ಕರೆ ಆಯುಕ್ತರ ಕಚೇರಿ ಅಧಿಕಾರಿ ಶಿವಾನಂದ ಕಲಕೇರಿ ಟಿವಿ9ಗೆ ಮಾಹಿತಿ ನೀಡಿದರು.

ತನಿಖೆಗೆ ನಡೆಸಲೆಂದು ಜಿಲ್ಲಾ ಮಟ್ಟದ ಸಮಿತಿ ರೂಪಿಸಲಾಗಿದೆ. ತನಿಖೆ ನಡೆಸಿದ ನಂತರ ಅವರು ವರದಿ ನೀಡುತ್ತಾರೆ. ವರದಿ ಆಧರಿಸಿ ತಪ್ಪು ಮಾಡಿರುವವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಸಮಗ್ರ ತನಿಖೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಕಾಶ ಇರುತ್ತದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ರೈತರು ಅಲ್ಲದವರ ಹೆಸರ ಮೇಲೂ ಸಾಲ ತೆಗೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ರೈತರು ನೀಡಿದ ದೂರು ಮತ್ತು ಸಚಿವ ಶಂಕರ ಪಾಟೀಲ್ ಮುನೆನಕೊಪ್ಪ ಅವರ ಆದೇಶದ ಮೇರೆಗೆ ಹೆಚ್ಚಿನ ತನಿಖೆ ಮಾಡಿ ವಿವರವಾಗಿ ವರದಿ ನೀಡಲು ಆದೇಶ ಮಾಡಲಾಗದೆ ಎಂದು ಸಕ್ಕರೆ ಆಯುಕ್ತಾಲಯದ ಶಿವಾನಂದ ಕಲಕೇರಿ ತಿಳಿಸಿದರು.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್