AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಮೇಲೆ ಅನುಮಾನ; ಕುಡಿದ ಮತ್ತಿನಲ್ಲಿ ಸೀರೆಯಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ, ಸೂಸೈಡ್ ನಾಟಕವಾಡಿ ಜೈಲು ಸೇರಿದ ಪತಿ

ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ನಿವಾಸಿ ಪ್ರದೀಪ್, 15 ವರ್ಷದ ಹಿಂದೆ ಆಶಾ ಎಂಬುವವಳನ್ನು ಮದುವೆಯಾಗಿ ಸುಂದರ ಸಂಸಾರ ನಡೆಸಿದ್ದ. ಇವರ ದಾಂಪತ್ಯಕ್ಕೆ ಸಾಕ್ಷಿ ಎಂಬಂತೆ ಇಬ್ರು ಮಕ್ಕಳು ಇದ್ದಾರೆ.

ಹೆಂಡತಿ ಮೇಲೆ ಅನುಮಾನ; ಕುಡಿದ ಮತ್ತಿನಲ್ಲಿ ಸೀರೆಯಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ, ಸೂಸೈಡ್ ನಾಟಕವಾಡಿ ಜೈಲು ಸೇರಿದ ಪತಿ
ಹೆಂಡತಿ ಮೇಲೆ ಅನುಮಾನ; ಕುಡಿದ ಮತ್ತಿನಲ್ಲಿ ಸೀರೆಯಿಂದ ಕುತ್ತಿಗೆ ಬಿಗಿದು ಪತ್ನಿ ಹತ್ಯೆ, ಸೂಸೈಡ್ ನಾಟಕವಾಡಿ ಜೈಲು ಸೇರಿದ ಪತಿ
TV9 Web
| Edited By: |

Updated on: Feb 27, 2022 | 9:03 AM

Share

ಚಿಕ್ಕೋಡಿ: ಕಂಠ ಪೂರ್ತಿ ಕುಡಿದು ಬಂದ ಗಂಡನಿಂದಲೇ ಪತ್ನಿಯ ಕೊಲೆ(Murder) ಆಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿಯಲ್ಲಿ ನಡೆದಿದೆ. ಆತ ಎಂದಿನಂತೆ ಕಂಠ ಪೂರ್ತಿ ಎಣ್ಣೆ ಕುಡಿದು ಮನೆಗೆ ಬಂದಿದ್ದ ಕುಡಿದು ಬಂದು ತಾನಾಯ್ತು ತನ್ನ ನಶೆ ಗುಂಗಾಯ್ತು ಅಂತ ಸುಮ್ಮನೆ ಮಲಗಿದ್ರೆ ಆ ಸಂಸಾರದಲ್ಲಿ ಬೆಳಗ್ಗೆ ಎಲ್ಲವೂ ಸರಿಯಾಗಿಯೇ ಇರ್ತಿತ್ತು. ಆದ್ರೆ ನಶೆಮಾಡಿದ ತಪ್ಪಿಗೆ ಒಂದು ಜೀವವೇ ಬಲಿಯಾಗಿದೆ. ಪ್ರತಾಪ್ ಅಲಿಯಾಸ್ ಪ್ರದೀಪ್ ಕಾಂಬಳೆ ಹೆಂಡತಿಯನ್ನು ಕೊಂದ ಆರೋಪಿ.

ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ನಿವಾಸಿ ಪ್ರದೀಪ್, 15 ವರ್ಷದ ಹಿಂದೆ ಆಶಾ ಎಂಬುವವಳನ್ನು ಮದುವೆಯಾಗಿ ಸುಂದರ ಸಂಸಾರ ನಡೆಸಿದ್ದ. ಇವರ ದಾಂಪತ್ಯಕ್ಕೆ ಸಾಕ್ಷಿ ಎಂಬಂತೆ ಇಬ್ರು ಮಕ್ಕಳು ಇದ್ದಾರೆ. ಒಬ್ರೆ ದುಡಿದ್ರೆ ಜೀವನ ಮಾಡೋಕಾಗಲ್ಲ ಅಂತ ಗಂಡ ಹೆಂಡತಿ ಇಬ್ಬರೂ ಕೆಲಸಕ್ಕೆ ಹೋಗ್ತಿದ್ರಂತೆ. ಆದ್ರೆ ಕುಡಿತಕ್ಕೆ ದಾಸನಾಗಿದ್ದ ಪ್ರದೀಪ್ ಇತ್ತೀಚೆಗೆ ಹೆಂಡತಿ ಮೇಲೆ ಯಾವಾಗ್ಲೂ ಅನುಮಾನ ಪಡ್ತಿದ್ನಂತೆ. ಇದೇ ತಿಂಗಳ 24ರಂದು ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ನಶೆಯಲ್ಲಿದ್ದ ಪ್ರದೀಪ್ ಸೀರೆಯಿಂದ ಆಶಾ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಂದಿದ್ದಾನೆ

ರಾತ್ರಿ ಪತ್ನಿಯನ್ನು ಕೊಂದಿದ್ದ ಪ್ರದೀಪ್ಗೆ ಬೆಳಗ್ಗೆ ನಶೆ ಇಳಿದಿದೆ. ಬೆಳಗ್ಗೆ 4 ಗಂಟೆಗೆ ಸ್ನಾನ ಮಾಡಿ ಹೋಗಿದ್ದವನು ಮತ್ತೆ ಬೆಳಗ್ಗೆ 7 ಗಂಟೆಗೆ ವಾಪಸ್ ಬಂದು ಹೆಂಡತಿ ಸೂಸೈಡ್ ಮಾಡ್ಕೊಂಡಿದ್ದಾಳೆ ಅಂತ ಊರಿಗೆಲ್ಲ ಹಬ್ಬಿಸೋ ಪ್ರಯತ್ನ ಪಟ್ಟಿದ್ದಾನೆ. ಆದ್ರೆ ಪ್ರದೀಪನ ಮುಖದ ಮೇಲಿನ ಗಾಯ ನೋಡಿದ ಆಶಾ ತವರು ಮನೆಯವರು ಅನುಮಾನಗೊಂಡು ಪೊಲೀಸರಿಗೆ ನಡೆದ ವಿಷಯವನ್ನು ತಿಳಿಸಿದ್ದಾರೆ. ಅಲ್ಲಿಗೆ ಬಂದ ರಾಯಭಾಗ ಪೊಲೀಸರು ವಿಚಾರಣೆ ಮಾಡಿದಾಗ ಬಾಯಿಬಿಟ್ಟಿರಲಿಲ್ಲ ಯಾವಾಗ ಪೊಲೀಸ್ ಭಾಷೆಯಲ್ಲಿ ವಿಚಾರಣೆ ಮಾಡಿದ್ರೋ ಆಗ ನಡೆದ ಎಲ್ಲವನ್ನೂ ಪ್ರದೀಪ್ ಬಾಯಿ ಬಿಟ್ಟಿದ್ದಾನೆ. ಇನ್ನು ಮದುವೆಯಾದಾಗಿನಿಂದಲೂ ಜೊತೆಗಿದ್ದ ಆಶಾ ಗಂಡನ ಹಿಂಸೆಗೆ ಬೇಸತ್ತು ಐದು ವರ್ಷದಿಂದ ದೂರವಾಗಿದ್ಳಂತೆ. ಒಂದು ವರ್ಷದ ಹಿಂದೆ ಪ್ರದೀಪನೇ ಹುಡುಕಿ ಕರೆದುಕೊಂಡು ಬಂದಿದ್ನಂತೆ. ಒಟ್ಟಿನಲ್ಲಿ ಅನುಮಾನ ಹಾಗೂ ಕುಡಿತದ ಚಟದಿಂದ ಒಂದು ಸಂಸಾರವೇ ಹಾಳಾಗಿದೆ. ತಾಯಿ ಸಾವನ್ನಪ್ಪಿದ್ರೆ, ತಂದೆ ಜೈಲು ಸೇರಿದ್ದಾನೆ. ಮಾಡದ ತಪ್ಪಿಗೆ ಮಕ್ಕಳು ಅನಾಥರಾಗಿದ್ದಾರೆ.

ವರದಿ: ವಿನಾಯಕ್ ಗುರವ್, ಟಿವಿ9 ಚಿಕ್ಕೋಡಿ

ಇದನ್ನೂ ಓದಿ: ಬೆಂಗಳೂರಿನ ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಕಾರು ಬೈಕ್ ಮಧ್ಯೆ ಡಿಕ್ಕಿ, ಇಬ್ಬರು ಸವಾರರು ದುರ್ಮರಣ

ಬದಲಾಯ್ತು ಕಂಗನಾ ಮನಸ್ಸು, ಹುಸಿ ಆಯ್ತು ನಿರೀಕ್ಷೆ; ಆಲಿಯಾ ಸಿನಿಮಾಗೆ ಕಿರಿಕ್​ ಕ್ವೀನ್​ ಮೆಚ್ಚುಗೆ​

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ