ಬೆಳಗಾವಿ: 140 ಅಡಿ ಕಂದಕಕ್ಕೆ ಉರುಳಿ ಬಿದ್ದರೂ ಬದುಕಿ ಬಂದ ಯುವಕ; ಗೋಕಾಕ್ ಫಾಲ್ಸ್‌ನಲ್ಲಿ ಅಚ್ಚರಿ ಘಟನೆ

ಇಂದು ಬೆಳಗಿನಜಾವ 4 ಗಂಟೆಗೆ ಪ್ರದೀಪ್​ ಪ್ರಜ್ಞೆ ಬಂದ ಮೇಲೆ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಬಳಿಕ ಗೋಕಾಕ್​ನ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರ ತಂಡ ಪ್ರದೀಪನನ್ನು ರಕ್ಷಣೆ ಮಾಡಿದೆ. ಸದ್ಯ ಪ್ರದೀಪನನ್ನು ರಕ್ಷಿಸಿ ಗೋಕಾಕದ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಬೆಳಗಾವಿ: 140 ಅಡಿ ಕಂದಕಕ್ಕೆ ಉರುಳಿ ಬಿದ್ದರೂ ಬದುಕಿ ಬಂದ ಯುವಕ; ಗೋಕಾಕ್ ಫಾಲ್ಸ್‌ನಲ್ಲಿ ಅಚ್ಚರಿ ಘಟನೆ
ಗೋಕಾಕ್​ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರ ತಂಡ ಪ್ರದೀಪನನ್ನು ರಕ್ಷಣೆ ಮಾಡಿದೆ
Follow us
| Updated By: preethi shettigar

Updated on:Oct 03, 2021 | 9:24 AM

ಬೆಳಗಾವಿ:  ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ‌ ಬಿದ್ದರೂ ಯುವಕ ಪವಾಡಸದೃಶ್ಯ ಎಂಬಂತೆ ಬದುಕಿ ಬಂದಿದ್ದಾನೆ. ಸ್ನೇಹಿತರೊಂದಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್​ ಫಾಲ್ಸ್ ವೀಕ್ಷಣೆಗೆ ಬಂದಿದ್ದ ಪ್ರದೀಪ ಸಾಗರ್, ಆಯತಪ್ಪಿ ನಿನ್ನೆ (ಅಕ್ಟೋಬರ್​ 2) ಸಂಜೆ 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ. ಕೂಡಲೇ ಪ್ರದೀಪ್​ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಗೋಕಾಕ್​ ಪೊಲೀಸರು ಹಾಗೂ ಅಗ್ನಿಶಾಮಕ ದಳದ‌ ಸಿಬ್ಬಂದಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ. ಕತ್ತಲಾದ ಹಿನ್ನೆಲೆ ಕಾರ್ಯಾಚರಣೆ ‌‌ಸ್ಥಗಿತಗೊಳಿಸಿ ನಿನ್ನೆ ಸಿಬ್ಬಂದಿಗಳು ವಾಪಸ್ ತೆರಳಿದ್ದರು. 140 ಅಡಿ ಆಳದ ಕಂದಕಕ್ಕೆ ಬಿದ್ದ ಪ್ರದೀಪ ಪ್ರಜ್ಞೆ ಕಳೆದುಕೊಂಡಿದ್ದರು. ಹೀಗಾಗಿ ಇಡೀ ರಾತ್ರಿ ಕಂದಕದಲ್ಲೆ ಪ್ರದೀಪ ಸಾಗರ್ ಕಾಲ ಕಳೆಯಬೇಕಾಗಿತು.

ಆದರೆ ಇಂದು ಬೆಳಗಿನಜಾವ 4 ಗಂಟೆಗೆ ಪ್ರದೀಪ್​ ಪ್ರಜ್ಞೆ ಬಂದ ಮೇಲೆ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾರೆ. ಬಳಿಕ ಗೋಕಾಕ್​ದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರ ತಂಡ ಪ್ರದೀಪನನ್ನು ರಕ್ಷಣೆ ಮಾಡಿದೆ. ಸದ್ಯ ಪ್ರದೀಪನನ್ನು ರಕ್ಷಿಸಿ ಗೋಕಾಕದ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಬೆಳಗಾವಿಯ ನಗರದಲ್ಲಿ ವಾಸವಿದ್ದ ಪ್ರದೀಪ ಖಾಸಗಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ

120 ಅಡಿ ಆಳಕ್ಕೆ ಬಿದ್ದ ನಾಯಿ ರಕ್ಷಣೆ; ಶಿವಮೊಗ್ಗ ಜಿಲ್ಲೆಯ ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ

Published On - 9:24 am, Sun, 3 October 21

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ