AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಸಾವಿರ ರೂಪಾಯಿ ಸಾಲ ಮರು ಪಾವತಿಸಿಲ್ಲ ಎಂದು ಹಾಡಹಗಲೇ ವೃದ್ಧನ ಕತ್ತು ಸೀಳಿ ಬರ್ಬರ ಹತ್ಯೆ

Belagavi Crime: ಆತ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡ್ತಿದ್ದ. ಊರಲ್ಲಿ ಹೆಂಡತಿ ಮಕ್ಕಳನ್ನು ಬಿಟ್ಟು ತಂಗಿ ಮನೆ ಹತ್ತಿರ ಬಾಡಿಗೆ ಮನೆಯಲ್ಲಿ ವಾಸವಿದ್ದ. ಬೆಳ್ಳಂಬೆಳಗ್ಗೆ ಮನೆಯಿಂದ ಹೊರಗೆ ಹೋದವ ಜನನಿಬಿಡ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಹೆಣವಾಗಿ ಬಿದ್ದಿದ್ದ.

2 ಸಾವಿರ ರೂಪಾಯಿ ಸಾಲ ಮರು ಪಾವತಿಸಿಲ್ಲ ಎಂದು ಹಾಡಹಗಲೇ ವೃದ್ಧನ ಕತ್ತು ಸೀಳಿ ಬರ್ಬರ ಹತ್ಯೆ
ಮಹಾದೇವ ಮಾರುತಿ ಜಾಧವ್
TV9 Web
| Edited By: |

Updated on: Aug 03, 2021 | 8:30 AM

Share

ಬೆಳಗಾವಿ: ನಗರದ ವಡಗಾವಿಯ ಯಳ್ಳೂರು ಕ್ರಾಸ್ ಬಳಿ ಭೀಕರ ಹತ್ಯೆ ನಡೆದಿದೆ. ಮೂಲತಃ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ನಿವಾಸಿ ಮಹಾದೇವ ಮಾರುತಿ ಜಾಧವ್ ಎಂಬ 55 ವರ್ಷ ವಯಸ್ಸಿನ ವೃದ್ಧನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಈತ ಬೆಳಗಾವಿ ನಗರದಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡ್ತಿದ್ದ. ಹೆಂಡತಿ ಮಕ್ಕಳನ್ನು ಊರಲ್ಲೇ ಬಿಟ್ಟು ಬೆಳಗಾವಿಯ ಭರತ್ ನಗರದಲ್ಲಿ ತಂಗಿಯ ಮನೆಯ ಪಕ್ಕದಲ್ಲೇ ಇರೋ ಬಾಡಿಗೆ ರೂಮ್ನಲ್ಲಿದ್ದ. ತಾನಾಯ್ತು ತನ್ನ ಕೆಲಸ ಆಯ್ತು ಅಂತಾ ಇದ್ದ ಮಹಾದೇವ ಜಾಧವ್ ನಿನ್ನೆ ಕೆಲಸಕ್ಕೆ ರಜೆ ಇದೆ, ಹೊರಗೆ ಹೋಗಿ ಬರ್ತೀನಿ ಅಂತಾ ತಂಗಿಗೆ ಹೇಳಿ ತೆರಳಿದ್ದ. ಹೀಗೆ ಹೋಗಿದ್ದ ಆತ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ವಡಗಾವಿಯ ಯಳ್ಳೂರು ಕ್ರಾಸ್ ಬಳಿ ಆಟೋ ನಿಲ್ದಾಣದ ಹತ್ತಿರ ರಕ್ತದ ಮಡುವಿನಲ್ಲಿ ಹೆಣವಾಗಿ ಬಿದ್ದಿದ್ದ. ರಕ್ತದ ಮಡುವಿನಲ್ಲಿ ಬಿದ್ದವನನ್ನು ನೋಡಿ ಸಾರ್ವಜನಿಕರೇ ಶಾಕ್ ಆಗಿದ್ರು. ಬರ್ಬರ ಹತ್ಯೆ ಬಗ್ಗೆ ಮಹದೇವ ಜಾಧವ್ ಅಳಿಯ ಪೊಲೀಸರಿಗೆ ಕಂಪ್ಲೆಂಟ್ ಕೊಟ್ಟಿದ್ದು, ಪೊಲೀಸರು ತಕ್ಷಣ ತನಿಖೆ ಕೈಗೆತ್ತಿಕೊಂಡಿದ್ರು.

ಹೀಗೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಹತ್ಯೆ ನಡೆಸಿದ ಆರೋಪಿಯನ್ನು ಪತ್ತೆಹಚ್ಚಲು ಹೆಚ್ಚು ಸಮಯ ಬೇಕಾಗಿರಲಿಲ್ಲ. ಈ ಕೊಲೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಅನ್ನೋದು ಪ್ರಾಥಮಿಕ ತನಿಖೆಯಲ್ಲೇ ಗೊತ್ತಾಗಿದೆ. ಅಸಲಿಗೆ ಮಹಾದೇವ ಜಾಧವ್ ಜೊತೆ ಕೆಲಸ ಮಾಡ್ತಿದ್ದ ಸೂರಜ್ ಎಂಬಾತನ ಬಳಿ ಎರಡು ಸಾವಿರ ರೂಪಾಯಿ ಹಣ ಸಾಲ ಪಡೆದಿದ್ದನಂತೆ. ಎರಡು ಸಾವಿರ ರೂಪಾಯಿ ವಾಪಸ್ ನೀಡುವಂತೆ ಕೇಳಿದರೂ ಕೊಡ್ತಿರಲಿಲ್ವಂತೆ. ಇಂದು ಬೆಳಗ್ಗೆ ಯಳ್ಳೂರು ಕ್ರಾಸ್ ಬಳಿ ತೆರಳುತ್ತಿದ್ದ ಮಹಾದೇವ ಜಾಧವ್ ಬಳಿ ಸೂರಜ್ ತಾನು ನೀಡಿದ ಹಣ ವಾಪಾಸ್ ನೀಡುವಂತೆ ಕೇಳಿದ್ದಾನಂತೆ. ಈ ವೇಳೆ ಇಬ್ಬರ ಮಧ್ಯೆ ವಾಗ್ವಾದ ನಡೆದು ಜಗಳವಾಗಿದೆ. ಇದು ವಿಕೋಪಕ್ಕೆ ತಿರುಗಿ ಸೂರಜ್ ತನ್ನ ಬಳಿ ಇದ್ದ ರೇಡಿಯಮ್ ಕಟರ್‌ನಿಂದ ಮಹಾದೇವ ಜಾಧವ್ ಕತ್ತು ಸೀಳಿ ಪರಾರಿಯಾಗಿದ್ದಾನೆ. ಈ ವೇಳೆ ಸ್ಥಳದಲ್ಲೇ ಕುಸಿದು ಬಿದ್ದ ಮಹಾದೇವ ಜಾಧವ್ ವಿಲವಿಲ ಒದ್ದಾಡಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ.

ಅದೇನೇ ಇರಲಿ ಕೇವಲ 2ಸಾವಿರ ರೂಪಾಯಿಗಾಗಿ ವ್ಯಕ್ತಿಯ ಹತ್ಯೆ ನಡೆದಿರೋದು ಜನ ಬೆಚ್ಚಿಬೀಳುವಂತೆ ಮಾಡಿದೆ. ಹೆಂಡತಿ, ಮಕ್ಕಳನ್ನು ಹಳ್ಳಿಯಲ್ಲಿ ಬಿಟ್ಟು ನಗರಪ್ರದೇಶಕ್ಕೆ ಬಂದು ದುಡಿಯುತ್ತಿದ್ದ ಮನೆಯೊಡೆಯನ ಕಳೆದುಕೊಂಡ ಬಡ ಕುಟುಂಬ ಕಂಗಾಲಾಗಿದೆ.

ಇದನ್ನೂ ಓದಿ: ಫೀಲ್ಡಿಗಿಳಿದ ನೆಲಮಂಗಲ ಪೊಲೀಸರು: ಕಡಬಗೆರೆ ಸೀನ, ಬೆತ್ತನಗೆರೆ ಮಂಜ ಸೇರಿದಂತೆ ನೂರಾರು ರೌಡಿಗಳು ಅಂದರ್; 9 ಗಂಟೆಗೆ ಪರೇಡ್

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು