AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮನ ಅಮವಾಸ್ಯೆಯಂದೇ ಹರಿದ ನೆತ್ತರು, ಹೆಂಡ್ತಿ ಕಣ್ಣೆದುರಲ್ಲೇ ಗಂಡನ ಬರ್ಬರ ಹತ್ಯೆ

ಸಪ್ತಪದಿ ತುಳಿದು ಐದು ತಿಂಗಳು ಆಗಿತ್ತು ಅಷ್ಟೇ. ಆದ್ರೆ, ಭೀಮನ ಅಮಾವಾಸ್ಯೆಯಂದು ಯುವಕನ್ನು ಆತನ ಹೆಂಡ್ತಿ ಕಣ್ಣೆದುರಲ್ಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಭೀಮನ ಅಮವಾಸ್ಯೆಯಂದೇ ಹರಿದ ನೆತ್ತರು, ಹೆಂಡ್ತಿ ಕಣ್ಣೆದುರಲ್ಲೇ ಗಂಡನ ಬರ್ಬರ ಹತ್ಯೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ರಮೇಶ್ ಬಿ. ಜವಳಗೇರಾ|

Updated on: Jul 17, 2023 | 1:34 PM

Share

ಬೆಳಗಾವಿ, (ಜುಲೈ 17): ಹೆಂಡತಿ ಕಣ್ಣೆದುರಲ್ಲೇ ಗಂಡನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ. ಶಂಕರ್ ಜಗಮುತ್ತಿ(25) ಹತ್ಯೆಯಾದ ವ್ಯಕ್ತಿ. ಐದು ತಿಂಗಳ ಹಿಂದಷ್ಟೆ ಪ್ರಿಯಾಂಕ ಎಂಬ ಮಹಿಳೆ ಜತೆಗೆ ಮದುವೆಯಾಗಿದ್ದ ಶಂಕರ್, ಇಂದು (ಜುಲೈ 17) ಅಮಾವಾಸ್ಯೆ ಹಿನ್ನೆಲೆ ಇಂದು(ಜುಲೈ 17) ದೇವಸ್ಥಾನಕ್ಕೆ ಗಂಡ ಹೆಂಡತಿ ಜತೆಯಾಗಿ ಬಂದಿದ್ದರು. ಆದ್ರೆ, ದುರ್ವೈವ ಬನಸಿದ್ದೇಶ್ವರ ದೇವಸ್ಥಾನ ಆವರಣದಲ್ಲೇ ಹೆಂಡತಿ ಎದುರು ಶಂಕರ್​ನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಅಮವಾಸ್ಯೆ ಹಿನ್ನೆಲೆಯಲ್ಲಿ ಶಂಕರ್ ಜಗಮುತ್ತಿ ಹೆಂಡತಿ ಜೊತೆ ದೇವಸ್ಥಾನಕ್ಕೆ ಹೋಗಿದ್ದರು. ಆದ್ರೆ, ದೇಗುಲ ಪ್ರವೇಶ ಮಾಡುತ್ತಿದ್ದಂತೆಯೇ ದುಷ್ಕರ್ಮಿಗಳು ಹಿಂದಿನಿಂದ ಬಂದು ಮಾರಾಕಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಸಪ್ತಪದಿ ತುಳಿದು ಕೇವಲ ಐದು ತಿಂಗಳು ಆಗಿದ್ದು, ಇನ್ನೂ ಸಂಸಾರದ ಬಂಡಿ ಈಗ ತಾನೇ ಶುರುವಾಗಿತ್ತು. ಅಷ್ಟರಾಗಲೇ ದುಷ್ಕರ್ಮಿಗಳು ಅಂತ್ಯ ಮಾಡಿದ್ದಾರೆ. ಆದ್ರೆ, ಕೊಲೆ ಕಾರಣವೇನು? ಕೊಲೆ ಮಾಡಿದವರ್ಯಾರು? ಎನ್ನುವು ಮಾತ್ರ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಭೀಮನ ಅಮಾವಾಸ್ಯೆಯಂದು ಹೆಂಡತಿ ತನ್ನ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಆದ್ರೆ, 5 ತಿಂಗಳ ಹಿಂದೆ ಅಷ್ಟೇ ಮದ್ವೆಯಾಗಿದ್ದ ಈ ಮಹಿಳೆ ಭೀಮನ ಅಮಾವಾಸ್ಯೆ ದಿನದಂದೇ ತನ್ನ ಕಣ್ಣೆದುರಲ್ಲೇ ಗಂಡನನ್ನು ಕಳೆದುಕೊಂಡಿರುವುದು ದುರಂತ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?