AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮನ ಅಮವಾಸ್ಯೆಯಂದೇ ಹರಿದ ನೆತ್ತರು, ಹೆಂಡ್ತಿ ಕಣ್ಣೆದುರಲ್ಲೇ ಗಂಡನ ಬರ್ಬರ ಹತ್ಯೆ

ಸಪ್ತಪದಿ ತುಳಿದು ಐದು ತಿಂಗಳು ಆಗಿತ್ತು ಅಷ್ಟೇ. ಆದ್ರೆ, ಭೀಮನ ಅಮಾವಾಸ್ಯೆಯಂದು ಯುವಕನ್ನು ಆತನ ಹೆಂಡ್ತಿ ಕಣ್ಣೆದುರಲ್ಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಭೀಮನ ಅಮವಾಸ್ಯೆಯಂದೇ ಹರಿದ ನೆತ್ತರು, ಹೆಂಡ್ತಿ ಕಣ್ಣೆದುರಲ್ಲೇ ಗಂಡನ ಬರ್ಬರ ಹತ್ಯೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jul 17, 2023 | 1:34 PM

Share

ಬೆಳಗಾವಿ, (ಜುಲೈ 17): ಹೆಂಡತಿ ಕಣ್ಣೆದುರಲ್ಲೇ ಗಂಡನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ. ಶಂಕರ್ ಜಗಮುತ್ತಿ(25) ಹತ್ಯೆಯಾದ ವ್ಯಕ್ತಿ. ಐದು ತಿಂಗಳ ಹಿಂದಷ್ಟೆ ಪ್ರಿಯಾಂಕ ಎಂಬ ಮಹಿಳೆ ಜತೆಗೆ ಮದುವೆಯಾಗಿದ್ದ ಶಂಕರ್, ಇಂದು (ಜುಲೈ 17) ಅಮಾವಾಸ್ಯೆ ಹಿನ್ನೆಲೆ ಇಂದು(ಜುಲೈ 17) ದೇವಸ್ಥಾನಕ್ಕೆ ಗಂಡ ಹೆಂಡತಿ ಜತೆಯಾಗಿ ಬಂದಿದ್ದರು. ಆದ್ರೆ, ದುರ್ವೈವ ಬನಸಿದ್ದೇಶ್ವರ ದೇವಸ್ಥಾನ ಆವರಣದಲ್ಲೇ ಹೆಂಡತಿ ಎದುರು ಶಂಕರ್​ನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಅಮವಾಸ್ಯೆ ಹಿನ್ನೆಲೆಯಲ್ಲಿ ಶಂಕರ್ ಜಗಮುತ್ತಿ ಹೆಂಡತಿ ಜೊತೆ ದೇವಸ್ಥಾನಕ್ಕೆ ಹೋಗಿದ್ದರು. ಆದ್ರೆ, ದೇಗುಲ ಪ್ರವೇಶ ಮಾಡುತ್ತಿದ್ದಂತೆಯೇ ದುಷ್ಕರ್ಮಿಗಳು ಹಿಂದಿನಿಂದ ಬಂದು ಮಾರಾಕಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಸಪ್ತಪದಿ ತುಳಿದು ಕೇವಲ ಐದು ತಿಂಗಳು ಆಗಿದ್ದು, ಇನ್ನೂ ಸಂಸಾರದ ಬಂಡಿ ಈಗ ತಾನೇ ಶುರುವಾಗಿತ್ತು. ಅಷ್ಟರಾಗಲೇ ದುಷ್ಕರ್ಮಿಗಳು ಅಂತ್ಯ ಮಾಡಿದ್ದಾರೆ. ಆದ್ರೆ, ಕೊಲೆ ಕಾರಣವೇನು? ಕೊಲೆ ಮಾಡಿದವರ್ಯಾರು? ಎನ್ನುವು ಮಾತ್ರ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಭೀಮನ ಅಮಾವಾಸ್ಯೆಯಂದು ಹೆಂಡತಿ ತನ್ನ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಆದ್ರೆ, 5 ತಿಂಗಳ ಹಿಂದೆ ಅಷ್ಟೇ ಮದ್ವೆಯಾಗಿದ್ದ ಈ ಮಹಿಳೆ ಭೀಮನ ಅಮಾವಾಸ್ಯೆ ದಿನದಂದೇ ತನ್ನ ಕಣ್ಣೆದುರಲ್ಲೇ ಗಂಡನನ್ನು ಕಳೆದುಕೊಂಡಿರುವುದು ದುರಂತ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು