AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮನ ಅಮವಾಸ್ಯೆಯಂದೇ ಹರಿದ ನೆತ್ತರು, ಹೆಂಡ್ತಿ ಕಣ್ಣೆದುರಲ್ಲೇ ಗಂಡನ ಬರ್ಬರ ಹತ್ಯೆ

ಸಪ್ತಪದಿ ತುಳಿದು ಐದು ತಿಂಗಳು ಆಗಿತ್ತು ಅಷ್ಟೇ. ಆದ್ರೆ, ಭೀಮನ ಅಮಾವಾಸ್ಯೆಯಂದು ಯುವಕನ್ನು ಆತನ ಹೆಂಡ್ತಿ ಕಣ್ಣೆದುರಲ್ಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಭೀಮನ ಅಮವಾಸ್ಯೆಯಂದೇ ಹರಿದ ನೆತ್ತರು, ಹೆಂಡ್ತಿ ಕಣ್ಣೆದುರಲ್ಲೇ ಗಂಡನ ಬರ್ಬರ ಹತ್ಯೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jul 17, 2023 | 1:34 PM

Share

ಬೆಳಗಾವಿ, (ಜುಲೈ 17): ಹೆಂಡತಿ ಕಣ್ಣೆದುರಲ್ಲೇ ಗಂಡನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ. ಶಂಕರ್ ಜಗಮುತ್ತಿ(25) ಹತ್ಯೆಯಾದ ವ್ಯಕ್ತಿ. ಐದು ತಿಂಗಳ ಹಿಂದಷ್ಟೆ ಪ್ರಿಯಾಂಕ ಎಂಬ ಮಹಿಳೆ ಜತೆಗೆ ಮದುವೆಯಾಗಿದ್ದ ಶಂಕರ್, ಇಂದು (ಜುಲೈ 17) ಅಮಾವಾಸ್ಯೆ ಹಿನ್ನೆಲೆ ಇಂದು(ಜುಲೈ 17) ದೇವಸ್ಥಾನಕ್ಕೆ ಗಂಡ ಹೆಂಡತಿ ಜತೆಯಾಗಿ ಬಂದಿದ್ದರು. ಆದ್ರೆ, ದುರ್ವೈವ ಬನಸಿದ್ದೇಶ್ವರ ದೇವಸ್ಥಾನ ಆವರಣದಲ್ಲೇ ಹೆಂಡತಿ ಎದುರು ಶಂಕರ್​ನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಅಮವಾಸ್ಯೆ ಹಿನ್ನೆಲೆಯಲ್ಲಿ ಶಂಕರ್ ಜಗಮುತ್ತಿ ಹೆಂಡತಿ ಜೊತೆ ದೇವಸ್ಥಾನಕ್ಕೆ ಹೋಗಿದ್ದರು. ಆದ್ರೆ, ದೇಗುಲ ಪ್ರವೇಶ ಮಾಡುತ್ತಿದ್ದಂತೆಯೇ ದುಷ್ಕರ್ಮಿಗಳು ಹಿಂದಿನಿಂದ ಬಂದು ಮಾರಾಕಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಸಪ್ತಪದಿ ತುಳಿದು ಕೇವಲ ಐದು ತಿಂಗಳು ಆಗಿದ್ದು, ಇನ್ನೂ ಸಂಸಾರದ ಬಂಡಿ ಈಗ ತಾನೇ ಶುರುವಾಗಿತ್ತು. ಅಷ್ಟರಾಗಲೇ ದುಷ್ಕರ್ಮಿಗಳು ಅಂತ್ಯ ಮಾಡಿದ್ದಾರೆ. ಆದ್ರೆ, ಕೊಲೆ ಕಾರಣವೇನು? ಕೊಲೆ ಮಾಡಿದವರ್ಯಾರು? ಎನ್ನುವು ಮಾತ್ರ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಭೀಮನ ಅಮಾವಾಸ್ಯೆಯಂದು ಹೆಂಡತಿ ತನ್ನ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಆದ್ರೆ, 5 ತಿಂಗಳ ಹಿಂದೆ ಅಷ್ಟೇ ಮದ್ವೆಯಾಗಿದ್ದ ಈ ಮಹಿಳೆ ಭೀಮನ ಅಮಾವಾಸ್ಯೆ ದಿನದಂದೇ ತನ್ನ ಕಣ್ಣೆದುರಲ್ಲೇ ಗಂಡನನ್ನು ಕಳೆದುಕೊಂಡಿರುವುದು ದುರಂತ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ