AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮನ ಅಮವಾಸ್ಯೆಯಂದೇ ಹರಿದ ನೆತ್ತರು, ಹೆಂಡ್ತಿ ಕಣ್ಣೆದುರಲ್ಲೇ ಗಂಡನ ಬರ್ಬರ ಹತ್ಯೆ

ಸಪ್ತಪದಿ ತುಳಿದು ಐದು ತಿಂಗಳು ಆಗಿತ್ತು ಅಷ್ಟೇ. ಆದ್ರೆ, ಭೀಮನ ಅಮಾವಾಸ್ಯೆಯಂದು ಯುವಕನ್ನು ಆತನ ಹೆಂಡ್ತಿ ಕಣ್ಣೆದುರಲ್ಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಭೀಮನ ಅಮವಾಸ್ಯೆಯಂದೇ ಹರಿದ ನೆತ್ತರು, ಹೆಂಡ್ತಿ ಕಣ್ಣೆದುರಲ್ಲೇ ಗಂಡನ ಬರ್ಬರ ಹತ್ಯೆ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jul 17, 2023 | 1:34 PM

Share

ಬೆಳಗಾವಿ, (ಜುಲೈ 17): ಹೆಂಡತಿ ಕಣ್ಣೆದುರಲ್ಲೇ ಗಂಡನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ. ಶಂಕರ್ ಜಗಮುತ್ತಿ(25) ಹತ್ಯೆಯಾದ ವ್ಯಕ್ತಿ. ಐದು ತಿಂಗಳ ಹಿಂದಷ್ಟೆ ಪ್ರಿಯಾಂಕ ಎಂಬ ಮಹಿಳೆ ಜತೆಗೆ ಮದುವೆಯಾಗಿದ್ದ ಶಂಕರ್, ಇಂದು (ಜುಲೈ 17) ಅಮಾವಾಸ್ಯೆ ಹಿನ್ನೆಲೆ ಇಂದು(ಜುಲೈ 17) ದೇವಸ್ಥಾನಕ್ಕೆ ಗಂಡ ಹೆಂಡತಿ ಜತೆಯಾಗಿ ಬಂದಿದ್ದರು. ಆದ್ರೆ, ದುರ್ವೈವ ಬನಸಿದ್ದೇಶ್ವರ ದೇವಸ್ಥಾನ ಆವರಣದಲ್ಲೇ ಹೆಂಡತಿ ಎದುರು ಶಂಕರ್​ನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಅಮವಾಸ್ಯೆ ಹಿನ್ನೆಲೆಯಲ್ಲಿ ಶಂಕರ್ ಜಗಮುತ್ತಿ ಹೆಂಡತಿ ಜೊತೆ ದೇವಸ್ಥಾನಕ್ಕೆ ಹೋಗಿದ್ದರು. ಆದ್ರೆ, ದೇಗುಲ ಪ್ರವೇಶ ಮಾಡುತ್ತಿದ್ದಂತೆಯೇ ದುಷ್ಕರ್ಮಿಗಳು ಹಿಂದಿನಿಂದ ಬಂದು ಮಾರಾಕಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಸಪ್ತಪದಿ ತುಳಿದು ಕೇವಲ ಐದು ತಿಂಗಳು ಆಗಿದ್ದು, ಇನ್ನೂ ಸಂಸಾರದ ಬಂಡಿ ಈಗ ತಾನೇ ಶುರುವಾಗಿತ್ತು. ಅಷ್ಟರಾಗಲೇ ದುಷ್ಕರ್ಮಿಗಳು ಅಂತ್ಯ ಮಾಡಿದ್ದಾರೆ. ಆದ್ರೆ, ಕೊಲೆ ಕಾರಣವೇನು? ಕೊಲೆ ಮಾಡಿದವರ್ಯಾರು? ಎನ್ನುವು ಮಾತ್ರ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಭೀಮನ ಅಮಾವಾಸ್ಯೆಯಂದು ಹೆಂಡತಿ ತನ್ನ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಆದ್ರೆ, 5 ತಿಂಗಳ ಹಿಂದೆ ಅಷ್ಟೇ ಮದ್ವೆಯಾಗಿದ್ದ ಈ ಮಹಿಳೆ ಭೀಮನ ಅಮಾವಾಸ್ಯೆ ದಿನದಂದೇ ತನ್ನ ಕಣ್ಣೆದುರಲ್ಲೇ ಗಂಡನನ್ನು ಕಳೆದುಕೊಂಡಿರುವುದು ದುರಂತ.

Follow Us
Mahantesh Kurbet
Mahantesh Kurbet
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ