AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನಿಗೆ ಚಾಕು ಇರಿದ ಗೆಳೆಯ, ಚಿಕಿತ್ಸೆ ಫಲಿಸದೆ ಸಾವು

ವ್ಯಕ್ತಿಯೊಬ್ಬ ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಹುಲಿಯಾಳ ಗ್ರಾಮದಲ್ಲಿ ನಡೆದಿದೆ. ಆಗಸ್ಟ್ 9 ರಂದು ರಾತ್ರಿ ಚಾಕು ಇರಿಯಲಾಗಿತ್ತು. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಬೆಳಗಾವಿ: ತನ್ನ ಪತ್ನಿ ಮೇಲೆ ಕಣ್ಣು ಹಾಕಿದ ಸ್ನೇಹಿತನಿಗೆ ಚಾಕು ಇರಿದ ಗೆಳೆಯ, ಚಿಕಿತ್ಸೆ ಫಲಿಸದೆ ಸಾವು
ಕೊಲೆ ಆರೋಪಿ ಹುಲ್ಲೆಪ್ಪಾ ಕರೀಕಟ್ಟಿ ಮತ್ತು ಕೊಲೆಯಾದ ಅಭಿಷೇಕ್ ಬುಡ್ರಿ
Sahadev Mane
| Edited By: |

Updated on:Aug 14, 2023 | 4:10 PM

Share

ಬೆಳಗಾವಿ, ಆಗಸ್ಟ್ 14: ತನ್ನ ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬೆಳಗಾವಿ ತಾಲೂಕಿನ ಹುಲಿಯಾಳ ಗ್ರಾಮದಲ್ಲಿ ಆಗಸ್ಟ್ 9 ರಂದು ನಡೆದಿದ್ದ ಚಾಕು ಇರಿತ ಪ್ರಕರಣ ಇದಾಗಿದ್ದು, ಅಭಿಷೇಕ್ ಬುಡ್ರಿ (19) ಕೊಲೆಯಾದ (Muder) ಯುವಕನಾಗಿದ್ದಾನೆ.

ಹುಲ್ಲೆಪ್ಪಾ ಕರೀಕಟ್ಟಿ ಎಂಬವನ ಪತ್ನಿ ಮೇಲೆ ಅಭಿಷೇಕ್ ಬುಡ್ರಿ ಕಣ್ಣು ಹಾಕಿದ್ದನು. ಈ ಬಗ್ಗೆ ವಿಚಾರ ತಿಳಿದ ಹುಲ್ಲೆಪ್ಪಾ, ಆಗಸ್ಟ್ 9 ರಂದು ರಾತ್ರಿ ಬರ್ತ್​ಡೇ ಪಾರ್ಟಿ ಇದೆ ಅಂತಾ ಅಭಿಷೇಕ್​ನನ್ನು ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದನು.

ಇದನ್ನೂ ಓದಿ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಮತ್ತೆ ರೀ ಓಪನ್ ಮಾಡುತ್ತಾ ಸರ್ಕಾರ..?

ಚಾಕುವಿನಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್​ನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅಭಿಷೇಕ್ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಹುಲ್ಲೆಪ್ಪಾನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Mon, 14 August 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು